ಭ್ರಷ್ಟರ ಬೇಟೆ: ಬೆಂಗಳೂರು ಸೇರಿ ಕರ್ನಾಟಕದ 7 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

| Updated By: Ganapathi Sharma

Updated on: Mar 06, 2025 | 9:08 AM

ಗುರುವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದ ವಿವಿಧೆಡೆ ಭ್ರಷ್ಟರ ಬೇಟೆ ಆರಂಭಿಸಿದ್ದಾರೆ. ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ಏಳು ಜಿಲ್ಲೆಗಳ ವಿವಿಧ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಎಲ್ಲೆಲ್ಲಿ ದಾಳಿ ನಡೆದಿದೆ, ಯಾವೆಲ್ಲ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ ಎಂಬ ಮಾಹಿತಿ ಇಲ್ಲಿದೆ.

ಭ್ರಷ್ಟರ ಬೇಟೆ: ಬೆಂಗಳೂರು ಸೇರಿ ಕರ್ನಾಟಕದ 7 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ
ಲೋಕಾಯುಕ್ತ ದಾಳಿ
Follow us on

ಬೆಂಗಳೂರು, ಮಾರ್ಚ್​ 6: ಬೆಂಗಳೂರು (Bangalore) ಸೇರಿದಂತೆ ಕರ್ನಾಟಕದ 7 ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ಲೋಕಾಯುಕ್ತ ದಾಳಿ (Lokayukta Raid) ನಡೆದಿದೆ. ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. 8 ಮಂದಿ ಅಧಿಕಾರಿಗಳ ನಿವಾಸ, ಕಚೇರಿಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ DPAR ಚೀಫ್ ಇಂಜಿನಿಯರ್ ಟಿ.ಡಿ.ನಂಜುಡಪ್ಪ, ಬಿಬಿಎಂಪಿಯ ಎಕ್ಸಿಕ್ಯೂಟಿವ್​ ಇಂಜಿನಿಯರ್​ ಹೆಚ್​.ಬಿ.ಕಲ್ಲೇಶಪ್ಪ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

ಕೋಲಾರದಲ್ಲಿರುವ ಬೆಸ್ಕಾಂ ಎಇಇ ಜಿ.ನಾಗರಾಜ್​, ಕಲಬುರಗಿ ಲೋಕೋಪಯೋಗಿ ಚೀಫ್ ಇಂಜಿನಿಯರ್ ಜಗನ್ನಾಥ್, ದಾವಣಗೆರೆ ಫುಡ್ ಸೇಫ್ಟಿ ಅಧಿಕಾರಿ ಜಿ.ಎಸ್.ನಾಗರಾಜು, ಬಾಗಲಕೋಟೆ ಪಂಚಾಯತ್ ರಾಜ್ ಇಲಾಖೆ ಅಕೌಂಟೆಂಟ್ ಮಲ್ಲೇಶ್, ತುಮಕೂರು ಜಿಲ್ಲೆ ಶಿರಾ ತಾಲೂಕಿನ ತಾವರೆಕೆರೆ ಪಿಹೆಚ್​ಸಿ ವೈದ್ಯ ಜಗದೀಶ್ ಅವರ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ.

ಕೋಲಾರದಲ್ಲಿ ಬೆಸ್ಕಾಂ ಎಂಜಿನಿಯರ್ ಮನೆ, ಕಚೇರಿ ಮೇಲೆ ದಾಳಿ

ಕೋಲಾರದಲ್ಲಿ ಬೆಸ್ಕಾಂ AEE ಜಿ.ನಾಗರಾಜ್ ಮನೆ ಹಾಗೂ ಅವರಿಗೆ ಸೇರಿದ ಮೂರು ಕಡೆ ದಾಳಿ ನಡೆದಿದೆ. ನಾಗರಾಜ್ ಪ್ರಸ್ತುತ ಬೆಂಗಳೂರು ರಾಜಾಜಿನಗರ AEE ಬೆಸ್ಕಾಂ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಾಗರಾಜ್ ಅವರ ನಿವಾಸ, ಕೆ.ಆರ್.ಪುರಂ ಬಳಿಯ ಪ್ರಿಯದರ್ಶಿನಿ ಬಡಾವಣೆಯಲ್ಲಿನ ಮನೆ, ರಾಜಾಜಿನಗರ ಬೆಸ್ಕಾಂ ಕಚೇರಿ, ಅವರ ಸಂಬಂಧಿಕರೊಬ್ಬರ ಮನೆ ಮೇಲೆ ದಾಳಿ ನಡೆದಿದೆ.

ಇದನ್ನೂ ಓದಿ
ಕೆಪಿಎಸ್ಸಿ ಅಕ್ರಮಕ್ಕೆ ಬ್ರೇಕ್‌ ಹಾಕಲು ಕಾಯ್ದೆ ತಿದ್ದುಪಡಿಗೆ ನಿರ್ಧಾರ
ಕಲಬುರಗಿಯಲ್ಲಿ ಗರಿಷ್ಠ ತಾಪಮಾನ, ಮೈಸೂರಿನಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ
SSLC ಪ್ರಶ್ನೆ ಪತ್ರಿಕೆ ಲೀಕ್: ಯೂಟ್ಯೂಬ್, ಇನ್​ಸ್ಟಾದಲ್ಲಿ ವೈರಲ್​!
ಚಿಕ್ಕಬಳ್ಳಾಪುರ, ಅಮಾನವೀಯ ಘಟನೆ: ತಾಯಿ ಅಂತ್ಯಕ್ರಿಯೆಗೆ ಹಣಕ್ಕೆ ಬೇಡಿಕೆ

ನಾಗರಾಜ್ ಮೂಲತಃ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಮಲೇ ಮಹದೇಶ್ವರ ಬೆಟ್ಟದವರು. ಲೋಕಾಯುಕ್ತ ದಾಳಿ ವೇಳೆ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ನಾಗರಾಜ್ ಕೊಳ್ಳೇಗಾಲ ಬಳಿ 6 ಎಕರೆ ಜಮೀನು, ಬೆಂಗಳೂರಿನಲ್ಲಿ ಒಂದು ಮನೆ, ಎರಡು ನಿವೇಶನಗಳು, ಕೋಲಾರ ತಾಲ್ಲೂಕು ನರಸಾಪುರ ಬಳಿ ಭೂಮಿ ಹೊಂದಿರುವುದು ಗೊತ್ತಾಗಿದೆ. ಕೋಲಾರದಲ್ಲಿ ಬೆಸ್ಕಾಂ ಎಂಜಿನಿಯರಿಂಗ್ ಆಗಿ ನಾಜರಾಜ್ ಕೆಲಸ ಮಾಡಿದ್ದರು.

ಬಾಗಲಕೋಟೆಯಲ್ಲಿ ಲೋಕಾ ದಾಳಿ, ದಾಖಲೆಗಳ ಪರಿಶೀಲನೆ

ಬಾಗಲಕೋಟೆಯಲ್ಲಿ ಪಂಚಾಯತ್ ರಾಜ್ ಇಲಾಖೆ ಅಕೌಂಟೆಂಟ್ ಮಲ್ಲೇಶ್​ ಅವರ ಬಾಗಲಕೋಟೆ ಕಚೇರಿ, ಬೀಳಗಿ ತಾಲೂಕಿನ ತಳ್ಳಿಕೇರಿ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ನಡೆಯುತ್ತಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಲೋಕಾಯುಕ್ತ ಡಿವೈಎಸ್​ಪಿ ಸಿದ್ದೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಇದನ್ನೂ ಓದಿ: ಕೆಪಿಎಸ್ಸಿ ಅಕ್ರಮಕ್ಕೆ ಬ್ರೇಕ್‌ ಹಾಕಲು ಕಾಯ್ದೆ ತಿದ್ದುಪಡಿಗೆ ಸರ್ಕಾರ ನಿರ್ಧಾರ: ಏನೇನು ಬದಲಾವಣೆ? ಇಲ್ಲಿದೆ ವಿವರ

ತುಮಕೂರಿನಲ್ಲಿ ವೈದ್ಯ ಡಾ.ಜಗದೀಶ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆಯಲ್ಲಿರುವ ತಾವರೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯನಾಗಿರುವ ಜಗದೀಶ್​ ಅವರು ತುಮಕೂರಿನ ಮಂಜುನಾಥ್ ನಗರದಲ್ಲಿ ಹೊಂದಿರುವ ಜಗದೀಶ್​ ಕಾಂಪ್ಲೆಕ್ಸ್, ಶಿರಾ ತಾಲೂಕಿನ ಯಲ್ಪೆನಹಳ್ಳಿರುವ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಜಗದೀಶ್ ಪತ್ನಿ ರೂಪಾ, ಸೋದರ ಕಾಂತರಾಜ್ ಮನೆ ಮೇಲೂ ರೇಡ್ ಮಾಡಲಾಗಿದೆ. ಶಿರಾ ತಾಲೂಕಿನ ಬರಗೂರಿನಲ್ಲಿ ತಾಯಿಯ ಹೆಸರಿನಲ್ಲಿ ಆಸ್ತಿ ಮಾಡಿರುವುದು ದಾಳಿ ವೇಳೆ ಪತ್ತೆಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:15 am, Thu, 6 March 25