AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಶ್ಚಿತಾರ್ಥ ಆಗಿದ್ದ ಯುವತಿ ಪ್ರೇಮಿ ಜೊತೆ ಆತ್ಮಹತ್ಯೆಗೆ ಶರಣು.. ಬಲಿಯಾದವು ಎರಡು ಜೀವ

ಇತ್ತೀಚೆಗಷ್ಟೇ ವಿದ್ಯಾಶ್ರೀಗೆ ಬೇರೊಬ್ಬ ಯುವಕನ ಜೊತೆ ನಿಶ್ಚಿತಾರ್ಥ ಆಗಿತ್ತು. ಆದರೆ ಈ ನಿಶ್ಚಿತಾರ್ಥ ಆಕೆಗೆ ಇಷ್ಟ ಇರಲಿಲ್ಲ. ಹೀಗಾಗಿ ಏಪ್ರಿಲ್ 24 ರಂದು ಬೆಳಗಿನ ಜಾವ ಮನೆಯಿಂದ ನಾಪತ್ತೆಯಾಗಿದ್ದಳು.

ನಿಶ್ಚಿತಾರ್ಥ ಆಗಿದ್ದ ಯುವತಿ ಪ್ರೇಮಿ ಜೊತೆ ಆತ್ಮಹತ್ಯೆಗೆ ಶರಣು.. ಬಲಿಯಾದವು ಎರಡು ಜೀವ
ಇರ್ಷಾದ್ ಕುಡಚಿ, ವಿದ್ಯಾಶ್ರೀ
ಆಯೇಷಾ ಬಾನು
|

Updated on: Apr 25, 2021 | 12:53 PM

Share

ಹಾವೇರಿ: ಮನನೊಂದ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿನ ನಾಗನೂರು ಗ್ರಾಮದಲ್ಲಿ ನಡೆದಿದೆ. ವಿದ್ಯಾಶ್ರೀ ಗಾಳಿ(22), ಇರ್ಷಾದ್ ಕುಡಚಿ(23) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.

ವಿದ್ಯಾಶ್ರೀ ಮತ್ತು ಇರ್ಷಾದ್ ಇಬ್ಬರೂ ಒಬ್ಬರನೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಕುಟುಂಬಸ್ಥರ ಒಪ್ಪಿಗೆ ಇರಲಿಲ್ಲ. ಇತ್ತೀಚೆಗಷ್ಟೇ ವಿದ್ಯಾಶ್ರೀಗೆ ಬೇರೊಬ್ಬ ಯುವಕನ ಜೊತೆ ನಿಶ್ಚಿತಾರ್ಥ ಆಗಿತ್ತು. ಆದರೆ ಈ ನಿಶ್ಚಿತಾರ್ಥ ಆಕೆಗೆ ಇಷ್ಟ ಇರಲಿಲ್ಲ. ಹೀಗಾಗಿ ಏಪ್ರಿಲ್ 24 ರಂದು ಬೆಳಗಿನ ಜಾವ ಮನೆಯಿಂದ ನಾಪತ್ತೆಯಾಗಿದ್ದಳು.

ನಿನ್ನೆಯಷ್ಟೇ ಮಹಿಳಾ ಪೊಲೀಸ್ ಠಾಣೆಯಲ್ಲಿ ವಿದ್ಯಾಶ್ರೀ ಕಾಣೆಯಾಗಿದ್ದ ಬಗ್ಗೆ ಕುಟುಂಬಸ್ಥರು ಪ್ರಕರಣ ದಾಖಲಿಸಿದ್ದರು. ಇರ್ಷಾದ್ ಕುಟುಂಬಕ್ಕೆ ಸೇರಿದ ಜಮೀನಿನಲ್ಲೇ ಇರ್ಷಾದ್ ಮತ್ತು ವಿದ್ಯಾಶ್ರೀ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದು ಇಂದು ದೇಹ ಸಿಕ್ಕಿದೆ. ಸ್ಥಳಕ್ಕೆ ಹಾವೇರಿ ಗ್ರಾಮೀಣ ಠಾಣೆ ಸಿಪಿಐ ನಾಗಮ್ಮ, ಮಹಿಳಾ ಠಾಣೆ ಸಿಪಿಐ ಚಿದಾನಂದ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಕಲಬುರಗಿ: ಕೊರೊನಾ ಸೋಂಕಿತ ತಾಯಿಯನ್ನು ನೋಡಲು ಬಿಡದಿದ್ದರಿಂದ ಆತ್ಮಹತ್ಯೆಗೆ ಯತ್ನಿಸಿದ ಪುತ್ರ

Follow Us
ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್
ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ