AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯತಮೆಯನ್ನು ಕರೆಸಿಕೊಳ್ಳಲು 10 ತಿಂಗಳ ಮಗುವನ್ನೇ ಕಿಡ್ನಾಪ್ ಮಾಡಿದ್ದ ಪಾಗಲ್ ಪ್ರೇಮಿ ಅರೆಸ್ಟ್

ವಾರದ ಹಿಂದೆ ಬೆಳಗಿನ ಜಾವ ಸಲ್ಮಾಳ ಮನೆಗೆ ಬಂದು ತನ್ನ ಪ್ರಿಯತಮೆಯ ತಮ್ಮನ 10 ತಿಂಗಳ ಗಂಡು ಮಗುವನ್ನು ಹೊತ್ತೊಯ್ದಿದ್ದಾನೆ. ಬಳಿಕ ಮನೆಗೆ ಫೋನ್ ಮಾಡಿ ನಾನು ಮೈಸೂರಿನಲ್ಲಿದ್ದೇನೆ. ಪ್ರಿಯತಮೆ ಸಲ್ಮಾಳನ್ನ ಕಳಿಸಿ ಮಗುವನ್ನು ಕರೆದೊಯ್ಯುವಂತೆ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ...

ಪ್ರಿಯತಮೆಯನ್ನು ಕರೆಸಿಕೊಳ್ಳಲು 10 ತಿಂಗಳ ಮಗುವನ್ನೇ ಕಿಡ್ನಾಪ್ ಮಾಡಿದ್ದ ಪಾಗಲ್ ಪ್ರೇಮಿ ಅರೆಸ್ಟ್
ಆರೋಪಿ ಸಿದ್ದಿಕ್ ಮತ್ತು ಮಗು
TV9 Web
| Edited By: ಆಯೇಷಾ ಬಾನು|

Updated on: Jun 03, 2021 | 12:51 PM

Share

ತುಮಕೂರು: ಪ್ರಿಯತಮೆಗಾಗಿ 10 ತಿಂಗಳ ಮಗುವನ್ನೇ ಯುವಕ ಅಪಹರಿಸಿರುವ ಘಟನೆ ತುಮಕೂರು ನಗರದ ಪುರೋಸ್ ಕಾಲೋನಿಯಲ್ಲಿ ನಡೆದಿದೆ. ತನ್ನ ಪ್ರಿಯತಮೆಯನ್ನು ತನ್ನ ಬಳಿ ಕರೆಸಿಕೊಳ್ಳಲು ಯುವಕ 10 ತಿಂಗಳ ಪುಟ್ಟ ಮಗುವನ್ನು ಅಪಹರಣ ಮಾಡಿದ್ದ. ಸದ್ಯ ಈಗ ಆರೋಪಿ ಅರೆಸ್ಟ್ ಆಗಿದ್ದಾನೆ.

25 ವರ್ಷದ ಸಿದ್ದಿಕ್ ಮತ್ತು ಸಲ್ಮಾ ಇಬ್ಬರೂ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸ್ತಿದ್ದರು. ಅಲ್ಲದೆ ಇದರ ನಡುವೆ ಸಿದ್ದಿಕ್, ಸಲ್ಮಾ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಇಬ್ಬರೂ ಜೊತೆಗಿದ್ದರು. ಆದರೆ ಕೆಲ ದಿನಗಳ ಹಿಂದೆ ಸಲ್ಮಾ, ಸಿದ್ದಿಕ್ನನ್ನ ಬಿಟ್ಟು ಮನೆಗೆ ತೆರಳಿದ್ದಳು. ಹೀಗಾಗಿ ಸಿದ್ದಿಕ್ ಪದೇ ಪದೇ ವಾಪಸ್ ಬರುವಂತೆ ಪೀಡಿಸುತ್ತಿದ್ದ. ಆದರೆ ಸಲ್ಮಾ ಬಂದಿರಲಿಲ್ಲ. ಹೀಗಾಗಿ ಸಲ್ಮಾ ತಮ್ಮನ ಮಗುವನ್ನು ಹೊತ್ತೊಯ್ದಿದ್ದಾನೆ. ವಾರದ ಹಿಂದೆ ಬೆಳಗಿನ ಜಾವ ಸಲ್ಮಾಳ ಮನೆಗೆ ಬಂದು ತನ್ನ ಪ್ರಿಯತಮೆಯ ತಮ್ಮನ 10 ತಿಂಗಳ ಗಂಡು ಮಗುವನ್ನು ಹೊತ್ತೊಯ್ದಿದ್ದಾನೆ.

ಬಳಿಕ ಮನೆಗೆ ಫೋನ್ ಮಾಡಿ ನಾನು ಮೈಸೂರಿನಲ್ಲಿದ್ದೇನೆ. ಪ್ರಿಯತಮೆ ಸಲ್ಮಾಳನ್ನ ಕಳಿಸಿ ಮಗುವನ್ನು ಕರೆದೊಯ್ಯುವಂತೆ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ. ಭಯಗೊಂಡ ಕುಟುಂಬಸ್ಥರು ಮಗುವನ್ನು ತರುವಂತೆ ಹೇಳಿ ಸಲ್ಮಾಳನ್ನ ಸಿದ್ದಿಕ್ ಇರುವಲ್ಲಿಗೆ ಕಳಿಸಿದ್ದಾರೆ. ಆದ್ರೆ ಅಲ್ಲಿ ಹೋಗಿ ನೋಡಿದಾಗ ಮಗು ಇರಲಿಲ್ಲ, ಬಳಿಕ ಇಬ್ಬರೂ ಅಲ್ಲೇ ಸೆಟೆಲ್ ಆಗಿದ್ದಾರೆ. ಇಬ್ಬರಿಂದಲೂ ಕುಟುಂಬಸ್ಥರಿಗೆ ಯಾವುದೇ ಕರೆ, ಮಾಹಿತಿ ಸಿಕ್ಕಿರಲಿಲ್ಲ. ಬಳಿಕ ಒಂದು ವಾರ ಆರಾಮಾಗಿ ಓಡಾಡಿಕೊಂಡಿದ್ದಾರೆ. ಸದ್ಯ ಸಿದ್ದಿಕ್ ಮಗುವನ್ನು ಕಿಡ್ನಾಪ್ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಅರಸಿಕೆರೆ ಬಳಿ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಆರೋಪಿ ಸಿಕ್ಕರೂ ಪುಟ್ಟ ಕಂದಮ್ಮ ಮಾತ್ರ ಸಿಕ್ಕಿಲ್ಲ. ವಿಚಾರಣೆ ವೇಳೆ ಮಗುವನ್ನ ಕೆರೆಯಲ್ಲಿ ಬಿಸಾಕಿರುವುದಾಗಿ ಆರೋಪಿ ಬಾಯ್ಬಿಟ್ಟಿದ್ದಾನೆ. ತುಮಕೂರು ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

baby kidnap

ಸಿದ್ದಿಕ್

ಇದನ್ನೂ ಓದಿ: ತುಮಕೂರಿನ ಪಾಗಲ್ ಪ್ರೇಮಿಯಿಂದ ಅಪ್ರಾಪ್ತೆ ಕೊಲೆ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ