AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಧನೂರು ಬಸ್​ ನಿಲ್ದಾಣದಲ್ಲಿ ಮೈಮರೆತು ಚುಂಬಿಸಿದ ಜೋಡಿ!

ರಾಯಚೂರಿನ ಸಿಂಧನೂರಿನ ಬಸ್ ನಿಲ್ದಾಣದಲ್ಲಿ ಯುವಕ ಯುವತಿ ನಿಂತಿದ್ದರು. ಇಬ್ಬರೂ ಒಬ್ಬರನ್ನೊಬ್ಬರು ತಬ್ಬಿ ನಿಂತಿದ್ದರು. ಇಷ್ಟೇ ಆಗಿದ್ದರೆ ಯಾರೂ ತಕರಾರು ತೆಗೆಯುತ್ತಿರಲಿಲ್ಲ.

ಸಿಂಧನೂರು ಬಸ್​ ನಿಲ್ದಾಣದಲ್ಲಿ ಮೈಮರೆತು ಚುಂಬಿಸಿದ ಜೋಡಿ!
ರಾಯಚೂರು ಜಿಲ್ಲೆ ಸಿಂಧನೂರು ಬಸ್​​ ಸ್ಟ್ಯಾಂಡ್​ನಲ್ಲೇ ಕಿಸ್​ ಮಾಡಿದ ಯುವ ಜೋಡಿ
ರಾಜೇಶ್ ದುಗ್ಗುಮನೆ
| Edited By: |

Updated on:Feb 24, 2021 | 8:47 PM

Share

ರಾಯಚೂರು: ಪ್ರೇಮಿಗಳ ದಿನಾಚರಣೆಗೂ ಮುನ್ನ ಮಂಡ್ಯದ ಕೆ.ಆರ್​ ಪೇಟೆಯಲ್ಲಿ ಮಟಮಟ ಮಧ್ಯಾಹ್ನವೇ ಪ್ರೇಮಿಗಳಿಬ್ಬರು ಕಿಸ್​ ಮಾಡಿದ್ದ ವಿಡಿಯೋ ಭಾರೀ ವೈರಲ್​ ಆಗಿತ್ತು. ಈ ಘಟನೆ ಬಗ್ಗೆ ಭಾರೀ ಆಕ್ರೋಶ ಕೂಡ ವ್ಯಕ್ತವಾಗಿತ್ತು. ಅಲ್ಲದೆ, ಸಾರ್ವಜನಿಕ ಪ್ರದೇಶದಲ್ಲಿ ಈ ರೀತಿ ಮಾಡೋದು ಸರಿಯಲ್ಲ ಎನ್ನುವ ಅಭಿಪ್ರಾಯ ಜನರಿಂದ ವ್ಯಕ್ತವಾಗಿತ್ತು. ಇದಾದ ಬೆನಲ್ಲೇ ಇದೇ ಮಾದರಿಯ ಮತ್ತೊಂದು ಘಟನೆ ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ನಡೆದಿದೆ.

ಸಿಂಧನೂರಿನ ಬಸ್ ನಿಲ್ದಾಣದಲ್ಲಿ ಯುವಕ-ಯುವತಿ ನಿಂತಿದ್ದರು. ಇಬ್ಬರೂ ಒಬ್ಬರನ್ನೊಬ್ಬರು ತಬ್ಬಿ ನಿಂತಿದ್ದರು. ಇಷ್ಟೇ ಆಗಿದ್ದರೆ ಯಾರೂ ತಕರಾರು ತೆಗೆಯುತ್ತಿರಲಿಲ್ಲ. ಆದರೆ, ಈ ಜೋಡಿ ಒಂದು ಹೆಜ್ಜೆ ಮುಂದೆ ಹೋಗಿತ್ತು. ಎಲ್ಲರೂ ಇದ್ದಂತೆಯೇ ಒಬ್ಬರನ್ನೊಬ್ಬರು ಚುಂಬಿಸಿಕೊಂಡಿದ್ದರು.

ಬಸ್ ನಿಲ್ದಾಣದಲ್ಲೇ ಜೋಡಿ ಮೈ ಮರೆತಿದೆ. ಸಾರ್ವಜನಿಕರ ಎದುರಲ್ಲೇ ಜೋಡಿ ಚುಂಬಿಸಿದೆ. ಅಕ್ಕಪಕ್ಕದಲ್ಲಿ ಹಿರಿಯರು-ಸಣ್ಣ ಮಕ್ಕಳು ಇದ್ದರೂ ಗಮನಿಸದೇ  ಜೋಡಿ ಅಸಭ್ಯವಾಗಿ ವರ್ತಿಸಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಮಂಡ್ಯದಲ್ಲಿ ಏನಾಗಿತ್ತು? ಅದು ವ್ಯಾಂಲೆಂಟೈನ್ಸ್​ ಡೇ ಸಮಯ.  ಆಗ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಯುವ ಜೋಡಿಯೊಂದು ಬಸ್​ ನಿಲ್ದಾಣಕ್ಕೆ ಬಂದು ನಿಂತಿತ್ತು. ಬಸ್​ ಹಿಂಭಾಗಕ್ಕೆ ತೆರಳಿದ ಹುಡುಗ-ಹುಡುಗಿ ಪರಸ್ಪರ ಮುತ್ತಿಕ್ಕಲು ಪ್ರಾರಂಭಿಸಿದ್ದವು. ಸುತ್ತಮುತ್ತ ಜನರು ಓಡಾಡುವುದನ್ನು ನೋಡಿಯೂ ಈ ಜೋಡಿ ಮೈ ಮರೆತು ತಮ್ಮ ಕಾರ್ಯವನ್ನು ಮುಂದುವರಿಸಿತ್ತು. ಹಾಡಹಗಲೇ ಸಾರ್ವಜನಿಕ ಪ್ರದೇಶದಲ್ಲಿ ಯುವ ಜೋಡಿಯ ಚುಂಬನ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಸಾರ್ವಜನಿಕ ಪ್ರದೇಶದಲ್ಲಿ ಯುವ ಜೋಡಿಯ ಅಶ್ಲೀಲ ವರ್ತನೆ ಈಗ ಆಕ್ರೋಶ ವ್ಯಕ್ತವಾಗಿತ್ತು.

 ಕೆ.ಆರ್. ಪೇಟೆ ಬಸ್​​ ನಿಲ್ದಾಣದಲ್ಲಿ ಮೈ ಮರೆತು ಚುಂಬಿಸಿದ ಯುವ ಜೋಡಿ.. ವಿಡಿಯೋ ಇದೆ ನೋಡಿ

Published On - 8:46 pm, Wed, 24 February 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು