AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಪಡೆಯುವಾಗಲೇ ರೇಡ್​​: ಕಲಬುರಗಿ, ಚಿತ್ರದುರ್ಗದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

Lokayukta Raid: ಕಲಬುರಗಿ ಮತ್ತು ಚಿತ್ರದುರ್ಗದಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪ್ರತ್ಯೇಕ ಪ್ರಕರಣಗಳಲ್ಲಿ ಕಲಬುರಗಿ ವಿಭಾಗದ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕ ಮತ್ತು ಕಲಬುರಗಿಯ 5ನೇ ಜೆಎಂಎಫ್​ಸಿ ಕೋರ್ಟ್ ಎಪಿಪಿಯನ್ನು ಖೆಡ್ಡಾಕ್ಕೆ ಕೆಡವಲಾಗಿದೆ. ಅಲ್ಲದೆ, ಭ್ರಷ್ಟಾಚಾರದ ದೂರುಗಳ ಹಿನ್ನೆಲೆಯಲ್ಲಿ ಶಿರಾ ನಗರಸಭೆ ಕಚೇರಿಯ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ.

ಲಂಚ ಪಡೆಯುವಾಗಲೇ ರೇಡ್​​: ಕಲಬುರಗಿ, ಚಿತ್ರದುರ್ಗದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು
ಲೋಕಾಯುಕ್ತ ದಾಳಿImage Credit source: Tv9 Kannada
ಪ್ರಸನ್ನ ಹೆಗಡೆ
|

Updated on:Jul 17, 2026 | 6:03 PM

Share

ಮುಖ್ಯಾಂಶಗಳು

  • ಕರ್ನಾಟಕದ ವಿವಿಧೆಡೆ ಲೋಕಾಯುಕ್ತದಿಂದ ಭರ್ಜರಿ ಕಾರ್ಯಾಚರಣೆ
  • ಲಂಚ ಪಡೆಯುವಾಗಲೇ ರೆಡ್​​ಹ್ಯಾಂಡ್​​ ಆಗಿ ಸಿಕ್ಕಿಬಿದ್ದ ಅಧಿಕಾರಿಗಳು
  • ಭ್ರಷ್ಟಾಚಾರ ಆರೋಪ ಹಿನ್ನೆಲೆ ಶಿರಾ ನಗರಸಭೆ ಕಚೇರಿ ಮೇಲೂ ರೇಡ್​​

ಕಲಬುರಗಿ/ಚಿತ್ರದುರ್ಗ, ಜುಲೈ 17: 10 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ಎಪಿಪಿ ಲೋಕಾಯುಕ್ತ ಬಲೆಗೆ ಬಿದ್ದ ಪ್ರಸಂಗ ನಡೆದಿದೆ. ಕರಣವೊಂದರಲ್ಲಿ ನ್ಯಾಯಾಲಯಕ್ಕೆ ರಾಜಿ ಅರ್ಜಿ ಸಲ್ಲಿಸಲು ಹೈದರಾಬಾದ್ ಮೂಲದ ದೂರುದಾರ ರಾಹುಲ್​ರಿಂದ 5ನೇ ಜೆಎಂಎಫ್​ಸಿ ಕೋರ್ಟ್ ಎಪಿಪಿ ಸಂತೋಷ್ ಕುಮಾರ್ ಲೋಖಂಡೆ ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ಕೋರ್ಟ್​ ಆವರಣದಲ್ಲಿಯೇ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. 10 ಸಾವಿರ ನಗದು, 9 ಸೀರೆ, 4 ಶರ್ಟ್, 4 ಲಂಡನ್ ಜೀನ್ಸ್ ಪ್ಯಾಂಟ್, 1 ಜೊತೆ ಶೂ, ಮಹಿಳೆಯರ 4 ಡ್ರೆಸ್ ಮತ್ತು 6 ಜೊತೆ ಚಪ್ಪಲಿಗೆ ಸಂತೋಷ್​​ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಲೋಕಾಯುಕ್ತ ಇನ್ಸ್​ಪೆಕ್ಟರ್ ಅರುಣ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕ ವಶಕ್ಕೆ

ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಕಾರ್ಯಾಚರಣೆ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಕಲಬುರಗಿ ವಿಭಾಗದ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕ ತಿಪ್ಪೇಸ್ವಾಮಿ ಅವರನ್ನು ಖೆಡ್ಡಾಗೆ ಕೆಡವಿದ್ದಾರೆ. ಹೊಸಪೇಟೆಯ ಗುತ್ತಿಗೆದಾರ ಲಕ್ಷ್ಮೀಕಾಂತ್‌ ಎಂಬವರು ಮಾಡಿದ್ದ 48 ಲಕ್ಷದ ಕಾಮಗಾರಿ ಬಗ್ಗೆ ತನಿಖೆ ಮಾಡಿಸುತ್ತೇನೆಂದು ತಿಪ್ಪೇಸ್ವಾಮಿ ಬೆದರಿಸಿದ್ದರು. ಅಲ್ಲದೆ 10 ಲಕ್ಷ ರೂ. ಲಂಚ ನೀಡಿದರೆ ತನಿಖೆ ಮಾಡಲ್ಲ ಎಂದು ತಿಳಿಸಿದ್ದರು. ಈ ಸಂಬಂಧ ಹಿರಿಯೂರು ಬಳಿ 5 ಲಕ್ಷ ಲಂಚ ಸ್ವೀಕಾರ ವೇಳೆ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಳ್ಳಾರಿ ಲೋಕಾಯುಕ್ತ ಎಸ್‌ಪಿ ವಾಸುದೇವರಾಮ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ತಿಪ್ಪೇಸ್ವಾಮಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಲಂಚ ಪಡೆಯುತ್ತಿರುವಾಗಲೇ ಲೋಕಾ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು; ಬೆಂಗಳೂರಿನಲ್ಲಿ ಲೋಕಾಯುಕ್ತ ಭರ್ಜರಿ ಟ್ರ್ಯಾಪ್

ಶಿರಾ ನಗರಸಭೆ ಕಚೇರಿಯ ಮೇಲೆಯೂ ದಾಳಿ

ಇ-ಖಾತೆ, ಹಕ್ಕುಪತ್ರ ವರ್ಗಾವಣೆ, ಇ-ಸ್ವತ್ತು, ಯುಜಿಡಿ, ಕಟ್ಟಡ ಪರವಾನಿಗೆ ಕೊಡಲು ಭ್ರಷ್ಟಾಚಾರ ಆರೋಪ ಹಿನ್ನೆಲೆ ಶಿರಾ ನಗರಸಭೆ ಕಚೇರಿಯ ಮೇಲೆಯೂ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ನಗರಸಭೆ ಕಚೇರಿಯಲ್ಲಿ ದಾಖಲಾತಿ ಪರಿಶೀಲನೆ ನಡೆಸಲಾಗಿದ್ದು, ತುಮಕೂರು ಲೋಕಾಯುಕ್ತ ಎಸ್‌ಪಿ ನೇತೃತ್ವದಲ್ಲಿ ಇಬ್ಬರು DySP, ನಾಲ್ವರು ಇನ್ಸ್‌ಪೆಕ್ಟರ್‌, 10ಕ್ಕೂ ಹೆಚ್ಚು ಸಿಬ್ಬಂದಿಯಿಂದ ರೇಡ್ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:02 pm, Fri, 17 July 26

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್