Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ಆಡಳಿತ ಮಂಡಳಿಯಿಂದ ಅಪಚಾರ; ಆಂಜನೇಯ ಹುಟ್ಟಿದ್ದು ಕರ್ನಾಟಕದಲ್ಲಿ ಅಲ್ಲ ತಿರುಪತಿಯಲ್ಲಂತೆ!

ಪುರಾಣ ಕಾಲದಿಂದಲೂ ಆಂಜನೇಯ ಹುಟ್ಟಿದ್ದು ಕರ್ನಾಟಕದ ಕೊಪ್ಪಳದಲ್ಲಿರುವ ಅಂಜನಾದ್ರಿ ಬೆಟ್ಟದಲ್ಲಿ ಎಂಬ ನಂಬಿಕೆ ಇದೆ. ಆದರೆ, ಈ ನಂಬಿಕೆಯನ್ನು ಬುಡಮೇಲು ಮಾಡುವಂತಹ ಹೇಳಿಕೆಯೊಂದು ನೆರೆಯ ಆಂಧ್ರಪ್ರದೇಶದಿಂದ ಕೇಳಿದು ಬಂದಿದೆ.

ತಿರುಪತಿ ಆಡಳಿತ ಮಂಡಳಿಯಿಂದ ಅಪಚಾರ; ಆಂಜನೇಯ ಹುಟ್ಟಿದ್ದು ಕರ್ನಾಟಕದಲ್ಲಿ ಅಲ್ಲ ತಿರುಪತಿಯಲ್ಲಂತೆ!
ಸಂಗ್ರಹ ಚಿತ್ರ
Follow us
Skanda
| Updated By: ಸಾಧು ಶ್ರೀನಾಥ್​

Updated on: Apr 10, 2021 | 3:56 PM

ತಿರುಪತಿ: ಭಾರತದಲ್ಲಿ ಪೌರಾಣಿಕ ಕತೆಗಳಿಗೆ ಇಂದಿಗೂ ಪ್ರಾಶಸ್ತ್ಯ, ಪ್ರಾಮುಖ್ಯತೆಗಳು ಇವೆ. ನಮ್ಮ ಸುತ್ತಮುತ್ತಲ ಎಷ್ಟೋ ಊರುಕೇರಿಗಳ ಹೆಸರು ಒಂದೊಂದು ಪುರಾಣ ಕತೆಗಳೊಂದಿಗೆ ತಳುಕು ಹಾಕಿಕೊಂಡಿರುತ್ತವೆ. ಆದರೆ, ಈ ವಿಚಾರದಲ್ಲಿ ಆಗಾಗ ಒಂದಷ್ಟು ಜನ ಅಪಸ್ವರ ತೆಗೆದು ಕೆಲ ವಿವಾದಗಳನ್ನೂ ಸೃಷ್ಟಿಸುತ್ತಿರುತ್ತಾರೆ. ಭಾರತೀಯರ ಪಾಲಿಗೆ ಈ ವಿವಾದ, ಅಪಸ್ವರಗಳು ಹೊಸತೇನಲ್ಲ. ಅವು ಹನುಮಂತನ ಬಾಲದಂತೆ ಬೆಳೆಯುತ್ತಲೇ ಇರುತ್ತವೆ. ಅಂದಹಾಗೆ ಹನುಮಂತ ಎಂದ ಕೂಡಲೇ ಈಗ ಹುಟ್ಟಿರುವ ಹೊಸ ವಿವಾದವೊಂದರ ಬಗ್ಗೆ ಹೇಳಲೇಬೇಕು. ಏಕೆಂದರೆ ಈ ವಿವಾದದ ಕೇಂದ್ರಬಿಂದುವೇ ಹನುಮಂತ. ಹೌದು, ಸದ್ಯ ಆಂಜನೇಯನ ಜನ್ಮಸ್ಥಾನದ ಬಗ್ಗೆ ಚರ್ಚೆ ಎದ್ದಿದ್ದು ಆತ ಹುಟ್ಟಿದ್ದು ತಿರುಪತಿಯಲ್ಲಿ ಎಂಬ ಹೊಸ ವಾದ ಶುರುವಾಗಿದೆ.

lord rama ardent devotee anjaneya birth place is anjanadri in koppal in karnataka

ಆಂಜನೇಯ ಹುಟ್ಟಿದ್ದು ಕರ್ನಾಟಕದ ಕೊಪ್ಪಳದಲ್ಲಿರುವ ಅಂಜನಾದ್ರಿ ಬೆಟ್ಟದಲ್ಲಿ ಎಂಬ ನಂಬಿಕೆ ಪುರಾಣ ಕಾಲದಿಂದಲೂ ಇದೆ

ಪುರಾಣ ಕಾಲದಿಂದಲೂ ಆಂಜನೇಯ ಹುಟ್ಟಿದ್ದು ಕರ್ನಾಟಕದ ಕೊಪ್ಪಳದಲ್ಲಿರುವ ಅಂಜನಾದ್ರಿ ಬೆಟ್ಟದಲ್ಲಿ ಎಂಬ ನಂಬಿಕೆ ಇದೆ. ಆದರೆ, ಈ ನಂಬಿಕೆಯನ್ನು ಬುಡಮೇಲು ಮಾಡುವಂತಹ ಹೇಳಿಕೆಯೊಂದು ನೆರೆಯ ಆಂಧ್ರಪ್ರದೇಶದಿಂದ ಕೇಳಿ ಬಂದಿದೆ. ಶ್ರೀ ರಾಮಚಂದ್ರ ಕರ್ನಾಟಕಕ್ಕೆ ಬಂದಿದ್ದರು ಎಂಬ ನಂಬಿಕೆಯೊಂದಿಗೆ ಅಂಜನಾದ್ರಿ ಬೆಟ್ಟದ ಕತೆ ತಳುಕು ಹಾಕಿಕೊಂಡಿದೆಯಾದರೂ ಈಗ ಆಂಜನೇಯ ಹುಟ್ಟಿದ್ದು ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ಅಲ್ಲ ತಿರುಪತಿಯ ಅಂಜನಾದ್ರಿ ಬೆಟ್ಟದಲ್ಲಿ ಎಂಬ ವಾದ ಉದ್ಭವಿಸಿದೆ.

ಈ ವಾದಕ್ಕೆ ಇನ್ನಷ್ಟು ಪುಷ್ಠಿ ನೀಡುವಂತೆ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಒಂದು ಹೆಜ್ಜೆ ಮುಂದಕ್ಕೆ ಹೋಗಿ ಸಮಿತಿ ರಚಿಸಿದ್ದು, ಈ ಕುರಿತು ಅಧ್ಯಯನ ನಡೆಸಿದೆ. ಈ ವರದಿ ಶೀಘ್ರದಲ್ಲೇ ಹೊರ ಬರಲಿದ್ದು, ಆಂಜನೇಯನ ಜನ್ಮ ಸ್ಥಳದ ಬಗ್ಗೆ ಏನೇನು ಹೇಳಲಾಗಿದೆ? ತಿರುಪತಿಯಲ್ಲೇ ಹುಟ್ಟಿದ್ದು ಎನ್ನುವುದಾದರೆ ಯಾವೆಲ್ಲಾ ಸಾಕ್ಷ್ಯಗಳನ್ನು ನೀಡಲಾಗಿದೆ? ಎಂಬುದು ಕುತೂಹಲ ಮೂಡಿಸಿದೆ. ವಾಯುಪುತ್ರ ಯಾರ ಮಡಿಲಿಗೋ ಕಾದುನೋಡಬೇಕಿದೆ!

ತಿರುಪತಿಯಲ್ಲಿರುವ ಅಂಜನಾದ್ರಿ ಬೆಟ್ಟವೇ ಆಂಜನೇಯನ ಜನ್ಮಸ್ಥಾನ ಎನ್ನುವುದಕ್ಕೆ ಎಲ್ಲಾ ಆಯಾಮಗಳಲ್ಲಿಯೂ ಅಧ್ಯಯನ ನಡೆಸಲಾಗಿದ್ದು, ಪೂರಕ ದಾಖಲೆಗಳ ಜೊತೆಗೆ ಸಾಕ್ಷ್ಯ ಬಿಡುಗಡೆ ಮಾಡುವುದಾಗಿ ಟಿಟಿಡಿ ಅಧಿಕಾರಿ ಡಾ.ಕೆ.ಎಸ್.ಜವಾಹರ್ ರೆಡ್ಡಿ ತಿಳಿಸಿದ್ದಾರೆ.

ಸಮಿತಿಯಲ್ಲಿ ಯಾರೆಲ್ಲಾ ಇದ್ದಾರೆ? ಪ್ರೊ. ಸನ್ನಿದಾನಂ ಶರ್ಮಾ, ಪ್ರೊ.ಮುರುಳೀಧರ ಶರ್ಮಾ, ಪ್ರೊ.ರಾಣಿ ಸದಾಶಿವ ಮೂರ್ತಿ, ಪ್ರೊ.ಜೆ.ರಾಮಕೃಷ್ಣ, ಪ್ರೊ. ಶಂಕರ ನಾರಾಯಣ, ಮೂರ್ತಿ ರೆಮಿಲ್ಲಾ, ವಿಜಯ್​ ಕುಮಾರ್​, ವಿಭೂಷಣ ಶರ್ಮಾ ಈ ಸಮಿತಿಯಲ್ಲಿದ್ದಾರೆ.

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ