AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯತಮೆಯನ್ನು ಕರೆಸಿಕೊಳ್ಳಲು 10 ತಿಂಗಳ ಮಗುವನ್ನೇ ಕಿಡ್ನಾಪ್ ಮಾಡಿದ್ದ ಪಾಗಲ್ ಪ್ರೇಮಿ ಅರೆಸ್ಟ್

ವಾರದ ಹಿಂದೆ ಬೆಳಗಿನ ಜಾವ ಸಲ್ಮಾಳ ಮನೆಗೆ ಬಂದು ತನ್ನ ಪ್ರಿಯತಮೆಯ ತಮ್ಮನ 10 ತಿಂಗಳ ಗಂಡು ಮಗುವನ್ನು ಹೊತ್ತೊಯ್ದಿದ್ದಾನೆ. ಬಳಿಕ ಮನೆಗೆ ಫೋನ್ ಮಾಡಿ ನಾನು ಮೈಸೂರಿನಲ್ಲಿದ್ದೇನೆ. ಪ್ರಿಯತಮೆ ಸಲ್ಮಾಳನ್ನ ಕಳಿಸಿ ಮಗುವನ್ನು ಕರೆದೊಯ್ಯುವಂತೆ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ...

ಪ್ರಿಯತಮೆಯನ್ನು ಕರೆಸಿಕೊಳ್ಳಲು 10 ತಿಂಗಳ ಮಗುವನ್ನೇ ಕಿಡ್ನಾಪ್ ಮಾಡಿದ್ದ ಪಾಗಲ್ ಪ್ರೇಮಿ ಅರೆಸ್ಟ್
ಆರೋಪಿ ಸಿದ್ದಿಕ್ ಮತ್ತು ಮಗು
TV9 Web
| Updated By: ಆಯೇಷಾ ಬಾನು|

Updated on: Jun 03, 2021 | 12:51 PM

Share

ತುಮಕೂರು: ಪ್ರಿಯತಮೆಗಾಗಿ 10 ತಿಂಗಳ ಮಗುವನ್ನೇ ಯುವಕ ಅಪಹರಿಸಿರುವ ಘಟನೆ ತುಮಕೂರು ನಗರದ ಪುರೋಸ್ ಕಾಲೋನಿಯಲ್ಲಿ ನಡೆದಿದೆ. ತನ್ನ ಪ್ರಿಯತಮೆಯನ್ನು ತನ್ನ ಬಳಿ ಕರೆಸಿಕೊಳ್ಳಲು ಯುವಕ 10 ತಿಂಗಳ ಪುಟ್ಟ ಮಗುವನ್ನು ಅಪಹರಣ ಮಾಡಿದ್ದ. ಸದ್ಯ ಈಗ ಆರೋಪಿ ಅರೆಸ್ಟ್ ಆಗಿದ್ದಾನೆ.

25 ವರ್ಷದ ಸಿದ್ದಿಕ್ ಮತ್ತು ಸಲ್ಮಾ ಇಬ್ಬರೂ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸ್ತಿದ್ದರು. ಅಲ್ಲದೆ ಇದರ ನಡುವೆ ಸಿದ್ದಿಕ್, ಸಲ್ಮಾ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಇಬ್ಬರೂ ಜೊತೆಗಿದ್ದರು. ಆದರೆ ಕೆಲ ದಿನಗಳ ಹಿಂದೆ ಸಲ್ಮಾ, ಸಿದ್ದಿಕ್ನನ್ನ ಬಿಟ್ಟು ಮನೆಗೆ ತೆರಳಿದ್ದಳು. ಹೀಗಾಗಿ ಸಿದ್ದಿಕ್ ಪದೇ ಪದೇ ವಾಪಸ್ ಬರುವಂತೆ ಪೀಡಿಸುತ್ತಿದ್ದ. ಆದರೆ ಸಲ್ಮಾ ಬಂದಿರಲಿಲ್ಲ. ಹೀಗಾಗಿ ಸಲ್ಮಾ ತಮ್ಮನ ಮಗುವನ್ನು ಹೊತ್ತೊಯ್ದಿದ್ದಾನೆ. ವಾರದ ಹಿಂದೆ ಬೆಳಗಿನ ಜಾವ ಸಲ್ಮಾಳ ಮನೆಗೆ ಬಂದು ತನ್ನ ಪ್ರಿಯತಮೆಯ ತಮ್ಮನ 10 ತಿಂಗಳ ಗಂಡು ಮಗುವನ್ನು ಹೊತ್ತೊಯ್ದಿದ್ದಾನೆ.

ಬಳಿಕ ಮನೆಗೆ ಫೋನ್ ಮಾಡಿ ನಾನು ಮೈಸೂರಿನಲ್ಲಿದ್ದೇನೆ. ಪ್ರಿಯತಮೆ ಸಲ್ಮಾಳನ್ನ ಕಳಿಸಿ ಮಗುವನ್ನು ಕರೆದೊಯ್ಯುವಂತೆ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ. ಭಯಗೊಂಡ ಕುಟುಂಬಸ್ಥರು ಮಗುವನ್ನು ತರುವಂತೆ ಹೇಳಿ ಸಲ್ಮಾಳನ್ನ ಸಿದ್ದಿಕ್ ಇರುವಲ್ಲಿಗೆ ಕಳಿಸಿದ್ದಾರೆ. ಆದ್ರೆ ಅಲ್ಲಿ ಹೋಗಿ ನೋಡಿದಾಗ ಮಗು ಇರಲಿಲ್ಲ, ಬಳಿಕ ಇಬ್ಬರೂ ಅಲ್ಲೇ ಸೆಟೆಲ್ ಆಗಿದ್ದಾರೆ. ಇಬ್ಬರಿಂದಲೂ ಕುಟುಂಬಸ್ಥರಿಗೆ ಯಾವುದೇ ಕರೆ, ಮಾಹಿತಿ ಸಿಕ್ಕಿರಲಿಲ್ಲ. ಬಳಿಕ ಒಂದು ವಾರ ಆರಾಮಾಗಿ ಓಡಾಡಿಕೊಂಡಿದ್ದಾರೆ. ಸದ್ಯ ಸಿದ್ದಿಕ್ ಮಗುವನ್ನು ಕಿಡ್ನಾಪ್ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಅರಸಿಕೆರೆ ಬಳಿ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಆರೋಪಿ ಸಿಕ್ಕರೂ ಪುಟ್ಟ ಕಂದಮ್ಮ ಮಾತ್ರ ಸಿಕ್ಕಿಲ್ಲ. ವಿಚಾರಣೆ ವೇಳೆ ಮಗುವನ್ನ ಕೆರೆಯಲ್ಲಿ ಬಿಸಾಕಿರುವುದಾಗಿ ಆರೋಪಿ ಬಾಯ್ಬಿಟ್ಟಿದ್ದಾನೆ. ತುಮಕೂರು ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

baby kidnap

ಸಿದ್ದಿಕ್

ಇದನ್ನೂ ಓದಿ: ತುಮಕೂರಿನ ಪಾಗಲ್ ಪ್ರೇಮಿಯಿಂದ ಅಪ್ರಾಪ್ತೆ ಕೊಲೆ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ