AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರ್ಮಿಕ ಸ್ಥಳಗಳಲ್ಲಿ ಲೌಡ್ ಸ್ಪೀಕರ್​ ತಡೆಗೆ ಕ್ರಮಕೈಗೊಳ್ಳದ ಪೊಲೀಸರಿಗೆ ಹೈಕೋರ್ಟ್​ ತರಾಟೆ

ಬೆಂಗಳೂರು ನಗರದ ಧಾರ್ಮಿಕ ಕೇಂದ್ರಗಳಲ್ಲಿ ಧ್ವನಿವರ್ಧಕಗಳಿಂದ ಆಗುತ್ತಿರುವ ಶಬ್ದಮಾಲಿನ್ಯ ತಡೆಗೆ ಕ್ರಮಕೈಗೊಳ್ಳದ ಪೊಲೀಸರನ್ನು ಹೈಕೋರ್ಟ್​ ಬುಧವಾರ ತರಾಟೆಗೆ ತೆಗೆದುಕೊಂಡಿತು.

ಧಾರ್ಮಿಕ ಸ್ಥಳಗಳಲ್ಲಿ ಲೌಡ್ ಸ್ಪೀಕರ್​ ತಡೆಗೆ ಕ್ರಮಕೈಗೊಳ್ಳದ ಪೊಲೀಸರಿಗೆ ಹೈಕೋರ್ಟ್​ ತರಾಟೆ
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on:Jun 16, 2021 | 10:11 PM

Share

ಬೆಂಗಳೂರು: ನಗರದ ಧಾರ್ಮಿಕ ಕೇಂದ್ರಗಳಲ್ಲಿ ಧ್ವನಿವರ್ಧಕಗಳಿಂದ ಆಗುತ್ತಿರುವ ಶಬ್ದಮಾಲಿನ್ಯ ತಡೆಗೆ ಕ್ರಮಕೈಗೊಳ್ಳದ ಪೊಲೀಸರನ್ನು ಹೈಕೋರ್ಟ್​ ಬುಧವಾರ ತರಾಟೆಗೆ ತೆಗೆದುಕೊಂಡಿತು. ನಗರದ ಶಬ್ದಮಾಲಿನ್ಯ ಕುರಿತು ಪ್ರಮಾಣಪತ್ರ ಸಲ್ಲಿಸಿದ್ದ ಗುಪ್ತಚರ ವಿಭಾಗದ ಡಿಸಿಪಿ ಸಂತೋಷ್​ ಬಾಬು, ಟ್ರಾಫಿಕ್‌ನಿಂದಲೇ ಹೆಚ್ಚಿನ ಶಬ್ದ ಮಾಲಿನ್ಯವಾಗುತ್ತಿದೆ. ಶಬ್ದಮಾಲಿನ್ಯದ ನಿಯಮವನ್ನೇ ಬದಲಿಸಬೇಕು ಎಂದು ಅಭಿಪ್ರಾಯಪಟ್ಟಿದ್ದರು.

ಡಿಸಿಪಿ ಸಲ್ಲಿಸಿದ್ದ ಪ್ರಮಾಣಪತ್ರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್, ಧಾರ್ಮಿಕ ಕೇಂದ್ರಗಳ ಲೌಡ್ ಸ್ಪೀಕರ್ ಬಳಕೆಯ ಬಗ್ಗೆ ಪೊಲೀಸರು ಸರಿಯಾಗಿ ಮಾಹಿತಿ ಸಂಗ್ರಹಿಸಿಲ್ಲ. ಲೌಡ್ ಸ್ಪೀಕರ್‌ಗೆ ಅನುಮತಿ ಇತ್ತೋ ಇಲ್ಲವೋ ತಿಳಿಸಿಲ್ಲ. ಶಬ್ದಮಾಲಿನ್ಯದ ನಿಯಮ ಜಾರಿಗೊಳಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ. ನಿಯಮವನ್ನೇ ಬದಲಿಸಲು ಬಯಸಿದ್ದಾರೆ. ಪೊಲೀಸರು ಮತ್ತು ಡಿಸಿಪಿ ವರ್ತನೆ ಬಗ್ಗೆ ಜುಲೈ 1ರ ಒಳಗೆ ಪೊಲೀಸ್ ಆಯುಕ್ತರು ಪ್ರಮಾಣಪತ್ರ ಸಲ್ಲಿಸಬೇಕು ಎಂದು ಸೂಚಿಸಿತು.

ಅಕ್ರಮ ಧ್ವನಿವರ್ಧಕಗಳ ವಿರುದ್ಧ ಕೈಗೊಂಡ ಕ್ರಮದ ಮಾಹಿತಿ ಮತ್ತು ಠಾಣೆಗಳಲ್ಲಿ ಶಬ್ದ ಮಾಪಕಗಳ ಲಭ್ಯತೆ ಬಗ್ಗೆ ವಿವರ ನೀಡಬೇಕು ಎಂದು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ಸೂಚನೆ ನೀಡಿತು.

(Loudspeakers at religious places Karnataka HC raps Bengaluru Police)

ಇದನ್ನೂ ಓದಿ: Kangana Ranaut: ಬಾಂಬೇ ಹೈಕೋರ್ಟ್​ನಲ್ಲಿ ಕಂಗನಾ ರಣಾವತ್​ಗೆ ತೀವ್ರ ಹಿನ್ನಡೆ

ಇದನ್ನೂ ಓದಿ: ಕರ್ನಾಟಕ ರಾಜ್ಯವ್ಯಾಪಿ ಕೆರೆಗಳ ಸರ್ವೆಗೆ ಹೈಕೋರ್ಟ್​ ಸೂಚನೆ: ನೀರಿ ವರದಿ ಆಧರಿಸಿ ಸಮೀಕ್ಷೆ ಸರ್ಕಾರದ ಒಪ್ಪಿಗೆ

Published On - 10:10 pm, Wed, 16 June 21

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ