AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ 55 ಕಡೆ ಲೋಕಾಯುಕ್ತ ದಾಳಿ, ಅಧಿಕಾರಿಗಳ ಮನೆಯಲ್ಲಿ ತಲಾಶ್​

ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 12 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ಬೆಂಗಳೂರು ನಗರದ ಆರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು, ಶಿವಮೊಗ್ಗ ಜಿಲ್ಲೆಯ ಇಬ್ಬರು, ಯಾದಗಿರಿ, ತುಮಕೂರಿನಲ್ಲಿ ತಲಾ ಓರ್ವ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಕರ್ನಾಟಕದ 55 ಕಡೆ ಲೋಕಾಯುಕ್ತ ದಾಳಿ, ಅಧಿಕಾರಿಗಳ ಮನೆಯಲ್ಲಿ ತಲಾಶ್​
ಲೋಕಾಯುಕ್ತ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jul 19, 2024 | 8:20 AM

Share

ಬೆಂಗಳೂರು, ಜುಲೈ 19: ಶುಕ್ರವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ (Lokayukta) ಕರ್ನಾಟಕಾದ್ಯಂತ ದಾಳಿ ಮಾಡಿದ್ದಾರೆ. 12 ಜನ ಅಧಿಕಾರಿಗಳಿಗೆ ಸೇರಿದ 55 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ತಪಾಸಣೆ ನಡೆಸಿದ್ದಾರೆ. ಬೆಂಗಳೂರು (Bengaluru) ನಗರದ ಆರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು, ಶಿವಮೊಗ್ಗ ಜಿಲ್ಲೆಯ ಇಬ್ಬರು, ಯಾದಗಿರಿ, ತುಮಕೂರಿನಲ್ಲಿ ತಲಾ ಓರ್ವ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಲೋಕಾಯುಕ್ತ ದಾಳಿ

  1. ತುಮಕೂರು- ಕೆಐಎಡಿಬಿ ಇಲಾಖೆ ಆಪರೇಟಿಂಗ್ ಆಫೀಸರ್
  2. ಯಾದಗಿರಿ- ಬಲವಂತ್ ಜಿಲ್ಲಾ ಪಂಚಾಯತ್​ ಯಾದಗಿರಿ ಪ್ರಾಜೆಕಟ್​
  3. ಬೆಂಗಳೂರು ಗ್ರಾ- ಆರ್ ಸಿದ್ದಪ್ಪ ಸೀನಿಯರ್​ ಪಶುವೈದ್ಯ- ದೊಡ್ಡಬೈಲವಂಗಲ ದೊಡ್ಡಬಳ್ಳಾಪುರ
  4. ಬೆಂಗಳೂರು ಗ್ರಾ- ಕೆ ನರಸಿಂಹ ಮೂರ್ತಿ ಪೌರಾಡಳಿತ ಆಯುಕ್ತ ಹೆಬ್ಬಗೋಡಿ
  5. ಬೆಂಗಳೂರು ನಗರ- ಬಿ ವಿ ರಾಜ FDA KDB LAND acquisition
  6. ಬೆಂಗಳೂರು ನಗರ- ರಮೇಶ್ ಕುಮಾರ್ ಜಾಯಿಂಟ್​ ಕಮಿಷನರ್ ಕಮಷಿಯಲ್ ಟ್ಯಾಕ್ಸ್​
  7. ಬೆಂಗಳೂರು ನಗರ- ಅಥ್ತಾರ್ ಅಲಿ- ಡೆಪ್ಯೂಟಿ ಕಂಟ್ರೋಲರ್​ ಲೀಗಲ್​ ಭೂ ವಿಜ್ಞಾನ
  8. ಶಿವಮೊಗ್ಗ- ನಾಗೇಶ್​ ಬಿ- ಅಧ್ಯಕ್ಷ ಅಂತರಗಂಗೆ ಗ್ರಾ.ಪಂ. ಭದ್ರವತಿ
  9. ಶಿವಮೊಗ್ಗ- ಪ್ರಕಾಶ್​​ ಡೆಪ್ಯೂಟಿ ಡೈರೆಕ್ಟರ್​ ಆರ್ಟಿಕಲ್ಚರ್​ ಶಿವಮೊಗ್ಗ
  10. ಬೆಂಗಳೂರು ನಗರ-ಚೇತನ್ ಕುಮಾರ್ ಕಾರ್ಮಿಕ ಇಲಾಖಾಧಿಕಾರಿ ಮಂಡ್ಯ ವಿಭಾಗ
  11. ಬೆಂಗಳೂರು ನಗರ – ಆನಂದ್ ಸಿಎಲ್​- ಆಯುಕ್ತ ಮಂಗಳೂರು ಮಹಾನಗರ ಪಾಲೀಕೆ
  12. ಬೆಂಗಳೂರ ನಗರ- ಮಂಜುನಾಥ್​ TR- ಫಸ್ಟ್​ ಡಿವಿಜನ್​ ಅಸಿಸ್ಟೆಂಟ್​ (FDA) ಬೆಂಗಳೂರು ಉತ್ತರ ವಿಭಾಗ, ಈ ಎಲ್ಲ ಅಧಿಕಾರಿಗಳಿಗೆ ಸಂಬಂಧಿಸಿದ 55 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ತುಮಕೂರಿನ ಕೆಐಎಡಿಬಿ ಅಪರ ನಿರ್ದೇಶಕ ಸಿ.ಟಿ ಮುದ್ದುಕುಮಾರ್ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಸಿ.ಟಿ ಮುದ್ದುಕುಮಾರ್ ಅವರಿಗೆ ಸೇರಿದ ಒಟ್ಟು ಏಳು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಸಿ.ಟಿ ಮುದ್ದುಕುಮಾರ್ ಬೆಂಗಳೂರಿನ ನಾಗರಭಾವಿಯ ಎರಡನೇ ಹಂತದಲ್ಲಿ ವಾಸವಾಗಿದ್ದಾರೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಖನಿಜ ಭವನದಲ್ಲಿ ಕಚೇರಿ ಇದೆ.

ತುಮಕೂರು ನಗರದ ಬನಶಂಕರಿ ನಗರದಲ್ಲಿ, ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿರುವ ಸಿ.ಟಿ ಮುದ್ದುಕುಮಾರ್ ಅವರಿಗೆ ಸೇರಿದ ಮನೆ ಇದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಹೋಬಳಿ ರಂಗನಾಥಪುರದಲ್ಲಿ ಸಿ.ಟಿ ಮುದ್ದುಕುಮಾರ್ ಅವರಿಗೆ ಸೇರಿದ ಫಾರಂಹೌಸ್ ಇದೆ. ಅಲ್ಲದೆ ತುಮಕೂರಿನ ಅಂತರಸನಹಳ್ಳಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ಪ್ಲಾಸ್ಟಿಕ್ ಬಾಟಲ್ ತಯಾರಿಕಾ ಘಟಕವಿದೆ. ಈ ಎಲ್ಲ ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:01 am, Fri, 19 July 24

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ