Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಲವ್​, ಸೆಕ್ಸ್​ ದೋಖಾ: ಇಬ್ಬರು ಯುವತಿಯರಿಗೆ ಮೋಸ, ಮತ್ತೊಬ್ಬಳೊಂದಿಗೆ ಯುವಕ ಪರಾರಿ

ಮನೆ ಮುಂದೆ ಹೋಗುವ ಚಂದದ ಯುವತಿ ಹಾಗೂ ಮಹಿಳೆಯರೇ ಆತನ ಟಾರ್ಗೆಟ್. ಲಿವಿಂಗ್ ಟುಗೆದರ್​ನಲ್ಲಿ ಇರಿಸಿಕೊಂಡು ಲವ್​, ಸೆಕ್ಸ್​, ದೋಖಾ ಮಾಡಿ ಬಳಿಕ ಮತ್ತೊಂದು ಯುವತಿಯೊಂದು ಯುವಕ ಪರಾರಿಯಾದಂತಹ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ಇಬ್ಬರೂ ಯುವತಿಯರಿಗೆ ಯಾಮಾರಿಸಿ ಪರಾರಿಯಾದ ಬಿಹಾರಿ ಮೂಲದ ಯುವಕನಿಗಾಗಿ ಪೊಲೀಸ್​ ಶೋಧ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಲವ್​, ಸೆಕ್ಸ್​ ದೋಖಾ: ಇಬ್ಬರು ಯುವತಿಯರಿಗೆ ಮೋಸ, ಮತ್ತೊಬ್ಬಳೊಂದಿಗೆ ಯುವಕ ಪರಾರಿ
ಬೆಂಗಳೂರಿನಲ್ಲಿ ಲವ್​, ಸೆಕ್ಸ್​ ದೋಖಾ: ಇಬ್ಬರು ಯುವತಿಯರಿಗೆ ಮೋಸ, ಮತ್ತೊಬ್ಬಳೊಂದಿಗೆ ಯುವಕ ಪರಾರಿ
Follow us
ಬಿ ಮೂರ್ತಿ, ನೆಲಮಂಗಲ
| Updated By: ಗಂಗಾಧರ​ ಬ. ಸಾಬೋಜಿ

Updated on: Jul 14, 2024 | 4:25 PM

ನೆಲಮಂಗಲ, ಜುಲೈ 14: ಓರ್ವ ಆಸಾಮಿ ಬಾಳು ಕೊಡುವುದಾಗಿ ವಂಚಿಸಿ ಇಬ್ಬರು ಯುವತಿಯರಿಗೆ (girls) ವಂಚನೆ ಮಾಡಿ ಮೂರನೇ ಯುವತಿಯೊಂದಿಗೆ ಪರಾರಿಯಾಗಿರುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಿಹಾರಿ (bihar) ಮೂಲದ ಸೋನುಕುಮಾರ್​ ತನ್ನ ಮನೆ ಮುಂದೆ ಹೋಗುವ ಚಂದದ ಯುವತಿ ಹಾಗೂ ಮಹಿಳೆಯರನ್ನು ಟಾರ್ಗೆಟ್​ ಮಾಡುತ್ತಿದ್ದ. ಬೇರೆ ಬೇರೆ ಊರುಗಳಿಂದ ಬಂದವರನ್ನು ಪರಿಚಯ ಮಾಡಿಕೊಂಡು ಬಳಿಕ ಲವ್ ಮಾಡುವುದಾಗಿ ನಂಬಿಸಿ ಲಿವಿಂಗ್​​​ ಟುಗೆದರ್​​ ಇರಿಸಿಕೊಳ್ಳುತ್ತಿದ್ದ. ತನ್ನ ಆಸೆ ಈಡೇರಿದ ಬಳಿಕ ಮತ್ತೊಬ್ಬ ಯುವತಿಯೊಂದಿಗೆ ಎಸ್ಕೇಪ್​ ಆಗುವ ಖಯಾಲಿ ಹೊಂದಿದ್ದ.

ಬಿಹಾರಿ ಮೂಲದ ಸೋನುಕುಮಾರ್​ ಬೆಂಗಳೂರಿನ ನೆಲಗದರನಹಳ್ಳಿಯಲ್ಲಿ ವಾಸವಿದ್ದ. ವಿಚ್ಛೇದನ ಪಡೆದ ಮಹಿಳೆ ಸೇರಿದಂತೆ ಓರ್ವ ಯುವತಿಗೆ ಲವ್​, ಸೆಕ್ಸ್​, ದೋಖಾ ಮಾಡಿ ಇದೀಗ ಇಬ್ಬರನ್ನೂ ಬಿಟ್ಟು ಪೀಣ್ಯಾದ ಕುಸುಮ ಎಂಬ ಯುವತಿಯೊಂದಿಗೆ ಪರಾರಿಯಾಗಿದ್ದಾನೆ. ಸದ್ಯ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಬಾಲಕಿ ಶವ ಪತ್ತೆ: ತಾಯಿಯ ಅಕ್ರಮ ಸಂಬಂಧಕ್ಕೆ ಬಲಿಯಾದಳಾ?

ಸೋನುಕುಮಾರ್ ಹಾಗೂ ಕುಸುಮ ಮದುವೆಯಾಗಿದೆ ಎನ್ನುವ ಫೋಟೋಗಳು ಕೂಡ ವೈರಲ್​ ಆಗಿವೆ. ಕುಸುಮ ಮನೆಯವರು ಕೂಡ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲು ಮಾಡಿದ್ದಾರೆ. ಪರ್ವೀನ್ ತಾಜ್ ಎಂಬ ಮಹಿಳೆಯ ಜೊತೆ ಲಿವಿಂಗ್​​​ ಟುಗೆದರ್​ನಲ್ಲಿ ಇದ್ದಾಗಲೇ ಮನೆಯಲ್ಲಿ 3 ಲಕ್ಷದ 60 ಸಾವಿರ ರೂ. ಕಳ್ಳತನ ಮಾಡಿ ಪರಾರಿಯಾಗಿದ್ದಾನೆ. ಹೀಗಾಗಿ ಆರೋಪಿ ಸೋನುಕುಮಾರ್ ಪತ್ತೆಗಾಗಿ ಪೀಣ್ಯಾ ಪೊಲೀಸರು ಶೋಧ ನಡೆಸಿದ್ದಾರೆ.

ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಪಂಚಾಯತ್ ಸದಸ್ಯನಿಂದಲೇ ಅತ್ಯಾಚಾರ

ಉಡುಪಿ: ದಲಿತ ಸಮುದಾಯದ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಪಂಚಾಯತ್ ಸದಸ್ಯನೇ ಅತ್ಯಾಚಾರವೆಸಗಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ನಡೆದಿತ್ತು. ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮ ಪಂಚಾಯತಿ ಸದಸ್ಯ ಸಂತೋಷ್ ಪುತ್ರನ್ (46) ಎಂಬಾತನೇ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಲೈಂಗಿಕ ದೌರ್ಜನ್ಯ ನಡೆಸಿ ಬೆದರಿಕೆ ಹಾಕಿದ ಆರೋಪದಲ್ಲಿ ಆತನ ವಿರುದ್ಧ ಪೋಕ್ಸೋ ಹಾಗೂ ದಲಿತ ದೌರ್ಜನ್ಯ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಮದ್ವೆಯಾಗಿದ್ದರೂ ಬಾಡದ ಹಳೇ ಪ್ರೀತಿ.. ಆಷಾಢ ಮಾಸಕ್ಕೆಂದು ತವರಿಗೆ ಬಂದು ಪ್ರಿಯಕರನ ಜೊತೆ ಸಾವಿಗ ಶರಣು

ವಿವಾಹಿತನಾಗಿರುವ ಸಂತೋಷ್ ಪುತ್ರನ್ ಬಾಲಕಿಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಈತನ ವಿರುದ್ಧ ಪೋಷಕರು ಕಾರ್ಕಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿ ಸಂತೋಷ್ ಪುತ್ರನ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್