Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ, ಕಲಬುರಗಿಯಲ್ಲಿ ಲೋಕಾಯುಕ್ತ ದಾಳಿ: ಇಬ್ಬರು ಅಧಿಕಾರಿಗಳ ಬಂಧನ

ಲೋಕಾಯುಕ್ತ ಅಧಿಕಾರಿಗಳು ಇಂದು (ಮೇ 18) ಏಕಕಾಲಕ್ಕೆ ಕಲಬುರಗಿ ಮತ್ತು ವಿಜಯಪುರ ಜಿಲ್ಲೆಯಲ್ಲಿ ದಾಳಿ ಮಾಡಿದ್ದು, ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯಪುರದ ಸರ್ವೆಯರ್ ಮತ್ತು ಕಲಬುರಗಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ವಿಜಯಪುರ, ಕಲಬುರಗಿಯಲ್ಲಿ ಲೋಕಾಯುಕ್ತ ದಾಳಿ: ಇಬ್ಬರು ಅಧಿಕಾರಿಗಳ ಬಂಧನ
ಕರ್ನಾಟಕ ಲೋಕಾಯುಕ್ತ
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ವಿವೇಕ ಬಿರಾದಾರ

Updated on: May 18, 2024 | 3:04 PM

ವಿಜಯಪುರ/ಕಲಬುರಗಿ, ಮೇ 18: ಲೋಕಾಯುಕ್ತ (Lokayukta) ಅಧಿಕಾರಿಗಳು ಇಂದು (ಮೇ 18) ಏಕಕಾಲಕ್ಕೆ ಕಲಬುರಗಿ (Kalaburagi) ಮತ್ತು ವಿಜಯಪುರ (Vijayapura) ಜಿಲ್ಲೆಯಲ್ಲಿ ದಾಳಿ ಮಾಡಿದ್ದು, ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯಪುರದ ಸರ್ವೆಯರ್ ಮಲ್ಲಪ್ಪ ಜಂಬಗಿ ಮತ್ತು ಕಲಬುರಗಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಫ್​​ಡಿಎ ಶಿವಶಂಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ವಿಜಯಪುರದ ಸರ್ವೆಯರ್ ಮಲ್ಲಪ್ಪ ಜಂಬಗಿ ಮತ್ತು ಸಹಾಯಕ ಗುರುದತ್ತ ಬಿರಾದಾರ‌ ಜಮೀನಿನ ತಾತ್ಕಾಲಿಕ ಪೋಡಿ ಮಾಡಲು ಪ್ರಕಾಶ್ ಸಿಂಗೆ ಎಂಬುವರಿಂದ 47,500 ರೂ. ಲಂಚ ಪಡೆಯುತ್ತಿದ್ದರು. ಈ ವಿಚಾರ ತಿಳಿದ ಲೋಕಾಯುಕ್ತ ಎಸ್ಪಿ ಮಲ್ಲೇಶ, ಡಿಎಸ್​ಪಿ ಸುರೇಶ್ ರೆಡ್ಡಿ, ಸಿಪಿಐ ಆನಂದ ಟಕ್ಕನವರ್ ಮತ್ತು ಆನಂದ ದೋಣಿ ನೇತೃತ್ವದ ತಂಡ ಧಿಡೀರನೆ ದಾಳಿ ಮಾಡಿ, ಇಬ್ಬರನ್ನೂ ರೆಡ್​ ಹ್ಯಾಂಡ್​ ಆಗಿ ಬಂಧಿಸಿದ್ದಾರೆ.

ಇನ್ನು ಕಲಬುರಗಿಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಫ್​ಡಿಎ ಶಿವಶಂಕರ ಎಸ್​ಎಸ್​ಎಲ್​ಸಿ ಅಂಕಪಟ್ಟಿ ನಕಲು ಪತ್ರಿ ನೀಡಲು ಅರುಣ್ ಖತೀಬ್ ಎಂಬುವರಿಂದ ಐದು ಸಾವಿರ ಹಣ ಪಡೆಯುತ್ತಿದ್ದರು. ಈ ವಿಚಾರ ತಿಳಿದು ಲೋಕಾಯುಕ್ತ ಎಸ್​ಪಿ ಜಾನ್ ಆಂಟೋನಿ ಮತ್ತು ಡಿವೈಎಸ್​ಪಿ ಗೀತಾ ಬೇನಾಳ್ ನೇತೃತ್ವದ ತಂಡ ದಾಳಿ ಮಾಡಿ ಅಧಿಕಾರಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಚುನಾವಣೆ ಹೊತ್ತಲ್ಲೇ ಡಿಕೆ ಶಿವಕುಮಾರ್​ಗೆ ಶಾಕ್, ಲೋಕಾಯುಕ್ತದಿಂದ ಬಂತು ನೋಟಿಸ್

ಪಿಡಿಒ ಲೋಕಾಯುಕ್ತ ಬಲೆಗೆ

ದೇವನಹಳ್ಳಿ: 3.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಪಿಡಿಒ ನಿರಂಜನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮ ಪಂಚಾಯ್ತಿ ಪಿಡಿಒ ಅರೆಸ್ಟ್ ಆಗಿದ್ದರು. ರೆಸ್ಟೋರೆಂಟ್ ಜನರಲ್ ಲೈಸೆನ್ಸ್ ನವೀಕರಿಸಲು 5 ಲಕ್ಷ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದರು. ಅದ್ರಲ್ಲಿ 3.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ದೊಡ್ಡಬಳ್ಳಾಪುರ ತಾಲೂಕು ಪಂಚಾಯಿ ಕಚೇರಿ ಆವರಣದಲ್ಲಿ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ