AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರ್ಮಿಕ ಸ್ಥಳಗಳಲ್ಲಿ ಲೌಡ್ ಸ್ಪೀಕರ್​ ತಡೆಗೆ ಕ್ರಮಕೈಗೊಳ್ಳದ ಪೊಲೀಸರಿಗೆ ಹೈಕೋರ್ಟ್​ ತರಾಟೆ

ಬೆಂಗಳೂರು ನಗರದ ಧಾರ್ಮಿಕ ಕೇಂದ್ರಗಳಲ್ಲಿ ಧ್ವನಿವರ್ಧಕಗಳಿಂದ ಆಗುತ್ತಿರುವ ಶಬ್ದಮಾಲಿನ್ಯ ತಡೆಗೆ ಕ್ರಮಕೈಗೊಳ್ಳದ ಪೊಲೀಸರನ್ನು ಹೈಕೋರ್ಟ್​ ಬುಧವಾರ ತರಾಟೆಗೆ ತೆಗೆದುಕೊಂಡಿತು.

ಧಾರ್ಮಿಕ ಸ್ಥಳಗಳಲ್ಲಿ ಲೌಡ್ ಸ್ಪೀಕರ್​ ತಡೆಗೆ ಕ್ರಮಕೈಗೊಳ್ಳದ ಪೊಲೀಸರಿಗೆ ಹೈಕೋರ್ಟ್​ ತರಾಟೆ
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on:Jun 16, 2021 | 10:11 PM

Share

ಬೆಂಗಳೂರು: ನಗರದ ಧಾರ್ಮಿಕ ಕೇಂದ್ರಗಳಲ್ಲಿ ಧ್ವನಿವರ್ಧಕಗಳಿಂದ ಆಗುತ್ತಿರುವ ಶಬ್ದಮಾಲಿನ್ಯ ತಡೆಗೆ ಕ್ರಮಕೈಗೊಳ್ಳದ ಪೊಲೀಸರನ್ನು ಹೈಕೋರ್ಟ್​ ಬುಧವಾರ ತರಾಟೆಗೆ ತೆಗೆದುಕೊಂಡಿತು. ನಗರದ ಶಬ್ದಮಾಲಿನ್ಯ ಕುರಿತು ಪ್ರಮಾಣಪತ್ರ ಸಲ್ಲಿಸಿದ್ದ ಗುಪ್ತಚರ ವಿಭಾಗದ ಡಿಸಿಪಿ ಸಂತೋಷ್​ ಬಾಬು, ಟ್ರಾಫಿಕ್‌ನಿಂದಲೇ ಹೆಚ್ಚಿನ ಶಬ್ದ ಮಾಲಿನ್ಯವಾಗುತ್ತಿದೆ. ಶಬ್ದಮಾಲಿನ್ಯದ ನಿಯಮವನ್ನೇ ಬದಲಿಸಬೇಕು ಎಂದು ಅಭಿಪ್ರಾಯಪಟ್ಟಿದ್ದರು.

ಡಿಸಿಪಿ ಸಲ್ಲಿಸಿದ್ದ ಪ್ರಮಾಣಪತ್ರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್, ಧಾರ್ಮಿಕ ಕೇಂದ್ರಗಳ ಲೌಡ್ ಸ್ಪೀಕರ್ ಬಳಕೆಯ ಬಗ್ಗೆ ಪೊಲೀಸರು ಸರಿಯಾಗಿ ಮಾಹಿತಿ ಸಂಗ್ರಹಿಸಿಲ್ಲ. ಲೌಡ್ ಸ್ಪೀಕರ್‌ಗೆ ಅನುಮತಿ ಇತ್ತೋ ಇಲ್ಲವೋ ತಿಳಿಸಿಲ್ಲ. ಶಬ್ದಮಾಲಿನ್ಯದ ನಿಯಮ ಜಾರಿಗೊಳಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ. ನಿಯಮವನ್ನೇ ಬದಲಿಸಲು ಬಯಸಿದ್ದಾರೆ. ಪೊಲೀಸರು ಮತ್ತು ಡಿಸಿಪಿ ವರ್ತನೆ ಬಗ್ಗೆ ಜುಲೈ 1ರ ಒಳಗೆ ಪೊಲೀಸ್ ಆಯುಕ್ತರು ಪ್ರಮಾಣಪತ್ರ ಸಲ್ಲಿಸಬೇಕು ಎಂದು ಸೂಚಿಸಿತು.

ಅಕ್ರಮ ಧ್ವನಿವರ್ಧಕಗಳ ವಿರುದ್ಧ ಕೈಗೊಂಡ ಕ್ರಮದ ಮಾಹಿತಿ ಮತ್ತು ಠಾಣೆಗಳಲ್ಲಿ ಶಬ್ದ ಮಾಪಕಗಳ ಲಭ್ಯತೆ ಬಗ್ಗೆ ವಿವರ ನೀಡಬೇಕು ಎಂದು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ಸೂಚನೆ ನೀಡಿತು.

(Loudspeakers at religious places Karnataka HC raps Bengaluru Police)

ಇದನ್ನೂ ಓದಿ: Kangana Ranaut: ಬಾಂಬೇ ಹೈಕೋರ್ಟ್​ನಲ್ಲಿ ಕಂಗನಾ ರಣಾವತ್​ಗೆ ತೀವ್ರ ಹಿನ್ನಡೆ

ಇದನ್ನೂ ಓದಿ: ಕರ್ನಾಟಕ ರಾಜ್ಯವ್ಯಾಪಿ ಕೆರೆಗಳ ಸರ್ವೆಗೆ ಹೈಕೋರ್ಟ್​ ಸೂಚನೆ: ನೀರಿ ವರದಿ ಆಧರಿಸಿ ಸಮೀಕ್ಷೆ ಸರ್ಕಾರದ ಒಪ್ಪಿಗೆ

Published On - 10:10 pm, Wed, 16 June 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?