AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಹಿತಿ ಸೋರಿಕೆ: ರಾಜಭವನ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ ಡಿಜಿ-ಐಜಿಪಿಗೆ ಲೋಕಾಯುಕ್ತ ಪತ್ರ

ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಪತ್ರ ಸಂಘರ್ಷ ತಾರಕಕ್ಕೇರಿದೆ. ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ ಲೋಕಾಯುಕ್ತರು ಕಾನೂನು ಕ್ರಮ ಮತ್ತು ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಬರೆದಿದ್ದ ಮನವಿ ಪತ್ರ ಸೋರಿಕೆಯಾಗಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ವಿಚಾರವಾಗಿ ಮಹತ್ವದ ಬೆಳವಣಿಗೆ ನಡೆದಿದೆ.

ಮಾಹಿತಿ ಸೋರಿಕೆ: ರಾಜಭವನ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ ಡಿಜಿ-ಐಜಿಪಿಗೆ ಲೋಕಾಯುಕ್ತ ಪತ್ರ
ಲೋಕಾಯುಕ್ತ, ರಾಜಭವನ
ಪ್ರಸನ್ನ ಗಾಂವ್ಕರ್​
| Edited By: |

Updated on:Sep 27, 2024 | 11:45 AM

Share

ಬೆಂಗಳೂರು, ಸೆಪ್ಟೆಂಬರ್​ 27: ರಾಜ್ಯಪಾಲರು (Governor) ಹಾಗೂ ರಾಜ್ಯ ಸರ್ಕಾರ ನಡುವಿನ ಶೀತಲ ಸಮರ ತಾರಕಕ್ಕೇರಿದೆ. ರಾಜಭವನ ಸಚಿವಾಲಯದ (Raj Bhavan secretariat) ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ ಡಿಜಿ-ಐಜಿಪಿ ಮತ್ತು ಎಡಿಜಿಪಿಗೆ ಲೋಕಾಯುಕ್ತ (Lokayukta) ಎಸ್​ಐಟಿ ಐಜಿಪಿ ಚಂದ್ರಶೇಖರ್ ಪತ್ರ ಬರೆದಿದ್ದಾರೆ.

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಕೇಳಿಬಂದಿರುವ ಗಣಿ ನಿಯಮ ಉಲ್ಲಂಘನೆ ಆರೋಪದ ತನಿಖೆಗೆ ಅಥವಾ ಕಾನೂನು ಕ್ರಮ ತೆಗೆದುಕೊಳ್ಳಲು ಅನುಮತಿ ಕೋರಿ ಲೋಕಾಯುಕ್ತ 2023ರ ಸೆ.24ರಂದು ರಾಜ್ಯಪಾಲರಿಗೆ ಪ್ರಸ್ತಾವ ಸಲ್ಲಿಕೆ ಮಾಡಿತ್ತು. ನಿಯಮಗಳ ಪ್ರಕಾರ ನಾಲ್ಕು ತಿಂಗಳೊಳಗೆ ಕಡತ ವಿಲೇವಾರಿ ಮಾಡಬೇಕು. ಆದರೆ, ಎಂಟು ತಿಂಗಳಿನಿಂದ ಕಡತ ರಾಜ್ಯಪಾಲರ ಸಚಿವಾಲಯದಲ್ಲೇ ಬಾಕಿ ಉಳಿದಿದೆ. ಇದು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 19ರ ಪ್ರಕಾರ ಸ್ಪಷ್ಟ ಉಲ್ಲಂಘನೆಯಾಗಿದೆ.

ಇದನ್ನೂ ಓದಿ: ಮುಡಾ ಹಗರಣ ತನಿಖೆಗೆ ಸಿಬಿಐ ಎಂಟ್ರಿ ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್!

ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಕಾನೂನು ಕ್ರಮ ಅಥವಾ ತನಿಖೆಗೆ ಅನುಮತಿ ಕೋರಿ ಲೋಕಾಯುಕ್ತ ರಾಜ್ಯಪಾಲರಿಗೆ ಪತ್ರ ಬರೆದೆ ವಿಚಾರ ಆಗಸ್ಟ್ 7 ರಂದು ಮಾಧ್ಯಮಗಳಲ್ಲಿ ವರದಿ ಪ್ರಸಾರವಾಯ್ತು. ಸುದ್ದಿ ಪ್ರಸಾರವಾದ ಬಳಿಕ, ಅಗಸ್ಟ್​ 20 ರಂದು ರಾಜ್ಯಪಾಲರು, ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ಪತ್ರ ಬರೆದು ಮಾಹಿತಿ ಹೇಗೆ ಸೋರಿಕೆ ಆಯ್ತು ಅಂತ ವರದಿ ಕೇಳಿದ್ದರು. ಈ ಬಗ್ಗೆ ಆಂತರಿಕ ತನಿಖೆ ನಡೆಸಿದ ಲೋಕಾಯುಕ್ತ, ಸಂಸ್ಥೆಯಲ್ಲಿ ಯಾವುದೇ ಮಾಹಿತಿ ಸೋರಿಕೆ ಆಗಿಲ್ಲ. ಮಾಹಿತಿ ಸೋರಿಕೆಯಲ್ಲಿ ಎಸ್‌ಐಟಿ ಪಾತ್ರ ಇಲ್ಲ ಎಂದು ವರದಿ ನೀಡಿತ್ತು.

ಇದೀಗ, ಕಡತದ ಮಾಹಿತಿ ಹೇಗೆ ಸೋರಿಕೆ ಆಗಿದೆ ಅಂತ ತನಿಖೆ ನಡೆಸುವ ಅಗತ್ಯವಿದೆ. ಹೀಗಾಗಿ, ರಾಜಭವನ ಸಚಿವಾಲಯದ ಅಧಿಕಾರಿಗಳ ವಿರುದ್ಧ ತ‌ನಿಖೆ ನಡೆಸಲು ಅನುಮತಿ ಕೋರಿ ಲೋಕಾಯುಕ್ತ ಸ್ಪೆಷಲ್ ಎಸ್​ಐಟಿ ಐಜಿಪಿ ಎಂ. ಚಂದ್ರಶೇಖರ್ ಅವರು ಸೆಪ್ಟೆಂಬರ್​ 4 ರಂದು ಡಿಜಿ-ಐಜಿಪಿ ಅಲೋಕ್ ಮೋಹನ್ ಮತ್ತು ಹೆಚ್ಚುವರಿ ಪೊಲೀಸ್​ ಮಹಾನಿರ್ದೇಶಕ ಮನೀಶ್​ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:23 am, Fri, 27 September 24

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ