ರಾಜ್ಯದ 48 ಕಡೆ ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಬೇಟೆ: ಕಂತೆ ಕಂತೆ ನೋಟು, ರಾಶಿ ಆಭರಣ, ಆಸ್ತಿ ದಾಖಲೆ ಪತ್ರ ವಶಕ್ಕೆ

Lokayukta Raid: ರಾಜ್ಯದಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ​ದಿತ್ತು. ಬರೋಬ್ಬರಿ 200 ಅಧಿಕಾರಿಗಳ ತಂಡದಿಂದ, 48 ಕ್ಕೂ ಹೆಚ್ಚು ಕಡೆ ದಾಳಿ ಮಾಡಿ, ಅಕ್ರಮವಾಗಿ ಆಸ್ತಿ, ಹಣ ಗಳಿಸಿರುವವರಿಂದ ಕಂತೆ ಕಂತೆ ನೋಟು, ರಾಶಿ ರಾಶಿ ಚಿನ್ನಾಭರಣ ಸೇರಿದಂತೆ ಆಸ್ತಿ ಪತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜ್ಯದ 48 ಕಡೆ ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಬೇಟೆ: ಕಂತೆ ಕಂತೆ ನೋಟು, ರಾಶಿ ಆಭರಣ, ಆಸ್ತಿ ದಾಖಲೆ ಪತ್ರ ವಶಕ್ಕೆ
ಅಧಿಕಾರಿಗಳಿಂದ ಪರಿಶೀಲನೆ
Edited By:

Updated on: Aug 17, 2023 | 11:07 PM

ಬೆಂಗಳೂರು, ಆಗಸ್ಟ್​ 17: ರಾಜ್ಯದ 48 ಕಡೆಗಳಲ್ಲಿ ಗುರುವಾರ ಬೆಳಗ್ಗೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು (Lokayukta Raid) ದಾಳಿ ಮಾಡಿದ್ದಾರೆ. ಬೆಂಗಳೂರು ನಗರ, ಚಿತ್ರದುರ್ಗ, ಮೈಸೂರು, ತುಮಕೂರು, ಬೀದರ್, ಧಾರವಾಡ, ದಾವಣಗೆರೆ, ರಾಯಚೂರು, ಮಡಿಕೇರಿಯಲ್ಲಿ 200 ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿದ್ದು, ಕೊಟ್ಯಾಂತರ ರೂ. ಜಪ್ತಿ ಮಾಡಿದ್ದಾರೆ. ಬೆಂಗಳೂರಿನ 23 ಸ್ಥಳಗಳಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ಆದಾಯ ಮೀರಿ ಆಸ್ತಿ ಗಳಿಸಿದವರ ಮನೆಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಬೆಂಗಳೂರಿನ ಮಹದೇವಪುರ BBMP ಆರ್​ಐ ಆಗಿರುವ ನಟರಾಜ್​ ಮನೆ ಮೇಲೆ ದಾಳಿ ವೇಳೆ ಅಂದಾಜು 4.91 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ-ಪಾಸ್ತಿ ಪತ್ತೆ ಆಗಿದೆ.

ಆರ್‌ಐ ಎಸ್.ನಟರಾಜ್‌ಗೆ ಸೇರಿದ 4 ಸ್ಥಳಗಳಲ್ಲಿ ದಾಳಿ ಮಾಡಿದ್ದು, 3.91 ಕೋಟಿ ರೂ. ಸ್ಥಿರಾಸ್ತಿ, 1 ಕೋಟಿ ರೂ. ಚರಾಸ್ತಿ, ನಿಗದಿತ ಆದಾಯಕ್ಕಿಂತ ಶೇಕಡಾ 391ಕ್ಕಿಂತ ಹೆಚ್ಚು ಆಸ್ತಿ ಪತ್ತೆಯಾಗಿದೆ. ಗ್ರೇಡ್-2 ತಹಶೀಲ್ದಾರ್ ಶಿವರಾಜು ಮನೆ ಮೇಲೆ ದಾಳಿ ವೇಳೆ 3.50 ಕೋಟಿ ರೂ. ಸ್ಥಿರಾಸ್ತಿ, 65 ಲಕ್ಷ ರೂ. ಚರಾಸ್ತಿ ಸೇರಿದಂತೆ ಒಟ್ಟು 4.15 ಕೋಟಿ ರೂ. ಪತ್ತೆ ಆಗಿದೆ.

ಇದನ್ನೂ ಓದಿ: Lokayukta Raids: ಬೆಳ್ಳಂಬೆಳಗ್ಗೆ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ: ನಿದ್ದೆಗಣ್ಣಲ್ಲಿದ್ದ ಅಧಿಕಾರಿಗಳು ಶಾಕ್

ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮೀಪತಿಗೆ ಸೇರಿದ್ದ 6 ಸ್ಥಳಗಳಲ್ಲಿ ದಾಳಿ ನಡೆದಿದ್ದು, 2.80 ಕೋಟಿ ರೂ. ಸ್ಥಿರ ಆಸ್ತಿ, 1.15 ಕೋಟಿ ರೂ. ಚರ ಆಸ್ತಿ ಸೇರಿದಂತೆ ಒಟ್ಟು 3.95 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ.

ಚಿತ್ರದುರ್ಗದ ಎ.ಇ. ಕೆ.ಮಹೇಶ್

ಚರ ಆಸ್ತಿ: ಅಂದಾಜು ಮೌಲ್ಯ -20 ಲಕ್ಷ ರೂ.
ಸ್ಥಿರಾಸ್ತಿ: ಅಂದಾಜು ಮೌಲ್ಯ-88 ಲಕ್ಷ ರೂ.
ಒಟ್ಟು ಮೌಲ್ಯ-1 ಕೋಟಿ 8 ಲಕ್ಷ ರೂ.
ಅಂದಾಜು ಮೌಲ್ಯ 211% ಹೆಚ್ಚಳ

ತುಮಕೂರಿನ ಜಂಟಿ ನಿರ್ದೇಶಕ ಕೆ.ಎನ್. ನಾಗರಾಜು 

ದಾಳೆ ವೇಳೆ ಪತ್ತೆಯಾದ ಚರ ಆಸ್ತಿ ಅಂದಾಜು ಮೌಲ್ಯ 41 ಲಕ್ಷ ರೂ.
ದಾಳೆ ವೇಳೆ ಪತ್ತೆಯಾದ ಸ್ಥಿರಾಸ್ತಿ ಅಂದಾಜು ಮೌಲ್ಯ-3 ಕೋಟಿ ರೂ.
ಒಟ್ಟು ಮೌಲ್ಯ-3.41 ಕೋಟಿ ರೂ.
ಅಂದಾಜು ಮೌಲ್ಯವು 138.19% ಹೆಚ್ಚಳ

ಮಡಿಕೇರಿಯ ಕಂದಾಯ ಇಲಾಖೆ ಅಧಿಕಾರಿ ಡಾ. ನಂಜುಂಡೇಗೌಡ

ದಾಳೆ ವೇಳೆ ಪತ್ತೆಯಾದ ಚರ ಆಸ್ತಿಗಳ ಅಂದಾಜು ಮೌಲ್ಯ – 98 ಲಕ್ಷಕ್ಕೂ ಅಧಿಕ
ದಾಳಿ ವೇಳೆ ಪತ್ತೆಯಾದ ಸ್ಥಿರ ಆಸ್ತಿಗಳ ಅಂದಾಜು ಮೌಲ್ಯ – 2,55,00,000
ಒಟ್ಟು ಮೌಲ್ಯ-3,53,43,5 18
ಅಂದಾಜು ಮೌಲ್ಯ 243.20% ಹೆಚ್ಚಳ

ಕೊಡಗಿನ ಎ.ಇ ಕೆ.ಕೆ. ರಘುಪತಿ

ದಾಳೆ ವೇಳೆ ಪತ್ತೆಯಾದ ಚರ ಆಸ್ತಿಗಳ ಅಂದಾಜು ಮೌಲ್ಯ: 1,32 ಕೋಟಿ ರೂ.
ದಾಳಿ ವೇಳೆ ಪತ್ತೆಯಾದ ಸ್ಥಿರ ಆಸ್ತಿಗಳ ಅಂದಾಜು ಮೌಲ್ಯ: 2.34 ಕೋಟಿ ರೂ.
ಒಟ್ಟು ಮೌಲ್ಯ-3.66 ಕೋಟಿ ರೂ.
ಅಂದಾಜು ಮೌಲ್ಯ 205% ಹೆಚ್ಚಳ

ದಾವಣಗೆರೆಯ ಎಸ್.ಸತೀಶ್

ದಾಳಿ ವೇಳೆ ಪತ್ತೆಯಾದ ಚರ ಆಸ್ತಿ ಅಂದಾಜು ಮೌಲ್ಯ: 46 ಲಕ್ಷ ರೂ.
ದಾಳಿ ವೇಳೆ ಪತ್ತೆಯಾದ ಸ್ಥಿರಾಸ್ತಿ ಅಂದಾಜು ಮೌಲ್ಯ: 1.16 ಕೋಟಿ ರೂ.
ಒಟ್ಟು ಮೌಲ್ಯ: l.62 ಕೋಟಿ ರೂ.

ಕೊಪ್ಪಳ ವ್ಯವಸ್ಥಾಪಕರು, ನಿರ್ಮಿತಿ ಕೇಂದ್ರದ ಮಂಜುನಾಥ 

ದಾಳಿ ವೇಳೆ ಪತ್ತೆಯಾದ ಚರ ಆಸ್ತಿಗಳ ಅಂದಾಜು ಮೌಲ್ಯ: 57 ಲಕ್ಷ ರೂ.
ದಾಳಿ ವೇಳೆ ಪತ್ತೆಯಾದ ಸ್ಥಿರಾಸ್ತಿಗಳ ಅಂದಾಜು ಮೌಲ್ಯ: 2.22 ಕೋಟಿ ರೂ.
ಒಟ್ಟು ಮೌಲ್ಯ: 2.79 ಕೋಟಿ ರೂ.
ಅಂದಾಜು ಮೌಲ್ಯವು 136 ಹೆಚ್ಚಳ

ಬೀದರ್​ನ ಪೊಲೀಸ್ ಪೇದೆ ವಿಜಯಕುಮಾರ್

ದಾಳಿ ವೇಳೆ ಪತ್ತೆಯಾದ ಚರ ಆಸ್ತಿಗಳ ಅಂದಾಜು ಮೌಲ್ಯ: 54 ಲಕ್ಷ ರೂ.
ದಾಳಿ ವೇಳೆ ಪತ್ತೆಯಾದ ಸ್ಥಿರಾಸ್ತಿಗಳ ಅಂದಾಜು ಮೌಲ್ಯ: 1.26 ಕೋಟಿ ರೂ.
ಒಟ್ಟು ಮೌಲ್ಯ: 1.80 ಕೋಟಿ ರೂ.
ಅಂದಾಜು ಮೌಲ್ಯವು 136 ರಷ್ಟು ಹೆಚ್ಚಳ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:06 pm, Thu, 17 August 23

Loading...
Unable to load recommendations.
Follow Us