Lokayukta Raid: ಬೆಂಗಳೂರು, ಶಿವಮೊಗ್ಗ, ಧಾರವಾಡ ಸೇರಿ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ

ಕರ್ನಾಟಕ ಲೋಕಾಯುಕ್ತ ದಾಳಿ: ಮಂಗಳವಾರ ಬೆಳ್ಳಂಬೆಳಗ್ಗೆಯೇ ಭ್ರಷ್ಟರ ಬೇಟೆಗೆ ಇಳಿದಿರುವ ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ರಾಜ್ಯದ ವಿವಿಧೆಡೆಗಳಲ್ಲಿ ದಾಳಿ ನಡೆಸಿದ್ದಾರೆ. ಬೆಂಗಳೂರು, ಶಿವಮೊಗ್ಗ, ಧಾರವಾಡ ಸೇರಿ ಹತ್ತಾರು ಕಡೆಗಳಲ್ಲಿ ದಾಳಿ ನಡೆದಿದೆ. ಕಡತಗಳ ಪರಿಶೀಲನೆ ಪ್ರಗತಿಯಲ್ಲಿದೆ. ಎಲ್ಲೆಲ್ಲಿ ದಾಳಿ ನಡೆದಿದೆ ಎಂಬ ವಿವರ ಇಲ್ಲಿದೆ.

Lokayukta Raid: ಬೆಂಗಳೂರು, ಶಿವಮೊಗ್ಗ, ಧಾರವಾಡ ಸೇರಿ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ
ಗದಗ ಶಹರ ಠಾಣೆ ಸಿಪಿಐ ಡಿಬಿ ಪಾಟೀಲ್ ಮನೆ ಮೇಲೆ ಲೋಕಾಯುಕ್ತ ದಾಳಿ
Updated By: Ganapathi Sharma

Updated on: Jun 24, 2025 | 9:03 AM

ಬೆಂಗಳೂರು, ಜೂನ್ 24: ಶಿವಮೊಗ್ಗದ ಅರ್ಗ್ಯಾನಿಕ್ ಫಾರ್ಮಿಂಗ್ ಸಹಾಯಕ ನಿರ್ದೇಶಕ ಪ್ರದೀಪ್, ಚಿಕ್ಕಮಗಳೂರು ನಗರಸಭೆ ಅಧಿಕಾರಿ ಲತಾಮಣಿ ಮನೆ ಮೇಲೆ ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಲೋಕಾಯುಕ್ತ (Lokayukta) ಅಧಿಕಾರಿಗಳು ಮಂಗಳವಾರ ಮುಂಜಾನೆಯೇ ದಾಳಿ ನಡೆಸಿದ್ದಾರೆ. ಆನೇಕಲ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೆ.ಜಿ.ಅಮರನಾಥ್, ಗದಗದ ಪಟ್ಟಣ ಪೊಲೀಸ್ ನಿರೀಕ್ಷಕ ಧ್ರುವರಾಜ್​, ಧಾರವಾಡ ಮಲಪ್ರಭಾ ಯೋಜನೆ ಇಂಜಿನಿಯರ್ ಅಶೋಕ್ ವಾಲ್ಸಂದ್, ಕಲಬುರಗಿ ಪಿಆರ್​ಇ ವಿಭಾಗದ ಇಇ ಮಲ್ಲಿಕಾರ್ಜುನ ಅಲಿಪುರ, ಸಣ್ಣೂರು ಗ್ರಾ.ಪಂ. ಪಿಡಿಒ ರಾಮಚಂದ್ರ ಮನೆ ಮೇಲೆಯೂ ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿಯೂ ಲೋಕಾಯಕ್ತ ದಾಳಿ ನಡೆದಿದೆ.

ಕರ್ನಾಟಕದಲ್ಲಿ ಎಲ್ಲೆಲ್ಲಿ ಲೋಕಾಯುಕ್ತ ದಾಳಿ?

  • ಪ್ರಕಾಶ್ ಎಇ, ಬಿಬಿಎಂಪಿ, ಗೋವಿಂದರಾಜನಗರ, ಬೆಂಗಳೂರು.
  • ಡಾ , ಎಸ್ ಪ್ರದೀಪ್, ಅಸೋಸಿಯೇಟ್ ರಿಸರ್ಚ್ ಡೈರೆಕ್ಟರ್ , ಅರ್ಗ್ಯಾನಿಕ್ ಫಾರ್ಮಿಂಗ್ ಶಿವಮೊಗ್ಗ.
  • ಡಾ. ಎಸ್. ಪ್ರದೀಪ್, ಸಹಾಯಕ ಸಂಶೋಧನಾ ನಿರ್ದೇಶಕರು, ಅರ್ಗಾನಿಕ್ ಫಾರ್ಮಿಂಗ್ ಶಿವಮೊಗ್ಗ
  • ಲತಾ ಮಣಿ, ಖಾತೆ ಅಧಿಕಾರಿ, ಯೌನ್ ನಗರಪಾಲಿಕೆ, ಚಿಕ್ಕಮಗಳೂರು.
  • ಕೆ.ಜಿ. ಅಮರನಾಥ್, ಮುಖ್ಯಾಧಿಕಾರಿ, ಪಟ್ಟಣ ಪಂಚಾಯಿತಿ, ಆನೆಕಲ್.
  • ಧ್ರುವರಾಜ್, ಪಟ್ಟಣ ಪೊಲೀಸ್ ನಿರೀಕ್ಷಕ, ಗದಗ.
  • ಅಶೋಕ್ ವಾಲ್ಸಂದ್, ಎಂಜಿನಿಯರ್, ಮಲಪ್ರಭಾ ಯೋಜನೆ, ಧಾರವಾಡ.
  • ಮಲ್ಲಿಕಾರ್ಜುನ ಅಲಿಪುರ, ಮಾಜಿ ಎಂಜಿನಿಯರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕಲಬುರ್ಗಿ
  • ರಾಮಚಂದ್ರ, ಪಿಡಿಒ, ಕಲಬುರ್ಗಿ

ಗದಗ ಶಹರ ಠಾಣೆ ಸಿಪಿಐ ಡಿಬಿ ಪಾಟೀಲ್​​ಗೆ ಲೋಕಾಯುಕ್ತ ಶಾಕ್

ಗದಗ ಶಹರ ಠಾಣೆ ಸಿಪಿಐ ಡಿಬಿ ಪಾಟೀಲ್​ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್​ ನೀಡಿದ್ದಾರೆ. ಇನ್ಸ್​​​ಪೆಕ್ಟರ್ ಪಾಟೀಲ್ ಅವರ ಗದಗದ ಶಿವಾನಂದ ನಗರದ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆದಿದೆ. ಅಲ್ಲದೆ, ಅವರ ಬಾಗಲಕೋಟೆ, ಜಮಖಂಡಿಯಲ್ಲಿರುವ ಮನೆಗಳ ಮೇಲೂ ದಾಳಿ ನಡೆದಿದೆ. ಕೆರೂರಿನಲ್ಲಿರುವ ಮನೆ ಮೇಲೂ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಲಾಗಿದೆ.

ಇದನ್ನೂ ಓದಿ: ನೆಲಮಂಗಲ: ಗಲಾಟೆ-ಹಲ್ಲೆ ಆರೋಪ, ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ, ಗನ್​ಮ್ಯಾನ್, ಚಾಲಕನ ವಿರುದ್ಧ ಎಫ್​ಐಆರ್

ಇದನ್ನೂ ಓದಿ
ಹಲ್ಲೆ ಆರೋಪ, ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಎಫ್​ಐಆರ್
ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ
ನಷ್ಟದಲ್ಲಿದ್ದ ದಾವಣಗೆರೆ ರೈತರ ಕೈ ಹಿಡಿದ ಡ್ರ್ಯಾಗನ್ ಫ್ರೂಟ್
ಮಂಗಳೂರು: ಒಂದೇ ಮನೆಯ 7 ದನ ಕರುಗಳು ನರಳಿ ನರಳಿ‌ ನಿಗೂಢ ಸಾವು

ಲೋಕಾಯುಕ್ತರು ಸಿಪಿಐ ವಾಹನವನ್ನೂ ಬಿಡದೆ ತಪಾಸಣೆ ಮಾಡಿದ್ದಾರೆ. ಕಾಯುಕ್ತ ಡಿವೈಎಸ್​ಪಿ ಪುಷ್ಪಲತಾ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ಪ್ರಗತಿಯಲ್ಲಿದೆ.

ಶೌಚಾಲಯಕ್ಕೆ ಹೋದರೂ ಬಿಡದ ಲೋಕಾಯುಕ್ತ ಅಧಿಕಾರಿಗಳು!

ಲೋಕಾಯುಕ್ತ ದಾಳಿ ವೇಳೆ ಡಿಬಿ ಪಾಟೀಲ್ ಮನೆಯ ಶೌಚಾಲಯದಲ್ಲಿ ಕುಳಿತುಕೊಂಡಿದ್ದರು. ಆದರೂ ಬಿಡದ ಲೋಕಾಯುಕ್ತ ಅಧಿಕಾರಿಗಳು, ಶೌಚಾಲಯದ ಬಳಿ ಬಂದು ಕಿವಿ ಕೊಟ್ಟು ಯಾರ ಬಳಿಯಾದರೂ ಫೋನ್​ನಲ್ಲಿ ಮಾತನಾಡುತ್ತಿದ್ದಾರೆಯೇ ಎಂಬುದನ್ನು ಗಮನಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ