ಇನ್ಮುಂದೆ ಜಿ.ಪಂ ಸದಸ್ಯರೂ ಆಸ್ತಿ ಘೋಷಿಸಲೇಬೇಕು

ಶಾಸಕರು, ಸಂಸದರು ಚುನಾವಣೆ ವೇಳೆ ಆಸ್ತಿ ಘೋಷಣೆ ಮಾಡುವುದು ಕಡ್ಡಾಯ. ಆದ್ರೀಗ ಜಿಲ್ಲಾ ಪಂಚಾಯತ್ ಸದಸ್ಯರೂ ಇನ್ಮುಂದೆ ಆಸ್ತಿ ಘೋಷಣೆ ಮಾಡುವುದು ಕಡ್ಡಾಯವಾಗಿದೆ. ಜಿಲ್ಲಾ ಪಂಚಾಯತ್ ಸದಸ್ಯರೂ ಸಹ ಮತ ಪಡೆದು ಆಯ್ಕೆಯಾದವರು. ಹೀಗಾಗಿ ಲೋಕಾಯುಕ್ತ ಕಾಯ್ದೆ ಅನುಸಾರ ಆಸ್ತಿ ಘೋಷಣೆ ಮಾಡಬೇಕೆಂದು ರಾಜ್ಯದ 29 ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್ ನೀಡಿದೆ. ನಿಗದಿತ ಕಾಲಮಿತಿಯಲ್ಲಿ ಎಲ್ಲಾ ಜಿ.ಪಂ ಸದಸ್ಯರು ಆಸ್ತಿ ಘೋಷಣೆ ಮಾಡಬೇಕು. ಇಲ್ಲದಿದ್ದರೆ ಕಾನೂನು ಪ್ರಕಾರ ಕ್ರಮ ಎದುರಿಸಲು ಸಿದ್ಧರಾಗಿ ಎಂದು ಲೋಕಾಯುಕ್ತ […]

ಇನ್ಮುಂದೆ ಜಿ.ಪಂ ಸದಸ್ಯರೂ ಆಸ್ತಿ ಘೋಷಿಸಲೇಬೇಕು
ಸಾಧು ಶ್ರೀನಾಥ್​

Updated on: Oct 18, 2019 | 11:14 AM

ಶಾಸಕರು, ಸಂಸದರು ಚುನಾವಣೆ ವೇಳೆ ಆಸ್ತಿ ಘೋಷಣೆ ಮಾಡುವುದು ಕಡ್ಡಾಯ. ಆದ್ರೀಗ ಜಿಲ್ಲಾ ಪಂಚಾಯತ್ ಸದಸ್ಯರೂ ಇನ್ಮುಂದೆ ಆಸ್ತಿ ಘೋಷಣೆ ಮಾಡುವುದು ಕಡ್ಡಾಯವಾಗಿದೆ.

ಜಿಲ್ಲಾ ಪಂಚಾಯತ್ ಸದಸ್ಯರೂ ಸಹ ಮತ ಪಡೆದು ಆಯ್ಕೆಯಾದವರು. ಹೀಗಾಗಿ ಲೋಕಾಯುಕ್ತ ಕಾಯ್ದೆ ಅನುಸಾರ ಆಸ್ತಿ ಘೋಷಣೆ ಮಾಡಬೇಕೆಂದು ರಾಜ್ಯದ 29 ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್ ನೀಡಿದೆ. ನಿಗದಿತ ಕಾಲಮಿತಿಯಲ್ಲಿ ಎಲ್ಲಾ ಜಿ.ಪಂ ಸದಸ್ಯರು ಆಸ್ತಿ ಘೋಷಣೆ ಮಾಡಬೇಕು. ಇಲ್ಲದಿದ್ದರೆ ಕಾನೂನು ಪ್ರಕಾರ ಕ್ರಮ ಎದುರಿಸಲು ಸಿದ್ಧರಾಗಿ ಎಂದು ಲೋಕಾಯುಕ್ತ ಸಂಸ್ಥೆ ಖಡಕ್ ವಾರ್ನಿಂಗ್ ನೀಡಿದೆ.

ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಎಂಬುವವರ ದೂರಿನ ಮೇರೆಗೆ ಲೋಕಾಯುಕ್ತ ಈ ನೋಟಿಸ್ ನೀಡಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us