AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lokayukta Raid: 60 ಕಡೆ ಲೋಕಾಯುಕ್ತ ದಾಳಿ: 13 ಭ್ರಷ್ಟರು ಟಾರ್ಗೆಟ್‌, ಇಂಜಿನಿಯರ್‌ ಮನೆಯಲ್ಲಿ ಕೆಜಿ ಕೆಜಿ ಬಂಗಾರ, ಬೆಳ್ಳಿ!

ಆದಾಯಕ್ಕೂ ಮೀರಿ ಆಸ್ತಿಗಳಿಸಿದ, ಭ್ರಷ್ಟಾಚಾರದಿಂದಲೇ ಕೋಟಿ ಕೋಟಿ ಮೌಲ್ಯದ ಆಸ್ತಿ ಮಾಡಿದ ಆರೋಪ ಕೇಳಿಬಂದ 13 ಸರ್ಕಾರಿ ಅಧಿಕಾರಿಗಳನ್ನೇ ಟಾರ್ಗೆಟ್‌ ಮಾಡಿ ಬರೋಬ್ಬರಿ 60 ಕ್ಕೂ ಹೆಚ್ಚು ಸ್ಥಳಗಳಲ್ಲಿ ಇವತ್ತು ಲೋಕಾಯುಕ್ತ ದಾಳಿ ನಡೆದಿದೆ. 200 ಕ್ಕೂ ಹೆಚ್ಚು ಸಿಬ್ಬಂದಿ ಫೀಲ್ಡ್‌ಗೆ ಇಳಿದಿದ್ದಾರೆ.

Lokayukta Raid: 60 ಕಡೆ ಲೋಕಾಯುಕ್ತ ದಾಳಿ: 13 ಭ್ರಷ್ಟರು ಟಾರ್ಗೆಟ್‌, ಇಂಜಿನಿಯರ್‌ ಮನೆಯಲ್ಲಿ ಕೆಜಿ ಕೆಜಿ ಬಂಗಾರ, ಬೆಳ್ಳಿ!
ಲೋಕಾಯುಕ್ತ
TV9 Web
| Edited By: |

Updated on: Dec 05, 2023 | 9:04 PM

Share

ಬೆಂಗಳೂರು, ಡಿಸೆಂಬರ್ 5: ರಾಜ್ಯದ ಬರೋಬ್ಬರಿ 60 ಕಡೆ ಮಂಗಳವಾರ ಲೋಕಾಯುಕ್ತರ ದಾಳಿ (Lokayukta Raid) ನಡೆದಿದೆ. ಸೂರ್ಯೋದಯಕ್ಕೂ ಮುನ್ನವೇ ಭ್ರಷ್ಟರ ಮನೆ ಬಾಗಿಲು ಬಡಿದ ಪೊಲೀಸರು, ಸರ್ಕಾರದ ಹಣ ನುಂಗಿದವರನ್ನು ಬಡಿದೆಬ್ಬಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಸಂಬಂಧಿ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ.

ಆದಾಯಕ್ಕೂ ಮೀರಿ ಆಸ್ತಿಗಳಿಸಿದ, ಭ್ರಷ್ಟಾಚಾರದಿಂದಲೇ ಕೋಟಿ ಕೋಟಿ ಮೌಲ್ಯದ ಆಸ್ತಿ ಮಾಡಿದ ಆರೋಪ ಕೇಳಿಬಂದ 13 ಸರ್ಕಾರಿ ಅಧಿಕಾರಿಗಳನ್ನೇ ಟಾರ್ಗೆಟ್‌ ಮಾಡಿ ಬರೋಬ್ಬರಿ 60 ಕ್ಕೂ ಹೆಚ್ಚು ಸ್ಥಳಗಳಲ್ಲಿ ಇವತ್ತು ಲೋಕಾಯುಕ್ತ ದಾಳಿ ನಡೆದಿದೆ. 200 ಕ್ಕೂ ಹೆಚ್ಚು ಸಿಬ್ಬಂದಿ ಫೀಲ್ಡ್‌ಗೆ ಇಳಿದಿದ್ದಾರೆ. ಈ ಪೈಕಿ ಎಲ್ಲರ ಹುಬ್ಬೇರುವಂತೆ ಮಾಡಿರುವುದು ಬೆಸ್ಕಾಂನ ಎಕ್ಸಿಕ್ಯೂಟಿವ್‌ ಇಂಜಿನಿಯರ್ ಚನ್ನಕೇಶವನ ಆಸ್ತಿ.

ಬೆಸ್ಕಾಂನ ‘ಚಿನ್ನ’ಕೇಶವ!

ಅಮೃತಹಳ್ಳಿಯ ಬೆಸ್ಕಾಂ ಇಇ ಚನ್ನಕೇಶವ ಮನೆಯಲ್ಲಿ 3 ಕೆಜಿ ಚಿನ್ನ, 28 ಕೆಜಿ ಬೆಳ್ಳಿ, 25 ಲಕ್ಷ ರೂಪಾಯಿ ಮೌಲ್ಯದ ಡೈಮಂಡ್‌ ಪತ್ತೆಯಾಗಿದೆ. ಅಲ್ಲದೆ ಮನೆಯಲ್ಲಿ 6 ಲಕ್ಷ ರೂಪಾಯಿ ನಗದು ಹಾಗೂ 1.5ಕೋಟಿ ಮೌಲ್ಯದ ವಸ್ತುಗಳು ಪತ್ತೆಯಾಗಿವೆ.

‘ಚಿನ್ನ’ದ ಮೂರ್ತಿ!

ಕಣಿಮಿಣಿಕೆ ಮಿಲ್ಕ್‌ ಪ್ರೊಡಕ್ಷನ್ ಕೋಅಪರೇಟಿವ್‌ ಸೊಸೈಟಿ ಚೀಫ್‌ ಎಕ್ಸ್‌ಕ್ಯೂಟಿವ್‌ ಕೃಷ್ಣಮೂರ್ತಿ ಮನೆ ಮೇಲೆ ದಾಳಿ ನಡೆಸಿದಾಗ 1.2 ಕೆಜಿ ಚಿನ್ನ, 7.5 ಕೆಜಿ ಬೆಳ್ಳಿ ಹಾಗೂ ದಾಖಲೆ ಪತ್ರಗಳು ಪತ್ತೆಯಾಗಿವೆ.

ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಡಿಆರ್‌ಎಫ್‌ಒ ಆಗಿರೋ ಮಾರುತಿ ಕೂಡಾ ಇವತ್ತು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಂಪ್ಲಿಯಲ್ಲಿರೋ ಇವರ ನಿವಾಸದಲ್ಲೂ ಶೋಧ ನಡೆದಿತ್ತು. ಮಾರುತಿ ಮನೆಯಲ್ಲಿ 2.50 ಲಕ್ಷ ನಗದು, 250 ಗ್ರಾಂ ಚಿನ್ನ, ಒಂದೂವರೆ ಕೆಜಿ ಬೆಳ್ಳಿ, 15 ಎಕರೆ ಜಮೀನು, 6 ನಿವೇಶನದ ಪತ್ರ ಪತ್ತೆಯಾಗಿವೆ.

ಡಿಜಿಎಂ ವಿಜೆಲೆನ್ಸ್‌ನ ಇಇ ಟಿ.ಎನ್‌ ಸುಧಾಕರ್ ಅವರ ರಾಮನಗರದ ಸಾತನೂರು ನಿವಾಸದ ಮೇಲೂ ದಾಳಿ ಆಗಿತ್ತು. ಸಾತನೂರಿನಲ್ಲಿ ಐಷಾರಾಮಿ ಮನೆ ಹೊಂದಿರೋದು ಗೊತ್ತಾಗಿದೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಹೆಸ್ಕಾಂನ ನಿವೃತ್ತ ಸ್ಟೋರ್‌ ಕೀಪರ್‌ಗೂ ದಾಳಿ ಬಿಸಿ ಮುಟ್ಟಿತ್ತು. ಮೈಸೂರಿನ ಗುರುಕುಲ ಬಡಾವಣೆ ನಿವಾಸಿ ಉಪನ್ಯಾಪಸ ಮಹದೇವಸ್ವಾಮಿ, ಚಿಕ್ಕಬಳ್ಳಾಪುರದ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮುನೇಗೌಡಗೆ ಲೋಕಾ ಶಾಕ್‌ ತಟ್ಟಿತ್ತು.

ಇದನ್ನೂ ಓದಿ: ಕ್ರೆಡಲ್ ಎಸ್​ಇ ಐಷಾರಾಮಿ ಮನೆ ಮೇಲೆ ಲೋಕಾ ರೈಡ್​: ಕೋಟ್ಯಂತರ ರೂ. ಮೌಲ್ಯದ ಆಸ್ತಿ ಪತ್ತೆ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಪತ್ನಿಯ ಸಹೋದರ ಡಾಕ್ಟರ್‌ ಪ್ರಭುಲಿಂಗ, ಯಾದಗಿರಿ ಡಿಹೆಚ್‌ಒ ಆಗಿದ್ದು, ಅವರಿಗೂ ಲೋಕಾಯುಕ್ತ ಬಿಸಿ ತಟ್ಟಿತ್ತು. ದಾಳಿ ವೇಳೆ 300 ಗ್ರಾಂ ಚಿನ್ನಾಭರಣ, 3 ಲಕ್ಷ ಹಣ ಪತ್ತೆಯಾಗಿದೆ. ಉಳಿದಂತೆ ಬೀದರ್‌ನ ಪಶು ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ HD ನಾರಾಯಣ ಸ್ವಾಮಿ ಮನೆ ಮೇಲೂ ದಾಳಿ ಆಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ