AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲೆಕ್ಷನ್ ಮುಗಿಯುತ್ತಿದ್ದಂತೆಯೇ ರಿಲ್ಯಾಕ್ಸ್ ಮೂಡ್​ಗೆ ಜಾರಿದ ಸಿದ್ದು-ಡಿಕೆಶಿ: ಹೋಗಿದ್ದೆಲ್ಲಿಗೆ?

ಇಂದಿಗೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮತದಾನ ಅಂತ್ಯವಾಗಿದೆ. ನಿರಂತರ ಎಲೆಕ್ಷನ್​​ ಸಮಾವೇಶ, ರ್ಯಾಲಿ, ಕ್ಯಾಂಪೇನ್​ಗಳಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಿಲ್ಯಾಕ್ಸ್ ಮೂಡ್ ಗೆ ಜಾರಿದ್ದಾರೆ. ಹೌದು...ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ವಿಶ್ರಾಂತಿ ಪಡೆಯಲು ಪ್ರತ್ಯೇಕವಾಗಿ ರೆಸಾರ್ಟ್​ಗೆ ತೆರಳಿದ್ದಾರೆ.​

ಎಲೆಕ್ಷನ್ ಮುಗಿಯುತ್ತಿದ್ದಂತೆಯೇ ರಿಲ್ಯಾಕ್ಸ್ ಮೂಡ್​ಗೆ ಜಾರಿದ ಸಿದ್ದು-ಡಿಕೆಶಿ: ಹೋಗಿದ್ದೆಲ್ಲಿಗೆ?
ಡಿಕೆ ಶಿವಕುಮಾರ್-ಸಿದ್ದರಾಮಯ್ಯ
ರಮೇಶ್ ಬಿ. ಜವಳಗೇರಾ
|

Updated on: May 07, 2024 | 8:38 PM

Share

ಬೆಂಗಳೂರು, (ಮೇ.07): ಕರ್ನಾಟಕದಲ್ಲಿ(Karnataka) ನಡೆದ ಎರಡು ಹಂತ ಲೋಕಸಭಾ ಚುನಾವಣೆ (Loksabha Elections 2024) ಇಂದಿಗೆ ಮುಕ್ತಾಯವಾಗಿದೆ. ಈ ಬಾರಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲ್ಲಬೇಕೆಂದು ಪಣತೊಟ್ಟಿದ್ದ ಕಾಂಗ್ರೆಸ್ (Congress)​ ತಮ್ಮ ಗ್ಯಾರಂಟಿಗಳನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ಪ್ರಚಾರ ನಡೆಸಿದೆ. ಅದರಲ್ಲೂ ಮುಖ್ಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್(DJ Shivakumar) ಅವರು ನಿರಂತರವಾಗಿ ಎಲೆಕ್ಷನ್​​ ಸಮಾವೇಶ, ರ್ಯಾಲಿ, ಕ್ಯಾಂಪೇನ್​ಗಳಲ್ಲಿ ಭಾಗಿಯಾಗಿದ್ದರು. ಕಳೆದ ಎರಡೂ ತಿಂಗಳಿನಿಂದ ಕಾಲಿಗೆ ಚಕ್ರಕಟ್ಟಿಕೊಂಡವರಂತೆ ರಾಜ್ಯದ ಮೂಲೆ-ಮೂಲೆಗೆ ತೆರಳಿ ತಮ್ಮ ಅಭ್ಯರ್ಥಿಗಳ ಪ್ರಚಾರ ಮಾಡಿದ್ದಾರೆ. ಇದೀಗ ಚುನಾವಣೆ ಮುಗಿಯುತ್ತಿದ್ದಂತೆಯೇ ಉಭಯ ನಾಯಕರು ವಿಶಾಂತ್ರಿಗೆ ಜಾರಿದ್ದಾರೆ. ಹೌದು..ಡಿಸಿಎಂ ಡಿಕೆ ಶಿವಕುಮಾರ್ ಚಿಕ್ಕಮಗಳೂರಿನ ರೆಸಾರ್ಟ್​ವೊಂದಕ್ಕೆ ಹೋಗಿದ್ದರೆ, ಸಿದ್ದರಾಮಯ್ಯ ಊಟಿಯತ್ತ ಮುಖ ಮಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಡಿಕೆ ಶಿವಕುಮಾರ್ ಕುಟುಂಬ ವಾಸ್ತವ್ಯ

ನಿರಂತರ ಸಮಾವೇಶ, ರ್ಯಾಲಿ, ಪ್ರಚಾರದಲ್ಲಿ ಭಾಗಿಯಾಗಿದ್ದ ಡಿಕೆ ಶಿವಕುಮಾರ್​ ಅವರು ಇದೀಗ ವಿಶಾಂತ್ರಿ ಭಯಸಿದ್ದಾರೆ. ಆದ್ರೆ, ಅವರ ಮೇಲೆ ಹಾಸನ ಪೆನ್​ಡ್ರೈವ್​ ಬಿಡುಗಡೆ ಆರೋಪ ಕೇಳಿಬಂದಿದೆ. ಈ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್​ ನಾಯಕರು ಡಿಕೆ ಶಿವಕುಮಾರ್​ ಮೇಲೆ ಮುಗಿಬಿದ್ದಿದ್ದಾರೆ. ಇದ್ಯಾವುದನ್ನು ತಲೆಕೆಡಿಸಿಕೊಳ್ಳದ ಡಿಕೆಶಿ ಕುಟುಂಬ ಸಮೇತ ರೆಸಾರ್ಟ್​ ಮೊರೆ ಹೋಗಿದ್ದಾರೆ. ಚಿಕ್ಕಮಗಳೂರಿನ ಸಾರಾಯ್​ ರೆಸಾರ್ಟ್​ನಲ್ಲೇ ಡಿಕೆಶಿ ಕುಟುಂಬ ವಾಸ್ತವ್ಯ ಹೂಡಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಜತೆ ಸೋದರ ಡಿ.ಕೆ.ಸುರೇಶ್, ಶಾಸಕರಾದ ಡಾ.ರಂಗನಾಥ್, ಇಕ್ಬಾಲ್ ಹುಸೇನ್ ಕೂಡ ರೆಸಾರ್ಟ್​ಗೆ ತಂಗಿದ್ದಾರೆ. ಸೆರಾಯ್ ರೆಸಾರ್ಟ್​ ಡಿ.ಕೆ.ಶಿವಕುಮಾರ್ ಅಳಿಯ ಅಮಾರ್ತ್ಯ ಒಡೆತನದಾಗಿದ್ದು, ನಾಳೆ(ಮೆ 08) ಸಂಜೆವರೆಗೆ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ತಿಳಿದುಬಂದಿದೆ.

ಸೆರಾಯ್ ರೆಸಾರ್ಟ್ ಬಿಗಿ ಭದ್ರತೆ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಹಾಸನ ಪೆನ್​ಡ್ರೈವ್​ ಆರೋಪ ಕೇಳಿಬಂದಿದೆ. ಹೀಗಾಗಿ ಜೆಡಿಎಸ್​ ನಾಯಕರು, ಕಾರ್ಯಕರ್ತರು ಡಿಕೆಶಿ ವಿರುದ್ಧ ಪ್ರತಿಭಟನೆಗಿಳಿದಿದ್ದಾರೆ. ಇದರ ಮಧ್ಯೆ ಡಿಕೆ ಶಿವಕುಮಾರ್ ರೆಸಾರ್ಟ್​ನಲ್ಲಿ ವಿಶ್ರಾಂತಿಗೆ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತವಾಗಿ ಚಿಕ್ಕಮಗಳೂರು ತಾಲೂಕಿನ ಮೂಕ್ತಿಹಳ್ಳಿ ಬಳಿಯ ಸೆರಾಯ್ ರೆಸಾರ್ಟ್ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಓರ್ವ DySP, ಇನ್ಸ್​​ಪೆಕ್ಟರ್ ಸೇರಿ 20ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ರೆಸಾರ್ಟ್​ ನೊಳಗೆ ಮಾಧ್ಯಮಕ್ಕೆ ನಿರ್ಬಂಧ ಹೇರಲಾಗಿದೆ. ಇನ್ನು ಕಾಂಗ್ರೆಸ್ ಶಾಸಕರು ಸೇರಿದಂತೆ ಮುಖಂಡರ ಭೇಟಿಗೂ ಅವಕಾಶ ನಿರಾಕರಿಸಲಾಗಿದೆ.

ಊಟಿಯತ್ತ ಸಿದ್ದರಾಮಯ್ಯ ಚಿತ್ತ

ಸದ್ಯ ರಾಜ್ಯದಲ್ಲಿ ಲೋಕಸಭಾ ಮತದಾನ ಇಂದಿಗೆ ಅಂತ್ಯವಾಗಿದೆ. ಜೂನ್ 4 ರಂದು ಫಲಿತಾಂಶದ ಮೇಲೆ ಎಲ್ಲರ ಕಣ್ಣು ನೆಡಲಿದೆ. ಹಾಸನ ಅಶ್ಲೀಲ ವಿಡಿಯೋ ಪ್ರಕರಣ, ಮಹಿಳೆಯ ಕಿಡ್ನಾಪ್​ ಕೇಸ್​ನಲ್ಲಿ ಕಾಂಗ್ರೆಸ್​- ಜೆಡಿಎಸ್​ ಮಧ್ಯೆ ವಾಕ್ಸಮರ ನಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್​ ರೇವಣ್ಣ ವಿದೇಶಕ್ಕೆ ಹೋಗಿದ್ದಕ್ಕೆ ರಾಜ್ಯ ಸರ್ಕಾರದ ಮೇಲೆ ಬಿಜೆಪಿ ನಾಯಕರು ಆರೋಪ ಮಾಡುತ್ತಿದ್ದಾರೆ. ಇನ್ನು ವಿಡಿಯೋಗಳನ್ನ ರಿಲೀಸ್ ಮಾಡಿರೋದು ಡಿಸಿಎಂ ಡಿಕೆ ಶಿವಕುಮಾರ್ ಎಂದು ಗಂಭೀರ ಆರೋಪಗಳನ್ನು ಮಾಡಲಾಗಿದೆ. ಈ ಎಲ್ಲ ಬೆಳವಣಿಗೆ ರಾಜ್ಯದಲ್ಲಿ ನಡೆಯುತ್ತಿದ್ದರು ಸಿಎಂ ಸಿದ್ದರಾಮಯ್ಯ, ಇವುಗಳಿಗೆ ಯಾವುದಕ್ಕೂ ತಲೆ ಕಡೆಸಿಕೊಳ್ಳದೇ ವಿಶ್ರಾಂತಿಗೆ ಹೋಗಿದ್ದಾರೆ. ಸಚಿವ ಹೆಚ್​.ಸಿ ಮಹದೇವಪ್ಪ ಜೊತೆ 3 ದಿನಗಳ ಕಾಲ ವಿಶ್ರಾಂತಿ ಪಡೆಯಲು ಊಟಿಗೆ ತೆರಳುತ್ತಿದ್ದಾರೆ. ಬೆಂಗಳೂರಿನ ಹೆಚ್​ಎಎಲ್​ ವಿಮಾನ ನಿಲ್ದಾಣದ ಮೂಲಕ ಮೈಸೂರಿಗೆ ತೆರಳಲಿದ್ದಾರೆ. ಬಳಿಕ ಮೈಸೂರಿನಿಂದ ಊಟಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಹೆಚ್​.ಸಿ ಮಹದೇವಪ್ಪ ತೆರಳಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
ಪಹಲ್ಗಾಮ್ ದಾಳಿಯ ಈ ಭೀಕರ ವಿಡಿಯೋ ಎಂದಿಗೂ ಮರೆಯುವಂತಿಲ್ಲ
ಪಹಲ್ಗಾಮ್ ದಾಳಿಯ ಈ ಭೀಕರ ವಿಡಿಯೋ ಎಂದಿಗೂ ಮರೆಯುವಂತಿಲ್ಲ
ಪ್ರತಿಕೃತಿ ದಹನ ಮಾಡಲು ಹೋಗಿ ಮಹಿಳೆಯ ದುಪಟ್ಟಾಗೆ ತಗುಲಿದ ಬೆಂಕಿ
ಪ್ರತಿಕೃತಿ ದಹನ ಮಾಡಲು ಹೋಗಿ ಮಹಿಳೆಯ ದುಪಟ್ಟಾಗೆ ತಗುಲಿದ ಬೆಂಕಿ