AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಪರಿಹಾರ ಪಡೆಯಲು ಮನೆ ಕೆಲಸದವರಿಂದ ಕಮಿಷನ್:​ ಹೈಕೋರ್ಟ್ ಆಕ್ಷೇಪ

ಸೇವಾಸಿಂಧು ಕೇಂದ್ರಗಳಲ್ಲಿ ಈ ಸೌಲಭ್ಯದ ನೋಂದಣಿಗೆ ಕಮಿಷನ್ ಪಡೆದುಕೊಳ್ಳುತ್ತಿರುವ ವಿಷಯ ತಿಳಿದ ಹೈಕೋರ್ಟ್​ ಕೆಂಡಾಮಂಡಲವಾಯಿತು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿತು.

ಕೊವಿಡ್ ಪರಿಹಾರ ಪಡೆಯಲು ಮನೆ ಕೆಲಸದವರಿಂದ ಕಮಿಷನ್:​ ಹೈಕೋರ್ಟ್ ಆಕ್ಷೇಪ
ಕರ್ನಾಟಕ ಹೈಕೋರ್ಟ್​
TV9 Web
| Edited By: |

Updated on:Jul 01, 2021 | 7:57 PM

Share

ಬೆಂಗಳೂರು: ಮನೆ ಕೆಲಸದವರಿಗೆ ಕೊವಿಡ್ ಪರಿಹಾರ ವಿಚಾರದ ಬಗ್ಗೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಹೈಕೋರ್ಟ್​ ವಿಭಾಗೀಯ ಪೀಠದಲ್ಲಿ ಗುರುವಾರ ನಡೆಯಿತು. ಸೇವಾಸಿಂಧು ಕೇಂದ್ರಗಳಲ್ಲಿ ಈ ಸೌಲಭ್ಯದ ನೋಂದಣಿಗೆ ಕಮಿಷನ್ ಪಡೆದುಕೊಳ್ಳುತ್ತಿರುವ ವಿಷಯ ತಿಳಿದ ಹೈಕೋರ್ಟ್​ ಕೆಂಡಾಮಂಡಲವಾಯಿತು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿತು.

ಪರಿಹಾರ ಅರ್ಜಿ ಸಲ್ಲಿಕೆ ವಿಧಾನವನ್ನು ಸರಳಗೊಳಿಸಬೇಕು ಎಂದು ಸರ್ಕಾರಕ್ಕೆ ತಾಕೀತು ಮಾಡಿತು. ಹೈಕೋರ್ಟ್​​ಗೆ ಈ ಸಂಬಂಧ ಕಾನೂನು ಸೇವೆಗಳ ಪ್ರಾಧಿಕಾರವು ವರದಿ ನೀಡಿತ್ತು. ಸರ್ಕಾರ ನೀಡುವ ₹ 2000 ಪರಿಹಾರ ಪಡೆದುಕೊಳ್ಳಲು ಅಸಂಘಟಿತ ಕಾರ್ಮಿಕರು ₹150ರಿಂದ 250 ಕಮಿಷನ್ ನೀಡಬೇಕಾದ ಪರಿಸ್ಥಿತಿಯಿದೆ ಎಂದು ಪ್ರಾಧಿಕಾರ ತಿಳಿಸಿತ್ತು. ಈ ವರದಿಯನ್ನು ಗಂಭೀರವಾಗಿ ಪರಿಗಣಿಸಿದ್ದ ಹೈಕೋರ್ಟ್​, ಇದು ಕಾರ್ಮಿಕ ಇಲಾಖೆಯ ಕಣ್ತೆರೆಸಬೇಕಿತ್ತು ಎಂದು ಅಭಿಪ್ರಾಯಪಟ್ಟಿತ್ತು. ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯೂ ವಿಚಾರಣೆ ವೇಳೆ ಹಾಜರಿರಬೇಕು ಎಂದು ಹೈಕೋರ್ಟ್ ಸೂಚಿಸಿತ್ತು.

ಬೆಂಗಳೂರು ನಗರಕ್ಕೆ ಎಷ್ಟು ಶೌಚಾಲಯ ಬೇಕು? ಮಾಹಿತಿ ನೀಡಲು ಹೈಕೋರ್ಟ್ ಸೂಚನೆ

ಬೆಂಗಳೂರಿಗೆ ಎಷ್ಟು ಶೌಚಾಲಯಗಳ ಅಗತ್ಯವಿದೆ. ಪ್ರತಿ ವಾರ್ಡ್‌ನಲ್ಲಿ ಎಷ್ಟು ಶೌಚಾಲಯಗಳ ಕೊರತೆಯಿದೆ ಎಂಬ ಮಾಹಿತಿ ನೀಡಲು ಬಿಬಿಎಂಪಿಗೆ ಹೈಕೋರ್ಟ್ ಸೂಚನೆ ನೀಡಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಶೌಚಾಲಯ ಕೊರತೆ ಕುರಿತು ಲೆಟ್ಜ್ ಕಿಟ್ ಫೌಂಡೇಷನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಬಿಬಿಎಂಪಿ ವ್ಯಾಪ್ತಿಯಲ್ಲಿ ಶೌಚಾಲಯಗಳ ನೈರ್ಮಲ್ಯಕ್ಕೆ ಗಮನ ನೀಡಬೇಕು. ಕೈಗೊಂಡ ಕ್ರಮದ ಬಗ್ಗೆ ಪ್ರಮಾಣಪತ್ರ ಸಲ್ಲಿಸಲು ಸೂಚನೆ ನೀಡಿತು.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಲೆಟ್ಜ್ ಕಿಟ್ ಫೌಂಡೇಷನ್, ನ್ಲೋಕಲ್‌ ಸೆಲ್ಫ್ ಗವರ್ನೆನ್ಸ್ ಸಂಸ್ಥೆಯ ಸರ್ವೆ ವರದಿ ಹೈಕೋರ್ಟ್ ಸಲ್ಲಿಸಿತು. ಇತರೆ ನಗರಕ್ಕೆ ಹೋಲಿಸಿದರೆ ಬೆಂಗಳೂರು ನಗರದಲ್ಲಿ ಶೌಚಾಲಯಗಳ ಸಂಖ್ಯೆ ಕಡಿಮೆಯಿದೆ. ಇರುವ ಶೌಚಾಲಯಗಳ ನಿರ್ವಹಣೆಯೂ ಉತ್ತಮವಾಗಿಲ್ಲ. ಸಾಮುದಾಯಿಕ ಶೌಚಾಲಯಗಳಲ್ಲಿ ಶುಚಿತ್ವದ ಕೊರತೆಯಿದೆ ಎಂದು ಅಭಿಪ್ರಾಯಪಟ್ಟು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಡಲಾದ ಶಿಫಾರಸುಗಳನ್ನು ಹೈಕೋರ್ಟ್​ಗೆ ಸಲ್ಲಿಸಿತು. ಈ ಶಿಫಾರಸುಗಳನ್ನು ಅವಲೋಕಿಸಿದ ಹೈಕೋರ್ಟ್, ಬೆಂಗಳೂರು ನಗರದಲ್ಲಿ ಅಗತ್ಯವಿರುವ ಶೌಚಾಲಯಗಳ ಸಂಖ್ಯೆಯನ್ನು ಪರಿಶೀಲಿಸಿ ಸಲ್ಲಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸೂಚಿಸಿತು.

(Loopholes in Covid Compensation Karnataka High Court Directs Govt to Set Order)

ಇದನ್ನೂ ಓದಿ: ಗುಲ್ಶನ್ ಕುಮಾರ್ ಹತ್ಯೆ ಪ್ರಕರಣ: ದಾವೂದ್ ಸಹಚರ ಅಬ್ದುಲ್ ರೌಫ್ ಜೀವಾವಧಿ ಶಿಕ್ಷೆ ಎತ್ತಿಹಿಡಿದ ಬಾಂಬೆ ಹೈಕೋರ್ಟ್

ಇದನ್ನೂ ಓದಿ: ಕೆಲವೇ ಜಾತಿಗೆ ಮಾತ್ರ ನಿಗಮ ಏಕೆ: ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ

Published On - 7:57 pm, Thu, 1 July 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್