AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾವಿ ಸಚಿವರ ಕ್ಷೇತ್ರದಲ್ಲಿಯೇ ಹಿನ್ನಡೆ: ಸಭೆಯಲ್ಲಿ ರಾಹುಲ್​ ಗಾಂಧಿ ಸಿಡಿಮಿಡಿ, ವರದಿ ನೀಡುವಂತೆ ಸೂಚನೆ

Loksabha Election Results 2024: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಕರಣವೊಂದರ ಸಂಬಂಧ ಕೋರ್ಟ್​ಗೆ ಹಾಜರಾಗಲು ಇಂದು (ಜೂನ್ 07) ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳ ರಾಹುಲ್​, ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ ನೂತನ ಸಂಸದರು ಮತ್ತು ಪರಾಜಿತ ಅಭ್ಯರ್ಥಿಗಳ ಜೊತೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಚುನಾವಣಾ ಫಲಿತಾಂಶ ಕುರಿತು ಪರಾಮರ್ಶೆ ನಡೆಸಿದರು. ಆದ್ರೆ, ಫಲಿತಾಂಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ವರದಿ ಕೇಳಿದ್ದಾರೆ ಎಂದು ತಿಳಿದುಬಂದಿದೆ.

ಪ್ರಭಾವಿ ಸಚಿವರ ಕ್ಷೇತ್ರದಲ್ಲಿಯೇ ಹಿನ್ನಡೆ: ಸಭೆಯಲ್ಲಿ ರಾಹುಲ್​ ಗಾಂಧಿ ಸಿಡಿಮಿಡಿ, ವರದಿ ನೀಡುವಂತೆ ಸೂಚನೆ
ರಾಹುಲ್ ಗಾಂಧಿ ಸಭೆ
ಪ್ರಸನ್ನ ಗಾಂವ್ಕರ್​
| Edited By: |

Updated on:Jun 07, 2024 | 4:56 PM

Share

ಬೆಂಗಳೂರು, (ಜೂನ್ 07): ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ ಕರ್ನಾಟಕದ ನೂತನ ಸಂಸದರು ಮತ್ತು ಪರಾಜಿತ ಅಭ್ಯರ್ಥಿಗಳ ಜೊತೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಚುನಾವಣಾ ಫಲಿತಾಂಶ (Loksabha Results 2024) ಕುರಿತು ಪರಾಮರ್ಶೆ ನಡೆಸಿದರು. ಇಂದು (ಜೂನ್ 07) ಬೆಂಗಳೂರಿನ ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತಿತರರು ಉಪಸ್ಥಿತರಿದ್ದರು. ಈ ವೇಳೆ ಇದೇ ವೇಳೆ ಗೆದ್ದವರಿಗೆ ಅಭಿನಂದನೆ ಹಾಗೂ ಸೋತ ಅಭ್ಯರ್ಥಿಗಳಿಗೆ ಧೈರ್ಯ ಹೇಳಿದ್ದಾರೆ. ಅಲ್ಲದೇ ರಾಜ್ಯ ಹಾಗೂ ದೇಶದ ಅಭಿವೃದ್ಧಿ ದೃಷ್ಟಿಕೋನದಿಂದ ಮುಂದೆ ಕೈಗೊಳ್ಳಬೇಕಿರುವ ಕಾರ್ಯಗಳ ಕುರಿತು ಈ ವೇಳೆ ಚರ್ಚಿಸಲಾಯಿತು. ಬಳಿಕ ನಡೆದ ಮತ್ತೊಂದು ಪ್ರಮುಖರ ಸಭೆಯಲ್ಲಿ 18 ಕ್ಷೇತ್ರಗಳಲ್ಲಿ ಲೀಡ್‌ ಕೊಡಿಸಲು ವಿಫಲರಾದ ಸಚಿವರ ವಿರುದ್ಧ ರಾಹುಲ್‌ ಗಾಂಧಿ ಅಸಮಾಧಾನ ಹೊರಹಾಕಿದ್ದು, ಈ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಿ ದೆಹಲಿಗೆ ಹಾರಿದ್ದಾರೆ ಎಂದು ತಿಳಿದುಬಂದಿದೆ.

ವರದಿ ಕೇಳಿದ ರಾಹುಲ್ ಗಾಂಧಿ

ಎಲ್ಲಾ 28 ಕಾಂಗ್ರೆಸ್‌ ಅಭ್ಯರ್ಥಿಗಳ ಜತೆ ರಾಹುಲ್ ಗಾಂಧಿ ಸಭೆ ನಡೆಸಿದ್ದು, ಗೆದ್ದವರಿಗೆ ಅಭಿನಂದನೆ ಹಾಗೂ ಸೋತ ಅಭ್ಯರ್ಥಿಗಳಿಗೆ ಧೈರ್ಯ ಹೇಳಿದ್ದಾರೆ.  ಬಳಿಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಜೊತೆ ಸಭೆ ನಡೆಸಿದರು. ಈ ಸಭೆಯಲ್ಲಿ ಚುನಾವಣಾ ಜವಾಬ್ದಾರಿ ನಿರ್ವಹಿಸುವಲ್ಲಿ ವಿಫಲರಾದ ಸಚಿವರ ಬಗ್ಗೆ ಸಭೆಯಲ್ಲಿ ರಾಹುಲ್ ಗಾಂಧಿ ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ. ಲೀಡ್ ಕಡಿಮೆ ಕೊಟ್ಟ ಸಚಿವರ ಬಗ್ಗೆ ರಣದೀಪ್‌ ಸುರ್ಜೇವಾಲಾ ಮಾಹಿತಿ ನೀಡಿದ್ದಾರೆ. ಈ ವೇಳೆ 18 ಸಚಿವರು ಲೀಡ್ ಕೊಡಿಸುವಲ್ಲಿ ವಿಫಲ‌ ಎಂದು ವರದಿಯಲ್ಲಿ ತಿಳಿಸಲಾಗಿದೆ. ತಮ್ಮ ಜಿಲ್ಲೆಯಲ್ಲಿ ಅಭ್ಯರ್ಥಿ ಗೆಲ್ಲಿಸುವುದರಲ್ಲೂ ವಿಫಲರಾಗಿದ್ದಕ್ಕೆ ಸಚಿವರ ವಿರುದ್ಧ ರಾಹುಲ್‌ ಗಾಂಧಿ ಸಿಡಿಮಿಡಿಗೊಂಡಿದ್ದಾರೆ.

ಇದನ್ನೂ ಓದಿ: ಸಚಿವರ ಕ್ಷೇತ್ರದಲ್ಲೇ ಮತ ಕಡಿಮೆ; ನನಗೂ, ಸಿಎಂಗೂ ರಾಹುಲ್​ ಗಾಂಧಿ ರಿಪೋರ್ಟ್ ಕೇಳಿದ್ರು-ಡಿಕೆ ಶಿವಕುಮಾರ್​

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಮುಂದೆಯೇ ರಾಹುಲ್ ಗಾಂಧಿ, ಸಚಿವರ ಕಾರ್ಯವೈಖರಿಗೆ ಅಸಮಾಧಾನ ಹೊರಹಾಕಿದ್ದು, ಸಚಿವರ ಕ್ಷೇತ್ರದಲ್ಲಿ ಏಕೆ ಹಿನ್ನಡೆ ಆಗಿದೆ ಎಂದು ವರದಿ ನಿಡುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಜ್ ಸುರ್ಜೆವಾಲ ಅವರಿಗೆ ಸೂಚನೆ ನೀಡಿ ದೆಹಲಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಗ್ಯಾರಂಟಿ ಯೋಜನೆಗಳು ಇದ್ದಾಗಲೂ ಯಾಕೆ ಹಿನ್ನಡೆ ಆಗಿದೆ ಎಂದು ಪ್ರಶ್ನಿಸಿರುವ ರಾಹುಲ್ ಗಾಂಧಿ, ಕ್ಷೇತ್ರದಲ್ಲಿನ ಲೀಡ್ ಕಡಿಮೆ, ಕ್ಷೇತ್ರದ ಸೋಲು, ಕೆಲವು ಕ್ಷೇತ್ರಗಳ ಆಂತರಿಕ ಕಿತ್ತಾಟ ಒಳೇಟುಗಳ ಬಗ್ಗೆಯೂ ರಿಪೋರ್ಟ್ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ಗೆದ್ದವರಿಗೆ ರಾಹುಲ್ ಕಿವಿ ಮಾತು

ಇನ್ನು ಗೆದ್ದ ಸಂಸದರಿಗೆ ಕ್ಷೇತ್ರದಲ್ಲಿ ಹೆಚ್ಚು ಸಮಯ ಕಳೆಯಿರಿ. ಬೆಂಗಳೂರು, ದೆಹಲಿಯಲ್ಲೇ ಇರಬೇಡಿ. ಕ್ಷೇತ್ರದ ಜನರ ಜೊತೆಗೆ ನಿರಂತರ ಸಂಪರ್ಕ ಇಟ್ಟುಕೊಳ್ಳಿ. ನಾವು ನಿಮ್ಮ ಜತೆಗೆ ಇದ್ದೇವೆ. ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಿ. ಕಾರ್ಯಕರ್ತರ ವಿಶ್ವಾಸಗಳಿಸಿ, ಅದರಿಂದ ಮುಂದೆ ನಿಮಗೂ, ಪಕ್ಷಕ್ಕೂ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:54 pm, Fri, 7 June 24

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ