AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನ ತೆರೆಯುತ್ತಿದ್ದಂತೆ ಶುಭ ಕಾರ್ಯ.. 10 ವರ್ಷದಿಂದ ಪ್ರೀತಿಸುತ್ತಿದ್ದ ಪ್ರೇಮಿಗಳು ದೇಗುಲದಲ್ಲಿ ಮದುವೆ

ಅನ್ಲಾಕ್ ಆಗುತ್ತಿದ್ದಂತೆ ಬೆಂಗಳೂರಿನ ಮೆಜೆಸ್ಟಿಕ್ನ ಅಣ್ಣಮ್ಮ ದೇಗುಲದಲ್ಲಿ ಪ್ರೇಮಿಗಳು ಮದುವೆಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಚೆನ್ನೈ ಮೂಲದ ಸುಧಾಕರ್ ಮತ್ತು ಲೈಲಾ ಎಂಬ ಪ್ರೇಮಿಗಳು ಬೆಂಗಳೂರಿನಲ್ಲಿ ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ದೇವಸ್ಥಾನ ತೆರೆಯುತ್ತಿದ್ದಂತೆ ಶುಭ ಕಾರ್ಯ.. 10 ವರ್ಷದಿಂದ ಪ್ರೀತಿಸುತ್ತಿದ್ದ ಪ್ರೇಮಿಗಳು ದೇಗುಲದಲ್ಲಿ ಮದುವೆ
ದೇವಸ್ಥಾನದಲ್ಲಿ ಮದುವೆಯಾದ ಪ್ರೇಮಿಗಳು
TV9 Web
| Updated By: ಆಯೇಷಾ ಬಾನು|

Updated on: Jul 05, 2021 | 10:01 AM

Share

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ಸರ್ಕಾರ ಲಾಕ್ಡೌನ್ ಘೋಷಿಸಿತ್ತು. ಸದ್ಯ ಕೊರೊನಾ ನಿಯಂತ್ರಣಕ್ಕೆ ಬರುತ್ತಿದ್ದಂತೆ ಎರಡು ತಿಂಗಳ ಬಳಿಕ ಇಂದಿನಿಂದ ರಾಜ್ಯದ ಬಹುತೇಕ ದೇವಸ್ಥಾನಗಳು ಓಪನ್ ಆಗಿವೆ. ಇದರ ನಡುವೆ ದೇವಸ್ಥಾನ ತೆರೆಯುತ್ತಿದ್ದಂತೆ ಇಂದು ಬೆಳ್ಳಂ ಬೆಳಗ್ಗೆ ದೇವರ ಸನ್ನಿಧಾನದಲ್ಲಿ ಶುಭ ಕಾರ್ಯ ಜರುಗಿದೆ.

ಅನ್ಲಾಕ್ ಆಗುತ್ತಿದ್ದಂತೆ ಬೆಂಗಳೂರಿನ ಮೆಜೆಸ್ಟಿಕ್ನ ಅಣ್ಣಮ್ಮ ದೇಗುಲದಲ್ಲಿ ಪ್ರೇಮಿಗಳು ಮದುವೆಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಚೆನ್ನೈ ಮೂಲದ ಸುಧಾಕರ್ ಮತ್ತು ಲೈಲಾ ಎಂಬ ಪ್ರೇಮಿಗಳು ಬೆಂಗಳೂರಿನಲ್ಲಿ ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ಹತ್ತು ವರ್ಷದಿಂದ ಪ್ರೀತಿಸುತ್ತಿದ್ದ ಸುಧಾಕರ್, ಲೈಲಾ ಎರಡು ತಿಂಗಳ ಹಿಂದೆ ಚೆನ್ನೈನಿಂದ ಬೆಂಗಳೂರಿಗೆ ಬಂದಿದ್ದರು. ಇವರಿಬ್ಬರ ಪ್ರೀತಿಗೆ ಕುಟುಂಬಸ್ಥರಿಂದ ವಿರೋಧವಿತ್ತು. ಅಲ್ಲದೆ ಬೇರೆ ಯುವಕನ ಜೊತೆ ಲೈಲಾಳ ಮದುವೆ ಮಾಡಲು ಕುಟುಂಬಸ್ಥರು ಮುಂದಾಗಿದ್ದರು. ಹೀಗಾಗಿ ಈ ಜೋಡಿ ಚೆನ್ನೈನಿಂದ ಬೆಂಗಳೂರಿಗೆ ಬಂದಿತ್ತು. ಆದ್ರೆ ಕೊರೊನಾ ಲಾಕ್ಡೌನ್ ಕಟ್ಟುನಿಟ್ಟಿನ ಮಾರ್ಗಸೂಚಿ ಇದ್ದ ಕಾರಣ ಮದುವೆಯಾಗಲು ಆಗಿರಲಿಲ್ಲ.

ಸದ್ಯ ಲಾಕ್ಡೌನ್ ಓಪನ್ ಆಗುತ್ತಿದ್ದಂತೆ 10 ವರ್ಷದ ಪ್ರೀತಿಗೆ ಮೂರು ಗಂಟು ಬಿದ್ದಿದೆ. ಕೆಲ ಸಂಬಂಧಿಕರ ಸಮ್ಮುಖದಲ್ಲಿ ದೇವಸ್ಥಾನದಲ್ಲಿ ಪ್ರೇಮಿಗಳು ಸರಳವಾಗಿ ವಿವಾಹವಾಗಿದ್ದಾರೆ. ದೇವಸ್ಥಾನ ತೆರೆದ ಮೊದಲ ದಿನವೇ ಶುಭ ಕಾರ್ಯ ಜರುಗಿದೆ. ಪ್ರೇಮಿಗಳು ಒಂದಾಗಲು ದೇವಿಯ ಆಶೀರ್ವಾದ ಸಿಕ್ಕಿದೆ.

Temple marriage

ದೇವಸ್ಥಾನದಲ್ಲಿ ಮದುವೆಯಾದ ಪ್ರೇಮಿಗಳು

ಇದನ್ನೂ ಓದಿ: Karnataka Unlock 3.0: ದರ್ಶನಕ್ಕೆ ಸಿದ್ಧವಾದ ದೇವಾಲಯಗಳು.. ದೇವರ ಕಾಣಲು ಇಂದಿನಿಂದ ಭಕ್ತರಿಗೆ ಅವಕಾಶ

ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್