AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲೆಕ್ಷನ್ ಮುಗಿಯುತ್ತಿದ್ದಂತೆಯೇ ರಿಲ್ಯಾಕ್ಸ್ ಮೂಡ್​ಗೆ ಜಾರಿದ ಸಿದ್ದು-ಡಿಕೆಶಿ: ಹೋಗಿದ್ದೆಲ್ಲಿಗೆ?

ಇಂದಿಗೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮತದಾನ ಅಂತ್ಯವಾಗಿದೆ. ನಿರಂತರ ಎಲೆಕ್ಷನ್​​ ಸಮಾವೇಶ, ರ್ಯಾಲಿ, ಕ್ಯಾಂಪೇನ್​ಗಳಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಿಲ್ಯಾಕ್ಸ್ ಮೂಡ್ ಗೆ ಜಾರಿದ್ದಾರೆ. ಹೌದು...ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ವಿಶ್ರಾಂತಿ ಪಡೆಯಲು ಪ್ರತ್ಯೇಕವಾಗಿ ರೆಸಾರ್ಟ್​ಗೆ ತೆರಳಿದ್ದಾರೆ.​

ಎಲೆಕ್ಷನ್ ಮುಗಿಯುತ್ತಿದ್ದಂತೆಯೇ ರಿಲ್ಯಾಕ್ಸ್ ಮೂಡ್​ಗೆ ಜಾರಿದ ಸಿದ್ದು-ಡಿಕೆಶಿ: ಹೋಗಿದ್ದೆಲ್ಲಿಗೆ?
ಡಿಕೆ ಶಿವಕುಮಾರ್-ಸಿದ್ದರಾಮಯ್ಯ
ರಮೇಶ್ ಬಿ. ಜವಳಗೇರಾ
|

Updated on: May 07, 2024 | 8:38 PM

Share

ಬೆಂಗಳೂರು, (ಮೇ.07): ಕರ್ನಾಟಕದಲ್ಲಿ(Karnataka) ನಡೆದ ಎರಡು ಹಂತ ಲೋಕಸಭಾ ಚುನಾವಣೆ (Loksabha Elections 2024) ಇಂದಿಗೆ ಮುಕ್ತಾಯವಾಗಿದೆ. ಈ ಬಾರಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲ್ಲಬೇಕೆಂದು ಪಣತೊಟ್ಟಿದ್ದ ಕಾಂಗ್ರೆಸ್ (Congress)​ ತಮ್ಮ ಗ್ಯಾರಂಟಿಗಳನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ಪ್ರಚಾರ ನಡೆಸಿದೆ. ಅದರಲ್ಲೂ ಮುಖ್ಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್(DJ Shivakumar) ಅವರು ನಿರಂತರವಾಗಿ ಎಲೆಕ್ಷನ್​​ ಸಮಾವೇಶ, ರ್ಯಾಲಿ, ಕ್ಯಾಂಪೇನ್​ಗಳಲ್ಲಿ ಭಾಗಿಯಾಗಿದ್ದರು. ಕಳೆದ ಎರಡೂ ತಿಂಗಳಿನಿಂದ ಕಾಲಿಗೆ ಚಕ್ರಕಟ್ಟಿಕೊಂಡವರಂತೆ ರಾಜ್ಯದ ಮೂಲೆ-ಮೂಲೆಗೆ ತೆರಳಿ ತಮ್ಮ ಅಭ್ಯರ್ಥಿಗಳ ಪ್ರಚಾರ ಮಾಡಿದ್ದಾರೆ. ಇದೀಗ ಚುನಾವಣೆ ಮುಗಿಯುತ್ತಿದ್ದಂತೆಯೇ ಉಭಯ ನಾಯಕರು ವಿಶಾಂತ್ರಿಗೆ ಜಾರಿದ್ದಾರೆ. ಹೌದು..ಡಿಸಿಎಂ ಡಿಕೆ ಶಿವಕುಮಾರ್ ಚಿಕ್ಕಮಗಳೂರಿನ ರೆಸಾರ್ಟ್​ವೊಂದಕ್ಕೆ ಹೋಗಿದ್ದರೆ, ಸಿದ್ದರಾಮಯ್ಯ ಊಟಿಯತ್ತ ಮುಖ ಮಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಡಿಕೆ ಶಿವಕುಮಾರ್ ಕುಟುಂಬ ವಾಸ್ತವ್ಯ

ನಿರಂತರ ಸಮಾವೇಶ, ರ್ಯಾಲಿ, ಪ್ರಚಾರದಲ್ಲಿ ಭಾಗಿಯಾಗಿದ್ದ ಡಿಕೆ ಶಿವಕುಮಾರ್​ ಅವರು ಇದೀಗ ವಿಶಾಂತ್ರಿ ಭಯಸಿದ್ದಾರೆ. ಆದ್ರೆ, ಅವರ ಮೇಲೆ ಹಾಸನ ಪೆನ್​ಡ್ರೈವ್​ ಬಿಡುಗಡೆ ಆರೋಪ ಕೇಳಿಬಂದಿದೆ. ಈ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್​ ನಾಯಕರು ಡಿಕೆ ಶಿವಕುಮಾರ್​ ಮೇಲೆ ಮುಗಿಬಿದ್ದಿದ್ದಾರೆ. ಇದ್ಯಾವುದನ್ನು ತಲೆಕೆಡಿಸಿಕೊಳ್ಳದ ಡಿಕೆಶಿ ಕುಟುಂಬ ಸಮೇತ ರೆಸಾರ್ಟ್​ ಮೊರೆ ಹೋಗಿದ್ದಾರೆ. ಚಿಕ್ಕಮಗಳೂರಿನ ಸಾರಾಯ್​ ರೆಸಾರ್ಟ್​ನಲ್ಲೇ ಡಿಕೆಶಿ ಕುಟುಂಬ ವಾಸ್ತವ್ಯ ಹೂಡಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಜತೆ ಸೋದರ ಡಿ.ಕೆ.ಸುರೇಶ್, ಶಾಸಕರಾದ ಡಾ.ರಂಗನಾಥ್, ಇಕ್ಬಾಲ್ ಹುಸೇನ್ ಕೂಡ ರೆಸಾರ್ಟ್​ಗೆ ತಂಗಿದ್ದಾರೆ. ಸೆರಾಯ್ ರೆಸಾರ್ಟ್​ ಡಿ.ಕೆ.ಶಿವಕುಮಾರ್ ಅಳಿಯ ಅಮಾರ್ತ್ಯ ಒಡೆತನದಾಗಿದ್ದು, ನಾಳೆ(ಮೆ 08) ಸಂಜೆವರೆಗೆ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ತಿಳಿದುಬಂದಿದೆ.

ಸೆರಾಯ್ ರೆಸಾರ್ಟ್ ಬಿಗಿ ಭದ್ರತೆ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಹಾಸನ ಪೆನ್​ಡ್ರೈವ್​ ಆರೋಪ ಕೇಳಿಬಂದಿದೆ. ಹೀಗಾಗಿ ಜೆಡಿಎಸ್​ ನಾಯಕರು, ಕಾರ್ಯಕರ್ತರು ಡಿಕೆಶಿ ವಿರುದ್ಧ ಪ್ರತಿಭಟನೆಗಿಳಿದಿದ್ದಾರೆ. ಇದರ ಮಧ್ಯೆ ಡಿಕೆ ಶಿವಕುಮಾರ್ ರೆಸಾರ್ಟ್​ನಲ್ಲಿ ವಿಶ್ರಾಂತಿಗೆ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತವಾಗಿ ಚಿಕ್ಕಮಗಳೂರು ತಾಲೂಕಿನ ಮೂಕ್ತಿಹಳ್ಳಿ ಬಳಿಯ ಸೆರಾಯ್ ರೆಸಾರ್ಟ್ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಓರ್ವ DySP, ಇನ್ಸ್​​ಪೆಕ್ಟರ್ ಸೇರಿ 20ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ರೆಸಾರ್ಟ್​ ನೊಳಗೆ ಮಾಧ್ಯಮಕ್ಕೆ ನಿರ್ಬಂಧ ಹೇರಲಾಗಿದೆ. ಇನ್ನು ಕಾಂಗ್ರೆಸ್ ಶಾಸಕರು ಸೇರಿದಂತೆ ಮುಖಂಡರ ಭೇಟಿಗೂ ಅವಕಾಶ ನಿರಾಕರಿಸಲಾಗಿದೆ.

ಊಟಿಯತ್ತ ಸಿದ್ದರಾಮಯ್ಯ ಚಿತ್ತ

ಸದ್ಯ ರಾಜ್ಯದಲ್ಲಿ ಲೋಕಸಭಾ ಮತದಾನ ಇಂದಿಗೆ ಅಂತ್ಯವಾಗಿದೆ. ಜೂನ್ 4 ರಂದು ಫಲಿತಾಂಶದ ಮೇಲೆ ಎಲ್ಲರ ಕಣ್ಣು ನೆಡಲಿದೆ. ಹಾಸನ ಅಶ್ಲೀಲ ವಿಡಿಯೋ ಪ್ರಕರಣ, ಮಹಿಳೆಯ ಕಿಡ್ನಾಪ್​ ಕೇಸ್​ನಲ್ಲಿ ಕಾಂಗ್ರೆಸ್​- ಜೆಡಿಎಸ್​ ಮಧ್ಯೆ ವಾಕ್ಸಮರ ನಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್​ ರೇವಣ್ಣ ವಿದೇಶಕ್ಕೆ ಹೋಗಿದ್ದಕ್ಕೆ ರಾಜ್ಯ ಸರ್ಕಾರದ ಮೇಲೆ ಬಿಜೆಪಿ ನಾಯಕರು ಆರೋಪ ಮಾಡುತ್ತಿದ್ದಾರೆ. ಇನ್ನು ವಿಡಿಯೋಗಳನ್ನ ರಿಲೀಸ್ ಮಾಡಿರೋದು ಡಿಸಿಎಂ ಡಿಕೆ ಶಿವಕುಮಾರ್ ಎಂದು ಗಂಭೀರ ಆರೋಪಗಳನ್ನು ಮಾಡಲಾಗಿದೆ. ಈ ಎಲ್ಲ ಬೆಳವಣಿಗೆ ರಾಜ್ಯದಲ್ಲಿ ನಡೆಯುತ್ತಿದ್ದರು ಸಿಎಂ ಸಿದ್ದರಾಮಯ್ಯ, ಇವುಗಳಿಗೆ ಯಾವುದಕ್ಕೂ ತಲೆ ಕಡೆಸಿಕೊಳ್ಳದೇ ವಿಶ್ರಾಂತಿಗೆ ಹೋಗಿದ್ದಾರೆ. ಸಚಿವ ಹೆಚ್​.ಸಿ ಮಹದೇವಪ್ಪ ಜೊತೆ 3 ದಿನಗಳ ಕಾಲ ವಿಶ್ರಾಂತಿ ಪಡೆಯಲು ಊಟಿಗೆ ತೆರಳುತ್ತಿದ್ದಾರೆ. ಬೆಂಗಳೂರಿನ ಹೆಚ್​ಎಎಲ್​ ವಿಮಾನ ನಿಲ್ದಾಣದ ಮೂಲಕ ಮೈಸೂರಿಗೆ ತೆರಳಲಿದ್ದಾರೆ. ಬಳಿಕ ಮೈಸೂರಿನಿಂದ ಊಟಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಹೆಚ್​.ಸಿ ಮಹದೇವಪ್ಪ ತೆರಳಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು