AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಹಲವು ಆರ್​ಟಿಓ ಚೆಕ್​​ ಪೋಸ್ಟ್​ಗಳ ಮೇಲೆ ಲೋಕಾಯುಕ್ತ ದಾಳಿ

ಕರ್ನಾಟಕದಲ್ಲಿನ ಹಲವು ಆರ್​ಟಿಓ ಚೆಕ್​​ ಪೋಸ್ಟ್​​ ಸಿಬ್ಬಂದಿ ವಿರುದ್ಧ ಲಂಚ ಪಡೆಯುತ್ತಿರುವ ಆರೋಪ ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಂ ಬೆಳಗ್ಗೆ ಏಕಕಾಲಕ್ಕೆ ಕೋಲಾರ, ಬೀದರ್​ ಜಿಲ್ಲೆಯ ಆರ್​​ಟಿಓ ಚೆಕ್​ ​ಪೋಸ್ಟ್​ಗಳ ಮೇಲೆ ದಾಳಿ ಮಾಡಿದ್ದಾರೆ.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Oct 08, 2024 | 10:40 AM

Share

ಬೆಂಗಳೂರು, ಅಕ್ಟೋಬರ್​ 08: ಲೋಕಾಯುಕ್ತ (Lokayukta) ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ರಾಜ್ಯದ ಹಲವು ಆರ್​ಟಿಓ ಚೆಕ್ ಪೋಸ್ಟ್​​ಗಳ (RTO Checkpost) ಮೇಲೆ ದಾಳಿ ಮಾಡಿದ್ದಾರೆ. ಕೋಲಾರ, ಬೀದರ್, ವಿಜಯಪುರ ಮತ್ತು ಬಳ್ಳಾರಿ​​ ಜಿಲ್ಲೆಗಳಲ್ಲಿನ ಆರ್​ಟಿಓ ಚೆಕ್​​ ಪೋಸ್ಟ್​​ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಕ್ರಾಸ್ ಬಳಿ ಇರುವ ಆರ್​ಟಿಓ ಚೆಕ್ ಪೋಸ್ಟ್ ಹಾಗೂ ಮುಳಬಾಗಿಲು ತಾಲೂಕು ನಂಗಲಿ ಆರ್​ಟಿಓ ಚೆಕ್ ಪೋಸ್ಟ್ ಮೇಲೆ ಕೋಲಾರ ಲೋಕಾಯುಕ್ತ ಎಸ್ಪಿ ಧನಂಜಯ ನೇತೃತ್ವದ ತಂಡ ದಾಳಿ ಮಾಡಿದೆ.

ಆರ್​ಟಿಓ ಚೆಕ್ ಪೋಸ್ಟ್​​ ಸಿಬ್ಬಂದಿ ವಿರುದ್ಧ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೂಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ದೂರು ಕೇಳಿಬಂದ ಆರ್​ಟಿಓ ಚೆಕ್​ಪೋಸ್ಟ್​​ಗಳ ಮೇಲೆ ಅಧಿಕಾರಿಗಳು ಇಂದು (ಅ.08) ಬೆಳ್ಳಂ ಬೆಳಗ್ಗೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಎರಡೂ ಚೆಕ್ ಪೋಸ್ಟ್​​ಗಳಲ್ಲಿ ಸುಮಾರು 20 ಸಾವಿರಕ್ಕೂ ಅಧಿಕ ಹಣ ಪತ್ತೆಯಾಗಿದೆ. ಅಧಿಕಾರಿಗಳಿಂದ ಪರಿಶೀಲನೆ ಮುಂದುವರೆದಿದೆ.

ಇದನ್ನೂ ಓದಿ: ಮುಡಾ ಕೇಸ್​: ಭೈರತಿ ಸುರೇಶ್​, ಲೋಕಾಯುಕ್ತ ಎಸ್​ಪಿ ವಿರುದ್ಧ ದೂರು

ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿರುವ ಆರ್​ಟಿಓ ಚೆಕ್ ಪೋಸ್ಟ್​​ನಲ್ಲಿನ ಸಿಬ್ಬಂದಿ ವಿರುದ್ಧ ಲಂಚ ಪಡೆದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಬೀದರ್ ಹಾಗೂ ಕಲಬುರಗಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಬಿ.ಕೆ. ಉಮೇಶ್, ಕಲಬುರಗಿ ಲೋಕಾಯುಕ್ತ ಡಿವೈಎಸ್​ಪಿ ಗೀತಾ ಬೀದರ್ ಮತ್ತು ಡಿವೈಎಸ್​ಪಿ ಹಣುಮಂತರಾಯ ನೇತೃತ್ವದ 4 ತಂಡದಿಂದ ಪರಿಶೀಲನೆ ನಡೆಯುತ್ತಿದೆ.

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ್ ಬಳಿ ಇರುವ ಆರ್​ಟಿಓ ಚೆಕ್ ​ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲೇಶ ನೇತೃತ್ವದ ತಂಡ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಹಾಗೇ, ಬಳ್ಳಾರಿ ತಾಲೂಕಿನ ಪಿಡಿ‌ ಹಳ್ಳಿ ಸಮೀಪದ ಆರ್​ಟಿಓ ಚೆಕ್‌ ಪೋಸ್ಟ್ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದ ತಂಡ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ದಾಳಿ ಮಾಡಿದೆ. ಅಧಿಕಾರಿಗಳು ಚೆಕ್ ಪೋಸ್ಟ್​​ನಲ್ಲಿದ್ದ ಹಣವನ್ನು ವಶಪಡಿಸಿಕೊಂಡಿದ್ದು, ಶೋಧ ಕಾರ್ಯ ಮುಂದುವರೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:31 am, Tue, 8 October 24

Follow Us
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು