ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ; ಸ್ಥಳದಲ್ಲೇ ಹಾರಿಹೋಯ್ತು ಚಾಲಕನ ಪ್ರಾಣಪಕ್ಷಿ

ವಿಜಯಪುರ ಕಡೆಯಿಂದ ಬೆಂಗಳೂರಿಗೆ ಲಿಂಬೆಹಣ್ಣು ತುಂಬಿಕೊಂಡು ಲಾರಿ ಬರುತ್ತಿತ್ತು. ಈ ವೇಳೆ ಚಾಲಕನ ಅಜಾಗರೂಕತೆಯಿಂದ ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮದಿಂದಾಗಿ ಲಾರಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ; ಸ್ಥಳದಲ್ಲೇ ಹಾರಿಹೋಯ್ತು ಚಾಲಕನ ಪ್ರಾಣಪಕ್ಷಿ
ಸಾಂದರ್ಭಿಕ ಚಿತ್ರ

Updated on: Dec 31, 2020 | 9:34 PM

ದಾವಣಗೆರೆ: ಚಲಿಸುತ್ತಿರುವ ಲಾರಿಗೆ ಹಿಂಬದಿಯಿಂದ ಇನ್ನೊಂದು ಲಾರಿ ಢಿಕ್ಕಿ ಹೊಡೆದ ಪರಿಣಾಮದಿಂದಾಗಿ ಲಾರಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಕಲ್ಲೆದೇವಪುರ ಗ್ರಾಮದ ಬಳಿ ನಡೆದಿದೆ.

ಚಂದ್ರಪ್ಪ (24) ಸಾವನ್ನಪ್ಪಿದ ಚಾಲಕನಾಗಿದ್ದು. ಇನ್ನೊಬ್ಬ ನಿಕೀಲ್ (22)ಎಂಬಾತನಿಗೆ ತೀವ್ರಗಾಯಗಳಾಗಿವೆ. ಹೀಗಾಗಿ ಗಾಯಾಳುವನ್ನು ಜಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಲ್ಲೆದೇವಪುರ ಬಳಿಯ ರಾಷ್ಟ್ರೀಯ ಹೆದ್ದಾರಿ ಐವತ್ತರಲ್ಲಿ ಈ ಘಟನೆ ಸಂಭವಿಸಿದೆ.

ವಿಜಯಪುರ ಕಡೆಯಿಂದ ಬೆಂಗಳೂರಿಗೆ ಲಿಂಬೆಹಣ್ಣು ತುಂಬಿಕೊಂಡು ಲಾರಿ ಬರುತ್ತಿತ್ತು. ಈ ವೇಳೆ ಚಾಲಕನ ಅಜಾಗರೂಕತೆಯಿಂದ ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮದಿಂದಾಗಿ ಲಾರಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ಮತ್ತು ಗಾಯಾಳು ವಿಜಯಪು ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬೊಮ್ಮನಜೋಗಿ ಗ್ರಾಮದ ನಿವಾಸಿಗಳು ಎಂಬುದು ತಿಳಿದುಬಂದಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us