Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನ ತೆರೆಯುತ್ತಿದ್ದಂತೆ ಶುಭ ಕಾರ್ಯ.. 10 ವರ್ಷದಿಂದ ಪ್ರೀತಿಸುತ್ತಿದ್ದ ಪ್ರೇಮಿಗಳು ದೇಗುಲದಲ್ಲಿ ಮದುವೆ

ಅನ್ಲಾಕ್ ಆಗುತ್ತಿದ್ದಂತೆ ಬೆಂಗಳೂರಿನ ಮೆಜೆಸ್ಟಿಕ್ನ ಅಣ್ಣಮ್ಮ ದೇಗುಲದಲ್ಲಿ ಪ್ರೇಮಿಗಳು ಮದುವೆಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಚೆನ್ನೈ ಮೂಲದ ಸುಧಾಕರ್ ಮತ್ತು ಲೈಲಾ ಎಂಬ ಪ್ರೇಮಿಗಳು ಬೆಂಗಳೂರಿನಲ್ಲಿ ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ದೇವಸ್ಥಾನ ತೆರೆಯುತ್ತಿದ್ದಂತೆ ಶುಭ ಕಾರ್ಯ.. 10 ವರ್ಷದಿಂದ ಪ್ರೀತಿಸುತ್ತಿದ್ದ ಪ್ರೇಮಿಗಳು ದೇಗುಲದಲ್ಲಿ ಮದುವೆ
ದೇವಸ್ಥಾನದಲ್ಲಿ ಮದುವೆಯಾದ ಪ್ರೇಮಿಗಳು
Follow us
TV9 Web
| Updated By: ಆಯೇಷಾ ಬಾನು

Updated on: Jul 05, 2021 | 10:01 AM

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ಸರ್ಕಾರ ಲಾಕ್ಡೌನ್ ಘೋಷಿಸಿತ್ತು. ಸದ್ಯ ಕೊರೊನಾ ನಿಯಂತ್ರಣಕ್ಕೆ ಬರುತ್ತಿದ್ದಂತೆ ಎರಡು ತಿಂಗಳ ಬಳಿಕ ಇಂದಿನಿಂದ ರಾಜ್ಯದ ಬಹುತೇಕ ದೇವಸ್ಥಾನಗಳು ಓಪನ್ ಆಗಿವೆ. ಇದರ ನಡುವೆ ದೇವಸ್ಥಾನ ತೆರೆಯುತ್ತಿದ್ದಂತೆ ಇಂದು ಬೆಳ್ಳಂ ಬೆಳಗ್ಗೆ ದೇವರ ಸನ್ನಿಧಾನದಲ್ಲಿ ಶುಭ ಕಾರ್ಯ ಜರುಗಿದೆ.

ಅನ್ಲಾಕ್ ಆಗುತ್ತಿದ್ದಂತೆ ಬೆಂಗಳೂರಿನ ಮೆಜೆಸ್ಟಿಕ್ನ ಅಣ್ಣಮ್ಮ ದೇಗುಲದಲ್ಲಿ ಪ್ರೇಮಿಗಳು ಮದುವೆಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಚೆನ್ನೈ ಮೂಲದ ಸುಧಾಕರ್ ಮತ್ತು ಲೈಲಾ ಎಂಬ ಪ್ರೇಮಿಗಳು ಬೆಂಗಳೂರಿನಲ್ಲಿ ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ಹತ್ತು ವರ್ಷದಿಂದ ಪ್ರೀತಿಸುತ್ತಿದ್ದ ಸುಧಾಕರ್, ಲೈಲಾ ಎರಡು ತಿಂಗಳ ಹಿಂದೆ ಚೆನ್ನೈನಿಂದ ಬೆಂಗಳೂರಿಗೆ ಬಂದಿದ್ದರು. ಇವರಿಬ್ಬರ ಪ್ರೀತಿಗೆ ಕುಟುಂಬಸ್ಥರಿಂದ ವಿರೋಧವಿತ್ತು. ಅಲ್ಲದೆ ಬೇರೆ ಯುವಕನ ಜೊತೆ ಲೈಲಾಳ ಮದುವೆ ಮಾಡಲು ಕುಟುಂಬಸ್ಥರು ಮುಂದಾಗಿದ್ದರು. ಹೀಗಾಗಿ ಈ ಜೋಡಿ ಚೆನ್ನೈನಿಂದ ಬೆಂಗಳೂರಿಗೆ ಬಂದಿತ್ತು. ಆದ್ರೆ ಕೊರೊನಾ ಲಾಕ್ಡೌನ್ ಕಟ್ಟುನಿಟ್ಟಿನ ಮಾರ್ಗಸೂಚಿ ಇದ್ದ ಕಾರಣ ಮದುವೆಯಾಗಲು ಆಗಿರಲಿಲ್ಲ.

ಸದ್ಯ ಲಾಕ್ಡೌನ್ ಓಪನ್ ಆಗುತ್ತಿದ್ದಂತೆ 10 ವರ್ಷದ ಪ್ರೀತಿಗೆ ಮೂರು ಗಂಟು ಬಿದ್ದಿದೆ. ಕೆಲ ಸಂಬಂಧಿಕರ ಸಮ್ಮುಖದಲ್ಲಿ ದೇವಸ್ಥಾನದಲ್ಲಿ ಪ್ರೇಮಿಗಳು ಸರಳವಾಗಿ ವಿವಾಹವಾಗಿದ್ದಾರೆ. ದೇವಸ್ಥಾನ ತೆರೆದ ಮೊದಲ ದಿನವೇ ಶುಭ ಕಾರ್ಯ ಜರುಗಿದೆ. ಪ್ರೇಮಿಗಳು ಒಂದಾಗಲು ದೇವಿಯ ಆಶೀರ್ವಾದ ಸಿಕ್ಕಿದೆ.

Temple marriage

ದೇವಸ್ಥಾನದಲ್ಲಿ ಮದುವೆಯಾದ ಪ್ರೇಮಿಗಳು

ಇದನ್ನೂ ಓದಿ: Karnataka Unlock 3.0: ದರ್ಶನಕ್ಕೆ ಸಿದ್ಧವಾದ ದೇವಾಲಯಗಳು.. ದೇವರ ಕಾಣಲು ಇಂದಿನಿಂದ ಭಕ್ತರಿಗೆ ಅವಕಾಶ

ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್