AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎರಡನೇ ಅಲೆಯ ಆತಂಕ; ಮತ್ತೆ ಲಾಕ್ ಆದ್ರೆ ಎದುರಾಗಲಿದೆ ಕಷ್ಟ-ನಷ್ಟ

ಬೆಂಗಳೂರಿನಲ್ಲಿ 75 ಸಾವಿರ ಜನ ಬೀದಿ ಬದಿ ವ್ಯಾಪಾರಿಗಳಿದ್ದು, ರಾಜ್ಯದಲ್ಲಿ ಒಟ್ಟು 4.5 ಲಕ್ಷ ಬೀದಿ ಬದಿ ವ್ಯಾಪಾರಿಗಳಿದ್ದಾರೆ. ಒಬ್ಬ ಬೀದಿ ಬದಿ ವ್ಯಾಪಾರಿಯ ದಿನದ ಆದಾಯ 200 ರಿಂದ 500 ರೂಪಾಯಿಯಾಗಿದ್ದು, ಕಳೆದ ಬಾರಿಯ ಲಾಕ್ ಡೌನ್ ನಿಂದ ಒಂದು ದಿನಕ್ಕೆ ಬರೋಬ್ಬರಿ 13.5 ಕೋಟಿ ರೂಪಾಯಿ ನಷ್ಟವಾಗಿತ್ತು.

ಕೊರೊನಾ ಎರಡನೇ ಅಲೆಯ ಆತಂಕ; ಮತ್ತೆ ಲಾಕ್ ಆದ್ರೆ ಎದುರಾಗಲಿದೆ ಕಷ್ಟ-ನಷ್ಟ
ಲಾಕ್​ಡೌನ್ (ಸಂಗ್ರಹ ಚಿತ್ರ)
preethi shettigar
| Edited By: |

Updated on: Apr 12, 2021 | 10:04 AM

Share

ಬೆಂಗಳೂರು: ದೇಶದೆಲ್ಲೆಡೆ ಕೊರೊನಾ ಸೋಂಕು ಮತ್ತೆ ತೀವ್ರವಾಗುತ್ತಿದ್ದು, ಕೊವಿಡ್ 19 ರ ಎರಡನೇ ಅಲೆಗೆ ಇಡಿ ದೇಶವೇ ತತ್ತರಿಸುವ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಕಳೆದ ವರ್ಷದ ಲಾಕ್​ಡೌನ್​ ನಿಂದಲೇ ಸಾಕಷ್ಟು ನಷ್ಟವಾಗಿದ್ದು, ಇನ್ನೇನು ಜನರು ಈ ನಷ್ಟದಿಂದ ಮೇಲೆದ್ದು, ಮತ್ತೆ ಮೊದಲಿನಂತೆ ಜೀವನ ನಡೆಸಲು ಮುಂದಾಗಿದ್ದರು. ಆದರೆ ಈ ನಿರಾಳತೆಗೆ ಮತ್ತೆ ತಡೆಯೊಡ್ಡಿದಂತಾಗಿದ್ದೆ. ಈಗಾಗಲೇ ನೈಟ್ ಕಫ್ಯೂ ಜಾರಿಯಾಗಿದ್ದು, ಜನರ ವ್ಯಾಪಾರದ ಮೇಲೆ ಮತ್ತೆ ಕೊಡಲಿ ಏಟು ಬಿದ್ದಂತಾಗಿದೆ. ಹಿಂದಿನ ವರ್ಷ ಲಾಕ್​ಡೌನ್​ನಿಂದಾಗಿ ಆದ ನಷ್ಟವನ್ನು ಗಮನಿಸಿದರೆ ಮತ್ತೆ ಲಾಕ್​ಡೌನ್ ಆದರೆ ಇದರ ದುಪ್ಪಟ್ಟು ನಷ್ಟ ಎದುರಿಸಬೇಕಾಗುತ್ತದೆ ಎನ್ನುವುದು ಮಾತ್ರ ನಿಜ.​

ಕಳೆದ ವರ್ಷದ ಲಾಕ್​ಡೌನ್​ನಿಂದಾದ ನಷ್ಟ ಬೆಂಗಳೂರಿನಲ್ಲಿ 75 ಸಾವಿರ ಜನ ಬೀದಿ ಬದಿ ವ್ಯಾಪಾರಿಗಳಿದ್ದು, ರಾಜ್ಯದಲ್ಲಿ ಒಟ್ಟು 4.5 ಲಕ್ಷ ಬೀದಿ ಬದಿ ವ್ಯಾಪಾರಿಗಳಿದ್ದಾರೆ. ಒಬ್ಬ ಬೀದಿ ಬದಿ ವ್ಯಾಪಾರಿಯ ದಿನದ ಆದಾಯ 200 ರಿಂದ 500 ರೂಪಾಯಿಯಾಗಿದ್ದು, ಕಳೆದ ಬಾರಿಯ ಲಾಕ್​ಡೌನ್​ನಿಂದ ಒಂದು ದಿನಕ್ಕೆ ಬರೋಬ್ಬರಿ 13.5 ಕೋಟಿ ರೂಪಾಯಿ ನಷ್ಟವಾಗಿತ್ತು.

ಲಾಕ್​ಡೌನ್ ಬೆಂಗಳೂರಿನಲ್ಲಾದ ನಷ್ಟ ಎಷ್ಟು ಗೊತ್ತಾ? ಲಾಕ್​ಡೌನ್ ವೇಳೆ ಬೆಂಗಳೂರಿಗೆ ಪ್ರತೀ ಒಂದು ದಿನಕ್ಕೆ 100 ಕೋಟಿಗೂ ಅಧಿಕ ಮೊತ್ತದ ನಷ್ಟವಾಗಿತ್ತು. ಬೆಂಗಳೂರಿನಲ್ಲೇ‌ ಶೇಕಡಾ 60 ರಷ್ಟು ಆದಾಯ ಬರುತ್ತಿದೆ. ರಾಜ್ಯದ ಇತರೆ ಜಿಲ್ಲೆಗಳಿಂದ ಶೇಕಡಾ 40ರಷ್ಟು ಆದಾಯ ಬರುತ್ತಿದೆ. ಲಾಕ್​ಡೌನ್ ವೇಳೆ 12 ಸಾವಿರ ಕೋಟಿಗೂ ಅಧಿಕ ನಷ್ಟವಾಗಿತ್ತು. ಒಟ್ಟು ಅಂದಾಜು 12,100 ಕೋಟಿಗೂ ಅಧಿಕ ರೂಪಾಯಿ ನಷ್ಟವಾಗಿದೆ.

ಗಾರ್ಮೆಂಟ್ಸ್​ಗ​ಳ ಸ್ಥಿತಿ ಏನು? ಬೆಂಗಳೂರಿನಲ್ಲೇ 4 ಸಾವಿರ ಗಾರ್ಮೆಂಟ್ಸ್​ಗಳಿದ್ದು, ಲಾಕ್​ಡೌನ್ ವೇಳೆ ಪ್ರತೀ ದಿನ ಬೆಂಗಳೂರಿನಲ್ಲಿ 10 ಸಾವಿರ ಕೋಟಿ ರೂಪಾಯಿ ನಷ್ಟವಾಗುತ್ತಿತ್ತು. ರಾಜ್ಯದ ಇತರೆ ಜಿಲ್ಲೆಗಳಲ್ಲಿ ಒಟ್ಟು 3 ಸಾವಿರ ಗಾರ್ಮೆಂಟ್ಸ್​ಗ​ಳಿದ್ದು, ಲಾಕ್​ಡೌನ್ ವೇಳೆ ಪ್ರತೀ ದಿನ ರಾಜ್ಯದ ಇತರೆ ಜಿಲ್ಲೆಗಳಲ್ಲಿ 4.5 ಸಾವಿರ ಕೋಟಿ ರೂಪಾಯಿ ನಷ್ಟವಾಗುತ್ತಿತ್ತು. ಬೆಂಗಳೂರಿನಲ್ಲಿ 8 ಲಕ್ಷ ಗಾರ್ಮೆಂಟ್ಸ್ ಕಾರ್ಮಿಕರು ದುಡಿಯುತ್ತಿದ್ದರೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 12 ರಿಂದ 14 ಲಕ್ಷ ಜನ ಕಾರ್ಮಿಕರಿದ್ದಾರೆ. ಪ್ರಸ್ತುತ ಶೇಕಡಾ 40ರಷ್ಟು ವ್ಯಾಪಾರ ಮಾತ್ರ ನಡೆಯುತ್ತಿದ್ದು, ಶೇಕಡಾ 60 ರಷ್ಟು ವ್ಯಾಪಾರ ಕುಸಿತವಾಗಿದೆ.

ಇನ್ನು ಪಬ್, ಬಾರ್ ಮತ್ತು ಕ್ಲಬ್​ಗಳಿಗೆ ಲಾಕ್​ಡೌನ್ ವೇಳೆ ಪ್ರತೀ ನಿತ್ಯ 50 ರಿಂದ 60 ಕೋಟಿ ರೂಪಾಯಿ ನಷ್ಟವಾಗಿದ್ದು, ಒಟ್ಟಾರೆ ಅಂದಾಜು 2 ಸಾವಿರದ 500 ಕೋಟಿ ರೂಪಾಯಿ ನಷ್ಟವಾಗಿದೆ. ಕಳೆದ ಬಾರಿ ಲಾಕ್​ಡೌನ್ ಆದಾಗ ಹೊಟೇಲ್​ಗಳಿಗೆ ಆದ ನಷ್ಟ ಹೊಟೇಲ್ ಉದ್ಯಮದಲ್ಲಿ12 ಕೋಟಿಗೂ ಅಧಿಕ (ದರ್ಶಿನಿ ಸೇರಿದಂತೆ ಸಣ್ಣ ಪುಟ್ಟ ಹೊಟೇಲ್ಸ್) ನಷ್ಟವಾಗಿದೆ.

ರೆಸ್ಟೋರೆಂಟ್: 18 ಕೋಟಿಗೂ ಅಧಿಕ ನಷ್ಟ ಹೊಟೇಲ್ ಮತ್ತು ರೆಸ್ಟೋರೆಂಟ್ ಎರಡೂ ಉದ್ಯಮದಿಂದ 30 ಕೋಟಿಗೂ ಅಧಿಕ ನಷ್ಟ ಉಂಟಾಗಿದೆ. ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ಚಂದ್ರಶೇಖರದ ಹೆಬ್ಬಾರ್ ಅವರ ಮಾಹಿತಿ ಪ್ರಕಾರ ಸರ್ಕಾರಕ್ಕೆ ಕಟ್ಟುತ್ತಿದ್ದ ತೆರಿಗೆಯ 2 ಪಟ್ಟು ಹೆಚ್ಚು ನಷ್ಟವಾಗಿದೆ. ಪ್ರತಿ ವರ್ಷ ಸರ್ಕಾರಕ್ಕೆ 10 ಕೋಟಿ ತೆರಿಗೆ ಕಟ್ಟಲಾಗುತ್ತಿತ್ತು. ಅದರ ಆಧಾರದ ಮೇಲೆ 30 ಕೋಟಿ ಅಧಿಕ ನಷ್ಟ ಉಂಟಾಗಿದೆ (ಲಾಡ್ಜ್, ಹೊಟೇಲ್, ತ್ರಿ ಸ್ಟಾರ್, ಫೈವ್ ಸ್ಟಾರ್ ಹೊಟೇಲ್, ಎಸಿ, ನಾನ್ ಎಸಿ ಹೊಟೇಲ್, ಮಲ್ಟಿ ಡೀಲಕ್ಸ್ ಹೊಟೇಲ್ಸ್). ಹಾಗಾಗಿ ಮತ್ತೆ ಈಗ ಲಾಕ್​ಡೌನ್ ಆದರೆ ಮತ್ತಷ್ಟು ನಷ್ಟ ಆಗಲಿದ್ದು ಜನ ದೊಡ್ಡ ಸಂಕಷ್ಟವನ್ನೇ ಎದರಿಸಬೇಕಾಗುತ್ತೆ.

ಇದನ್ನೂ ಓದಿ:

ಭಾರತಕ್ಕೆ ಬರಲಿವೆ ಇನ್ನೂ 5 ಕೊರೊನಾ ಲಸಿಕೆಗಳು; ಎಲ್ಲರಿಗೂ ಶೀಘ್ರ ಲಸಿಕೆ ದೊರೆಯುವ ನಿರೀಕ್ಷೆ

Covid-19 Karnataka Update: ಕರ್ನಾಟಕದಲ್ಲಿ ಇಂದು 10,250 ಮಂದಿಗೆ ಕೊರೊನಾ ಸೋಂಕು, 40 ಸಾವು

(loss during first covid 19 lockdown)

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ