AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚದ ಹಣ ನುಂಗಿದ ಅಧಿಕಾರಿ: ವಾಂತಿ ಮಾಡಿಸಿ ಕಕ್ಕಿಸಿದ ಲೋಕಾಯುಕ್ತ ಪೊಲೀಸ್​

ಕೊಪ್ಪಳ ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕ ದಸ್ತಗೀರ್ ಅಲಿಯನ್ನು ಲೋಕಾಯುಕ್ತ ಪೊಲೀಸರು ಲಂಚ ಪಡೆಯುತ್ತಿರುವಾಗ ಟ್ರ್ಯಾಪ್ ಮಾಡಿದ್ದಾರೆ. ಎನ್‌ಜಿಒಗೆ ಪ್ರಮಾಣಪತ್ರ ನೀಡಲು ಎರಡು ಸಾವಿರ ರೂಪಾಯಿ ಲಂಚ ಪಡೆಯಲು ಯತ್ನಿಸಿದ ಅಲಿ, ಹಣವನ್ನು ನುಂಗಿದ್ದರು. ಪೊಲೀಸರು ವಾಂತಿ ಮಾಡಿಸಿ ಹಣವನ್ನು ಕಕ್ಕಿಸಿದ್ದಾರೆ.

ಲಂಚದ ಹಣ ನುಂಗಿದ ಅಧಿಕಾರಿ: ವಾಂತಿ ಮಾಡಿಸಿ ಕಕ್ಕಿಸಿದ ಲೋಕಾಯುಕ್ತ ಪೊಲೀಸ್​
ಲಂಚದ ಹಣ ನುಂಗಿದ ಅಧಿಕಾರಿ: ವಾಂತಿ ಮಾಡಿಸಿ ಕಕ್ಕಿಸಿದ ಲೋಕಾಯುಕ್ತ ಪೊಲೀಸ್​
ಸಂಜಯ್ಯಾ ಚಿಕ್ಕಮಠ
| Edited By: |

Updated on: Dec 21, 2024 | 9:14 PM

Share

ಕೊಪ್ಪಳ, ಡಿಸೆಂಬರ್​ 21: ಕೊಪ್ಪಳ ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕ ಇಂದು ಸಂಜೆ ಕೊಪ್ಪಳ ಲೋಕಾಯುಕ್ತ (Lokayukta) ಪೊಲೀಸರ ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ. ದಸ್ತಗಿರ್ ಅಲಿ, ಲೋಕಾ ಬಲೆಗೆ ಬಿದ್ದ ಅಧಿಕಾರಿ. ಲಂಚದ ಹಣ ನುಂಗಿದ ಅಧಿಕಾರಿ ದಸ್ತಗಿರ್ ಅಲಿಗೆ ವಾಂತಿ ಮಾಡಿಸಿ ಲೋಕಾಯುಕ್ತ ಅಧಿಕಾರಿಗಳು ಕಕ್ಕಿಸಿದ್ದಾರೆ.

ಎನ್​ಜಿಓಗೆ ಪ್ರಮಾಣ ಪತ್ರ ನೀಡಲು ಭೀಮನಗೌಡ ಅನ್ನೋರಿಗೆ ದಸ್ತಗಿರ್ ಅಲಿ ಎರಡು ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಭೀಮನಗೌಡ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಕೊಪ್ಪಳ ನಗರದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಕಚೇರಿಯಲ್ಲಿ ದಸ್ತಗಿರ್ ಅಲಿಯನ್ನು ಟ್ರ್ಯಾಪ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಲಂಚದ ಹಣ ನುಂಗಿ ಭಂಡತನ ಮೆರೆದೆ ಅಧಿಕಾರಿ

ಲೋಕಾಯುಕ್ತ ಪೊಲೀಸರ ಬಲೆಗೆ ಬೀಳ್ತಿದ್ದಂತೆ ದಸ್ತಗಿರ್ ಅಲಿ ಹೈಡ್ರಾಮಾವೇ ಮಾಡಿದ್ದಾರೆ. ಲಂಚ ಪಡೆದಿದ್ದ ಎರಡು ಸಾವಿರ ರೂಪಾಯಿ ನೋಟನ್ನು ನುಂಗಿ ಸಾಕ್ಷಿನಾಶ ಮಾಡಲು ಯತ್ನಿಸಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ನೀರು ಕುಡಿಸಿ ವಾಂತಿ ಮಾಡಿಸಿ, ಹಣ ಹೊರಗೆ ತೆಗೆಸಿದ್ದಾರೆ.

ಇದನ್ನೂ ಓದಿ: ಸಾರ್ವಜನಿಕರಿಂದ ದೂರು: ಬೆಸ್ಕಾಂ, ಜಲಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಸದ್ಯ ದಸ್ತಗಿರ್ ಅಲಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಾಯಚೂರು ಲೋಕಾಯುಕ್ತ ಎಸ್ಪಿ ಶಶಿಧರ್ ಮಾರ್ಗದರ್ಶನದಲ್ಲಿ ದಾಳಿ ನಡೆದಿದ್ದು, ಕೊಪ್ಪಳ ಲೋಕಾಯುಕ್ತ ಪಿಐ ನಾಗರತ್ನ, ಸುನೀಲ್ ಮೇಗಿಲಮನಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

ಅಬಕಾರಿ ಇನ್ಸಪೆಕ್ಟರ್​ಗೆ ಲೋಕಾ ಬಿಸಿ

ಇನ್ನು ಇತ್ತೀಚೆಗೆ ಕೊಪ್ಪಳ ನಗರದಲ್ಲಿರುವ ಅಬಕಾರಿ ಇಲಾಖೆಯಲ್ಲಿ, ಅಬಕಾರಿ ಇನ್ಸಪೆಕ್ಟರ್ ಅಂತ ಕೆಲಸ ಮಾಡುತ್ತಿರುವ ರಮೇಶ್ ಅಗಡಿ ಅರಳಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಶಾಕ್ ನೀಡಿದ್ದರು. ಕೊಪ್ಪಳ ನಗರದ ಬೃಂದಾವನ ನಗರದಲ್ಲಿರುವ ಬಾಡಿಗೆ ಮನೆ, ಬಿ.ಟಿ ಪಾಟೀಲ್ ನಗರದಲ್ಲಿರುವ ಕಚೇರಿ ಮತ್ತು ಸ್ವಗ್ರಾಮ ಜಿಲ್ಲೆಯ ಯಲಬುರ್ಗಾ ತಾಲೂಕಿನ ತುಮ್ಮರಗುದ್ದಿ ಗ್ರಾಮದಲ್ಲಿರುವ ತೋಟದ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳ ತಂಡ, ಮುಂಜಾನೆಯಿಂದ ಸಂಜೆವರಗೆ ದಾಖಲಾತಿಗಳ ಪರಿಶೀಲನೆ ಮಾಡಿದ್ದರು.

ಇದನ್ನೂ ಓದಿ: 4 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮುಲ್ಕಿ ಆರ್‌ಐ

ರಾಯಚೂರು ಲೋಕಾಯುಕ್ತ ಎಸ್ಪಿ ಎಂಎನ್ ಶಶಿದರ್, ನೇತೃತ್ವದಲ್ಲಿ ಡಿವೈಎಸ್ಪಿ ಶೀಲವಂತ, ಸಿಪಿಐ ಸುನೀಲ್ ಮೇಗಿಲಮನಿ ತಂಡ, ಪರಿಶೀಲನೆ ಮಾಡಿದ್ದರು. ನಸುಕಿನ ಜಾವ ಮೂರು ಕಡೆ ಏಕಕಾಲದಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು ಅನೇಕ ಮಾಹಿತಿಗಳನ್ನು ಸಂಗ್ರಹಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ