AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lokayukta Raid: 60 ಕಡೆ ಲೋಕಾಯುಕ್ತ ದಾಳಿ: 13 ಭ್ರಷ್ಟರು ಟಾರ್ಗೆಟ್‌, ಇಂಜಿನಿಯರ್‌ ಮನೆಯಲ್ಲಿ ಕೆಜಿ ಕೆಜಿ ಬಂಗಾರ, ಬೆಳ್ಳಿ!

ಆದಾಯಕ್ಕೂ ಮೀರಿ ಆಸ್ತಿಗಳಿಸಿದ, ಭ್ರಷ್ಟಾಚಾರದಿಂದಲೇ ಕೋಟಿ ಕೋಟಿ ಮೌಲ್ಯದ ಆಸ್ತಿ ಮಾಡಿದ ಆರೋಪ ಕೇಳಿಬಂದ 13 ಸರ್ಕಾರಿ ಅಧಿಕಾರಿಗಳನ್ನೇ ಟಾರ್ಗೆಟ್‌ ಮಾಡಿ ಬರೋಬ್ಬರಿ 60 ಕ್ಕೂ ಹೆಚ್ಚು ಸ್ಥಳಗಳಲ್ಲಿ ಇವತ್ತು ಲೋಕಾಯುಕ್ತ ದಾಳಿ ನಡೆದಿದೆ. 200 ಕ್ಕೂ ಹೆಚ್ಚು ಸಿಬ್ಬಂದಿ ಫೀಲ್ಡ್‌ಗೆ ಇಳಿದಿದ್ದಾರೆ.

Lokayukta Raid: 60 ಕಡೆ ಲೋಕಾಯುಕ್ತ ದಾಳಿ: 13 ಭ್ರಷ್ಟರು ಟಾರ್ಗೆಟ್‌, ಇಂಜಿನಿಯರ್‌ ಮನೆಯಲ್ಲಿ ಕೆಜಿ ಕೆಜಿ ಬಂಗಾರ, ಬೆಳ್ಳಿ!
ಲೋಕಾಯುಕ್ತ
TV9 Web
| Edited By: |

Updated on: Dec 05, 2023 | 9:04 PM

Share

ಬೆಂಗಳೂರು, ಡಿಸೆಂಬರ್ 5: ರಾಜ್ಯದ ಬರೋಬ್ಬರಿ 60 ಕಡೆ ಮಂಗಳವಾರ ಲೋಕಾಯುಕ್ತರ ದಾಳಿ (Lokayukta Raid) ನಡೆದಿದೆ. ಸೂರ್ಯೋದಯಕ್ಕೂ ಮುನ್ನವೇ ಭ್ರಷ್ಟರ ಮನೆ ಬಾಗಿಲು ಬಡಿದ ಪೊಲೀಸರು, ಸರ್ಕಾರದ ಹಣ ನುಂಗಿದವರನ್ನು ಬಡಿದೆಬ್ಬಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಸಂಬಂಧಿ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ.

ಆದಾಯಕ್ಕೂ ಮೀರಿ ಆಸ್ತಿಗಳಿಸಿದ, ಭ್ರಷ್ಟಾಚಾರದಿಂದಲೇ ಕೋಟಿ ಕೋಟಿ ಮೌಲ್ಯದ ಆಸ್ತಿ ಮಾಡಿದ ಆರೋಪ ಕೇಳಿಬಂದ 13 ಸರ್ಕಾರಿ ಅಧಿಕಾರಿಗಳನ್ನೇ ಟಾರ್ಗೆಟ್‌ ಮಾಡಿ ಬರೋಬ್ಬರಿ 60 ಕ್ಕೂ ಹೆಚ್ಚು ಸ್ಥಳಗಳಲ್ಲಿ ಇವತ್ತು ಲೋಕಾಯುಕ್ತ ದಾಳಿ ನಡೆದಿದೆ. 200 ಕ್ಕೂ ಹೆಚ್ಚು ಸಿಬ್ಬಂದಿ ಫೀಲ್ಡ್‌ಗೆ ಇಳಿದಿದ್ದಾರೆ. ಈ ಪೈಕಿ ಎಲ್ಲರ ಹುಬ್ಬೇರುವಂತೆ ಮಾಡಿರುವುದು ಬೆಸ್ಕಾಂನ ಎಕ್ಸಿಕ್ಯೂಟಿವ್‌ ಇಂಜಿನಿಯರ್ ಚನ್ನಕೇಶವನ ಆಸ್ತಿ.

ಬೆಸ್ಕಾಂನ ‘ಚಿನ್ನ’ಕೇಶವ!

ಅಮೃತಹಳ್ಳಿಯ ಬೆಸ್ಕಾಂ ಇಇ ಚನ್ನಕೇಶವ ಮನೆಯಲ್ಲಿ 3 ಕೆಜಿ ಚಿನ್ನ, 28 ಕೆಜಿ ಬೆಳ್ಳಿ, 25 ಲಕ್ಷ ರೂಪಾಯಿ ಮೌಲ್ಯದ ಡೈಮಂಡ್‌ ಪತ್ತೆಯಾಗಿದೆ. ಅಲ್ಲದೆ ಮನೆಯಲ್ಲಿ 6 ಲಕ್ಷ ರೂಪಾಯಿ ನಗದು ಹಾಗೂ 1.5ಕೋಟಿ ಮೌಲ್ಯದ ವಸ್ತುಗಳು ಪತ್ತೆಯಾಗಿವೆ.

‘ಚಿನ್ನ’ದ ಮೂರ್ತಿ!

ಕಣಿಮಿಣಿಕೆ ಮಿಲ್ಕ್‌ ಪ್ರೊಡಕ್ಷನ್ ಕೋಅಪರೇಟಿವ್‌ ಸೊಸೈಟಿ ಚೀಫ್‌ ಎಕ್ಸ್‌ಕ್ಯೂಟಿವ್‌ ಕೃಷ್ಣಮೂರ್ತಿ ಮನೆ ಮೇಲೆ ದಾಳಿ ನಡೆಸಿದಾಗ 1.2 ಕೆಜಿ ಚಿನ್ನ, 7.5 ಕೆಜಿ ಬೆಳ್ಳಿ ಹಾಗೂ ದಾಖಲೆ ಪತ್ರಗಳು ಪತ್ತೆಯಾಗಿವೆ.

ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಡಿಆರ್‌ಎಫ್‌ಒ ಆಗಿರೋ ಮಾರುತಿ ಕೂಡಾ ಇವತ್ತು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಂಪ್ಲಿಯಲ್ಲಿರೋ ಇವರ ನಿವಾಸದಲ್ಲೂ ಶೋಧ ನಡೆದಿತ್ತು. ಮಾರುತಿ ಮನೆಯಲ್ಲಿ 2.50 ಲಕ್ಷ ನಗದು, 250 ಗ್ರಾಂ ಚಿನ್ನ, ಒಂದೂವರೆ ಕೆಜಿ ಬೆಳ್ಳಿ, 15 ಎಕರೆ ಜಮೀನು, 6 ನಿವೇಶನದ ಪತ್ರ ಪತ್ತೆಯಾಗಿವೆ.

ಡಿಜಿಎಂ ವಿಜೆಲೆನ್ಸ್‌ನ ಇಇ ಟಿ.ಎನ್‌ ಸುಧಾಕರ್ ಅವರ ರಾಮನಗರದ ಸಾತನೂರು ನಿವಾಸದ ಮೇಲೂ ದಾಳಿ ಆಗಿತ್ತು. ಸಾತನೂರಿನಲ್ಲಿ ಐಷಾರಾಮಿ ಮನೆ ಹೊಂದಿರೋದು ಗೊತ್ತಾಗಿದೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಹೆಸ್ಕಾಂನ ನಿವೃತ್ತ ಸ್ಟೋರ್‌ ಕೀಪರ್‌ಗೂ ದಾಳಿ ಬಿಸಿ ಮುಟ್ಟಿತ್ತು. ಮೈಸೂರಿನ ಗುರುಕುಲ ಬಡಾವಣೆ ನಿವಾಸಿ ಉಪನ್ಯಾಪಸ ಮಹದೇವಸ್ವಾಮಿ, ಚಿಕ್ಕಬಳ್ಳಾಪುರದ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮುನೇಗೌಡಗೆ ಲೋಕಾ ಶಾಕ್‌ ತಟ್ಟಿತ್ತು.

ಇದನ್ನೂ ಓದಿ: ಕ್ರೆಡಲ್ ಎಸ್​ಇ ಐಷಾರಾಮಿ ಮನೆ ಮೇಲೆ ಲೋಕಾ ರೈಡ್​: ಕೋಟ್ಯಂತರ ರೂ. ಮೌಲ್ಯದ ಆಸ್ತಿ ಪತ್ತೆ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಪತ್ನಿಯ ಸಹೋದರ ಡಾಕ್ಟರ್‌ ಪ್ರಭುಲಿಂಗ, ಯಾದಗಿರಿ ಡಿಹೆಚ್‌ಒ ಆಗಿದ್ದು, ಅವರಿಗೂ ಲೋಕಾಯುಕ್ತ ಬಿಸಿ ತಟ್ಟಿತ್ತು. ದಾಳಿ ವೇಳೆ 300 ಗ್ರಾಂ ಚಿನ್ನಾಭರಣ, 3 ಲಕ್ಷ ಹಣ ಪತ್ತೆಯಾಗಿದೆ. ಉಳಿದಂತೆ ಬೀದರ್‌ನ ಪಶು ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ HD ನಾರಾಯಣ ಸ್ವಾಮಿ ಮನೆ ಮೇಲೂ ದಾಳಿ ಆಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ