AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಅಧಿಕಾರಿ ಬಸವರಾಜ್ ಮಾಗಿ ನಿವಾಸದಲ್ಲಿ 2 ಹುಲಿ ಉಗುರು, 5 ತಲವಾರ್ ಪತ್ತೆ

ಬೆಂಗಳೂರಿನಲ್ಲಿ 5 ಕಡೆ, ಕಲಬುರಗಿಯಲ್ಲಿ 4 ಕಡೆ ಹೀಗೆ ಬಿಬಿಎಂಪಿ ಕಂದಾಯ ಅಧಿಕಾರಿ ಬಸವರಾಜ ಮಾಗಿಗೆ ಸಂಬಂಧಿಸಿದಂತೆ ಒಟ್ಟು 9 ಕಡೆ ಲೋಕಾಯುಕ್ತ ದಾಳಿ ಮಾಡಿದೆ. ಈ ವೇಳೆ ಬೆಂಗಳೂರಿನ ನಿವಾಸದಲ್ಲಿ ಚಿನ್ನಾಭರಣಗಳು ಸೇರಿದಂತೆ 5 ತಲವಾರ್, 3 ಚಾಕು ಮತ್ತು 2 ಹುಲಿ ಉಗುರು ಪತ್ತೆ ಆಗಿದ್ದು, ಅಧಿಕಾರಿಗಳೇ ಶಾಕ್​ ಆಗಿದ್ದಾರೆ.

ಬಿಬಿಎಂಪಿ ಅಧಿಕಾರಿ ಬಸವರಾಜ್ ಮಾಗಿ ನಿವಾಸದಲ್ಲಿ 2 ಹುಲಿ ಉಗುರು, 5 ತಲವಾರ್ ಪತ್ತೆ
ಬಿಬಿಎಂಪಿ ಅಧಿಕಾರಿ ಬಸವರಾಜ್ ಮಾಗೆ ನಿವಾಸದಲ್ಲಿ 5 ತಲವಾರ್, 3 ಚಾಕು, 2 ಹುಲಿ ಉಗುರು ಪತ್ತೆ
ಶಿವಪ್ರಸಾದ್​ ಬಿ.
| Edited By: |

Updated on: Jul 11, 2024 | 7:19 PM

Share

ಬೆಂಗಳೂರು, ಜುಲೈ 11: ಇಂದು ಬೆಳ್ಳಂ ಬೆಳಿಗ್ಗೆ ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ಮಾಡಿದ್ದರು. ಇನ್ನು ಕೆಲ ಅಧಿಕಾರಿಗಳ ಮನೆಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಈ ಮಧ್ಯೆ ಬಿಬಿಎಂಪಿ (BBMP) ಕೆಂಗೇರಿ ವಿಭಾಗದ ಕಂದಾಯ ಅಧಿಕಾರಿ ಬಸವರಾಜ ಮಾಗಿ ನಿವಾಸದ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಒಂದು ಕ್ಷಣ ಶಾಕ್​ ಆಗಿದೆ. ನಗರದ ಕುಮಾರಪಾರ್ಕ್‌ನಲ್ಲಿರುವ ಮೋತಿ ಅಪಾರ್ಟ್‌ಮೆಂಟ್​ನ ಫ್ಲ್ಯಾಟ್‌ನಲ್ಲಿ ಚಿನ್ನ ಆಭರಣಗಳ ಜೊತೆಗೆ 5 ತಲವಾರ್, 3 ಚಾಕು ಮತ್ತು 2 ಹುಲಿ ಉಗುರು ಪತ್ತೆ ಆಗಿವೆ.

ದುಬಾರಿ ಮೌಲ್ಯದ 7 ಲೈಟರ್​ಗಳು ಕೂಡ ಪತ್ತೆಯಾಗಿದ್ದು, ಬಸವರಾಜ ಮಾಗಿ ವಿಲಾಸಿ ಜೀವನ ನಡೆಸುತ್ತಿದ್ದರು. ಸದ್ಯ ಚಿನ್ನ, 2 ಹುಲಿ ಉಗುರು ಜಪ್ತಿ ಮಾಡಿರುವ ಅರಣ್ಯಾಧಿಕಾರಿಗಳು ಕೊಂಡೊಯ್ದಿದ್ದಾರೆ. ಎರಡು ಹುಲಿ ಉಗುರು ಪತ್ತೆ ಬಗ್ಗೆ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಲಾದೆ. ವಲಯ ಅರಣ್ಯಾಧಿಕಾರಿ ತ್ಯಾಗರಾಜ್‌ ಮತ್ತು ಅಧಿಕಾರಿಗಳ ತಂಡ ಫ್ಲ್ಯಾಟ್‌ಗೆ ಬಂದು ಎರಡು ಹುಲಿ ಉಗುರು ಸೀಜ್‌ ಮಾಡಿದ್ದಾರೆ.

ಇದನ್ನೂ ಓದಿ: Lokayukta Raid: ಕರ್ನಾಟಕದಾದ್ಯಂತ ಬೆಳ್ಳಂಬೆಳಗ್ಗೆಯೇ 56 ಕಡೆ ಲೋಕಾಯುಕ್ತ ದಾಳಿ

ಹುಲಿ ಉಗುರಿನ ನೈಜತೆ ಪರೀಕ್ಷೆಗೆ ಮಲ್ಲೇಶ್ವರಂನ ಅರಣ್ಯ ಭವನಕ್ಕೆ ತೆಗೆದುಕೊಂಡು ಹೋದಿದ್ದಾರೆ. ಪರಿಕ್ಷೆ ವೇಳೆ ಅಸಲಿ ಹುಲಿ ಉಗುರು ಎಂಬುದು ಸಾಬೀತಾದರೆ ಬಸವರಾಜ್ ಮಾಗಿಗೆ ಮತ್ತಷ್ಟು ಸಂಕಷ್ಟ ಸಾಧ್ಯತೆ ಇದೆ.

ಜೈಲುಪಾಲಾಗಿದ್ದ ಬಿಬಿಎಂಪಿ ಅಧಿಕಾರಿ

ಬಸವರಾಜ್ ಮಾಗಿ ಒಂದೂವರೆ ತಿಂಗಳ ಹಿಂದೆ ಜೈಲಿಂದ ಹೊರಗಡೆ ಆಗಿ ಬಂದಿದ್ದರು. ನಕಲಿ ದಾಖಲಾತಿ ಸೃಷ್ಟಿಸಿದ ಕೇಸ್​ನಲ್ಲಿ ಜೈಲುಪಾಲಾಗಿದ್ದು, ಬೇಲ್ ಮೇಲೆ ಬಿಡುಗಡೆಯಾಗಿದ್ದಾರೆ.

ಕಲಬುರಗಿಯಲ್ಲಿ ಕೋಟಿ ಮೌಲ್ಯದ ಮನೆ

ಬೆಂಗಳೂರಿನಲ್ಲಿ 5 ಕಡೆ, ಕಲಬುರಗಿಯಲ್ಲಿ 4 ಕಡೆ ಹೀಗೆ ಬಸವರಾಜ ಮಾಗಿಗೆ ಸಂಬಂಧಿಸಿದಂತೆ ಒಟ್ಟು 9 ಕಡೆ ಲೋಕಾ ದಾಳಿ ಮಾಡಿದೆ. ಕಲಬುರಗಿಯ ಬಡೇಪುರ, ಪಿ&ಟಿ ಕಾಲೋನಿ, ಪಾಳಾ ಗ್ರಾಮದ ಮನೆ ಹೊಂದಿದ್ದಾರೆ. ಹೀಗಾಗಿ ಅವರಿಗೆ ಸೇರಿದ ಹಲವು ಕಡೆ ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡಲಾಗಿದೆ.

ಇದನ್ನೂ ಓದಿ: ವಿಜಯಪುರ, ಕಲಬುರಗಿಯಲ್ಲಿ ಲೋಕಾಯುಕ್ತ ದಾಳಿ: ಇಬ್ಬರು ಅಧಿಕಾರಿಗಳ ಬಂಧನ

ಸರ್ಕಾರಿ ಸೇವೆಗೆ ಸೇರಿದ ಕೆಲವೇ ವರ್ಷಗಳಲ್ಲಿ ಕೋಟ್ಯಂತರ ಆಸ್ತಿ ಸಂಗ್ರಹ ಮಾಡಿದ್ದಾರೆ. ನಕಲಿ ದಾಖಲಾತಿ ಸೃಷ್ಟಿ ಆರೋಪದಲ್ಲಿ ಹಿಂದೆ ಬಿಬಿಎಂಪಿಯಿಂದ ಅಮಾನತು ಮಾಡಲಾಗಿತ್ತು. ತಾಯಿ ಹೆಸರಲ್ಲಿ ಸುಮಾರು 50 ಎಕರೆಯ ಕೋಟಿ ಕೋಟಿ ಬೆಲೆ ಬಾಳುವ ಜಮೀನು ಖರೀದಿ ಮಾಡಿದ್ದರು. ಕಲಬುರಗಿಯಲ್ಲಿ ಕೋಟಿ ಮೌಲ್ಯದ 4 ಅಂತಸ್ತಿನ ಮನೆ ಅಲ್ಲದೇ ಇನ್ನೂ ಹಲವು ಕಡೆ ಆಸ್ತಿ ಹೊಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು