AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಪಡೆಯುವಾಗಲೇ ರೇಡ್​​: ಕಲಬುರಗಿ, ಚಿತ್ರದುರ್ಗದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

Lokayukta Raid: ಕಲಬುರಗಿ ಮತ್ತು ಚಿತ್ರದುರ್ಗದಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪ್ರತ್ಯೇಕ ಪ್ರಕರಣಗಳಲ್ಲಿ ಕಲಬುರಗಿ ವಿಭಾಗದ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕ ಮತ್ತು ಕಲಬುರಗಿಯ 5ನೇ ಜೆಎಂಎಫ್​ಸಿ ಕೋರ್ಟ್ ಎಪಿಪಿಯನ್ನು ಖೆಡ್ಡಾಕ್ಕೆ ಕೆಡವಲಾಗಿದೆ. ಅಲ್ಲದೆ, ಭ್ರಷ್ಟಾಚಾರದ ದೂರುಗಳ ಹಿನ್ನೆಲೆಯಲ್ಲಿ ಶಿರಾ ನಗರಸಭೆ ಕಚೇರಿಯ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ.

ಲಂಚ ಪಡೆಯುವಾಗಲೇ ರೇಡ್​​: ಕಲಬುರಗಿ, ಚಿತ್ರದುರ್ಗದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು
ಲೋಕಾಯುಕ್ತ ದಾಳಿImage Credit source: Tv9 Kannada
ಪ್ರಸನ್ನ ಹೆಗಡೆ
|

Updated on:Jul 17, 2026 | 6:03 PM

Share

ಮುಖ್ಯಾಂಶಗಳು

  • ಕರ್ನಾಟಕದ ವಿವಿಧೆಡೆ ಲೋಕಾಯುಕ್ತದಿಂದ ಭರ್ಜರಿ ಕಾರ್ಯಾಚರಣೆ
  • ಲಂಚ ಪಡೆಯುವಾಗಲೇ ರೆಡ್​​ಹ್ಯಾಂಡ್​​ ಆಗಿ ಸಿಕ್ಕಿಬಿದ್ದ ಅಧಿಕಾರಿಗಳು
  • ಭ್ರಷ್ಟಾಚಾರ ಆರೋಪ ಹಿನ್ನೆಲೆ ಶಿರಾ ನಗರಸಭೆ ಕಚೇರಿ ಮೇಲೂ ರೇಡ್​​

ಕಲಬುರಗಿ/ಚಿತ್ರದುರ್ಗ, ಜುಲೈ 17: 10 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ಎಪಿಪಿ ಲೋಕಾಯುಕ್ತ ಬಲೆಗೆ ಬಿದ್ದ ಪ್ರಸಂಗ ನಡೆದಿದೆ. ಕರಣವೊಂದರಲ್ಲಿ ನ್ಯಾಯಾಲಯಕ್ಕೆ ರಾಜಿ ಅರ್ಜಿ ಸಲ್ಲಿಸಲು ಹೈದರಾಬಾದ್ ಮೂಲದ ದೂರುದಾರ ರಾಹುಲ್​ರಿಂದ 5ನೇ ಜೆಎಂಎಫ್​ಸಿ ಕೋರ್ಟ್ ಎಪಿಪಿ ಸಂತೋಷ್ ಕುಮಾರ್ ಲೋಖಂಡೆ ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ಕೋರ್ಟ್​ ಆವರಣದಲ್ಲಿಯೇ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. 10 ಸಾವಿರ ನಗದು, 9 ಸೀರೆ, 4 ಶರ್ಟ್, 4 ಲಂಡನ್ ಜೀನ್ಸ್ ಪ್ಯಾಂಟ್, 1 ಜೊತೆ ಶೂ, ಮಹಿಳೆಯರ 4 ಡ್ರೆಸ್ ಮತ್ತು 6 ಜೊತೆ ಚಪ್ಪಲಿಗೆ ಸಂತೋಷ್​​ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಲೋಕಾಯುಕ್ತ ಇನ್ಸ್​ಪೆಕ್ಟರ್ ಅರುಣ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕ ವಶಕ್ಕೆ

ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಕಾರ್ಯಾಚರಣೆ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಕಲಬುರಗಿ ವಿಭಾಗದ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕ ತಿಪ್ಪೇಸ್ವಾಮಿ ಅವರನ್ನು ಖೆಡ್ಡಾಗೆ ಕೆಡವಿದ್ದಾರೆ. ಹೊಸಪೇಟೆಯ ಗುತ್ತಿಗೆದಾರ ಲಕ್ಷ್ಮೀಕಾಂತ್‌ ಎಂಬವರು ಮಾಡಿದ್ದ 48 ಲಕ್ಷದ ಕಾಮಗಾರಿ ಬಗ್ಗೆ ತನಿಖೆ ಮಾಡಿಸುತ್ತೇನೆಂದು ತಿಪ್ಪೇಸ್ವಾಮಿ ಬೆದರಿಸಿದ್ದರು. ಅಲ್ಲದೆ 10 ಲಕ್ಷ ರೂ. ಲಂಚ ನೀಡಿದರೆ ತನಿಖೆ ಮಾಡಲ್ಲ ಎಂದು ತಿಳಿಸಿದ್ದರು. ಈ ಸಂಬಂಧ ಹಿರಿಯೂರು ಬಳಿ 5 ಲಕ್ಷ ಲಂಚ ಸ್ವೀಕಾರ ವೇಳೆ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಳ್ಳಾರಿ ಲೋಕಾಯುಕ್ತ ಎಸ್‌ಪಿ ವಾಸುದೇವರಾಮ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ತಿಪ್ಪೇಸ್ವಾಮಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಲಂಚ ಪಡೆಯುತ್ತಿರುವಾಗಲೇ ಲೋಕಾ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು; ಬೆಂಗಳೂರಿನಲ್ಲಿ ಲೋಕಾಯುಕ್ತ ಭರ್ಜರಿ ಟ್ರ್ಯಾಪ್

ಶಿರಾ ನಗರಸಭೆ ಕಚೇರಿಯ ಮೇಲೆಯೂ ದಾಳಿ

ಇ-ಖಾತೆ, ಹಕ್ಕುಪತ್ರ ವರ್ಗಾವಣೆ, ಇ-ಸ್ವತ್ತು, ಯುಜಿಡಿ, ಕಟ್ಟಡ ಪರವಾನಿಗೆ ಕೊಡಲು ಭ್ರಷ್ಟಾಚಾರ ಆರೋಪ ಹಿನ್ನೆಲೆ ಶಿರಾ ನಗರಸಭೆ ಕಚೇರಿಯ ಮೇಲೆಯೂ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ನಗರಸಭೆ ಕಚೇರಿಯಲ್ಲಿ ದಾಖಲಾತಿ ಪರಿಶೀಲನೆ ನಡೆಸಲಾಗಿದ್ದು, ತುಮಕೂರು ಲೋಕಾಯುಕ್ತ ಎಸ್‌ಪಿ ನೇತೃತ್ವದಲ್ಲಿ ಇಬ್ಬರು DySP, ನಾಲ್ವರು ಇನ್ಸ್‌ಪೆಕ್ಟರ್‌, 10ಕ್ಕೂ ಹೆಚ್ಚು ಸಿಬ್ಬಂದಿಯಿಂದ ರೇಡ್ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:02 pm, Fri, 17 July 26

Follow Us
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​
ಅಂಕೋಲಾದಲ್ಲಿ ಭಾರಿ ಮಳೆ: ಗೋಕರ್ಣ ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ
ಅಂಕೋಲಾದಲ್ಲಿ ಭಾರಿ ಮಳೆ: ಗೋಕರ್ಣ ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ