AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಎಸ್​ಎಲ್​ಸಿ ಫಲಿತಾಂಶ ಕಡಿಮೆ ಬಂದರೆ ಶಿಕ್ಷಕರ ವಾರ್ಷಿಕ ವೇತನ ಬಡ್ತಿಗೆ ತಡೆ, ಶಾಲೆ ಅನುದಾನ ಬಂದ್

ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಲು ಮುಂದಾಯ್ತಾ ಶಾಲಾ ಶಿಕ್ಷಣ ಇಲಾಖೆ ಎಂಬ ಪ್ರಶ್ನೆ ಇದಿಗ ಮೂಡಿದೆ. ವರ್ಷದಿಂದ ವರ್ಷಕ್ಕೆ ಎಸ್ಎಸ್ಎಲ್​ಸಿ ಫಲಿತಾಂಶ ಕುಸಿತವಾಗುತ್ತಿದೆ. ಹೀಗಾಗಿ ಸಿಎಂ ಶಿಕ್ಷಣ ಇಲಾಖೆಗೆ ಗುರಿ ನೀಡಿದ್ದು , ಇಲಾಖೆ ಮಾತ್ರ ಎಸ್ಎಸ್ಎಲ್​ಸಿ ಫಲಿತಾಂಶ ಕುಸಿತಕ್ಕೆ ಶಿಕ್ಷಕರಿಗೆ ಬರೆ ಹಾಕಲು ಮುಂದಾಗಿದೆ.

ಎಸ್​ಎಸ್​ಎಲ್​ಸಿ ಫಲಿತಾಂಶ ಕಡಿಮೆ ಬಂದರೆ ಶಿಕ್ಷಕರ ವಾರ್ಷಿಕ ವೇತನ ಬಡ್ತಿಗೆ ತಡೆ, ಶಾಲೆ ಅನುದಾನ ಬಂದ್
ಸಾಂದರ್ಭಿಕ ಚಿತ್ರ
Vinay Kashappanavar
| Edited By: |

Updated on: Jun 20, 2025 | 7:24 AM

Share

ಬೆಂಗಳೂರು, ಜೂನ್ 20: ಪ್ರಸಕ್ತ ವರ್ಷದ ಎಸ್​ಎಸ್​ಎಲ್​ಸಿ ಫಲಿತಾಂಶ (SSLC Result) ಕುಸಿತಕ್ಕೆ ಸಿಎಂ ಸಿದ್ದರಾಮಯ್ಯ ಚಾಟಿ ಬೀಸಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಪ್ರಸಕ್ತ ವರ್ಷ ಎಸ್​ಎಸ್​ಎಲ್​ಸಿ ಫಲಿತಾಂಶ ಶೇ 75 ಸಾಧಿಸುವ ಗುರಿ ನೀಡಿದ್ದಾರೆ. ಈ ಬೆನ್ನಲ್ಲೇ ಶಿಕ್ಷಣ ಇಲಾಖೆಯು (Education Department)  ಶಿಕ್ಷಕರ ಮೇಲೆ ಗದಾ ಪ್ರಹಾರಕ್ಕೆ ಮುಂದಾಗಿದೆ. ಕಳೆದ ವರ್ಷ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಅನುದಾನಿತ ಶಾಲೆಗಳಿಗೆ ನೋಟಿಸ್ ನೀಡಿ ಕಾರಣ ಕೇಳಲು ಮುಂದಾಗಿದೆ. ವಿಷಯವಾರು ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಬಂದ ಶಿಕ್ಷಕರಿಗೂ ನೋಟಿಸ್ ನೀಡಿ ಕ್ರಮ ಜರುಗಿಸಲು ಮುಂದಾಗಿದೆ. ಯಾಕೆ ನಿಮ್ಮ ವಿಷಯದಲ್ಲಿ ಫಲಿತಾಂಶ ಕಡಿಮೆ ಬಂದಿದೆ? ಏನು ಸಮಸ್ಯೆ? ಉತ್ತರಿಸಿ ಎಂದು ಶಿಕ್ಷರಿಗೂ ನೋಟಿಸ್ ನೀಡಿ ಇಲಾಖೆ ಕ್ರಮಕ್ಕೆ ಮುಂದಾಗಿದೆ. ಶಿಕ್ಷಣ ಇಲಾಖೆಯ ನಡೆಗೆ ಕೆಲವು ಶಿಕ್ಷಕರಿಂದ ವಿರೋಧವೂ ವ್ಯಕ್ತವಾಗಿದೆ.

ಶಾಲಾ ಮುಖ್ಯ ಶಿಕ್ಷಕರಿಗೂ ನೋಟಿಸ್

ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕರಿಗೆ ಇಲಾಖೆ ನೋಟಿಸ್‌ ಜಾರಿ ಮಾಡಿದೆ. ಎಲ್ಲಾ ಸೌಲಭ್ಯ ನೀಡಿದರೂ ಫಲಿತಾಂಶ ಕಡಿಮೆ ಬಂದಿದೆ. ನಿಮ್ಮ ಮೇಲೆ ಯಾಕೆ ಕ್ರಮ ತೆಗೆದುಕೊಳ್ಳಬಾರದು ಎಂದು ನೋಟಿಸ್​​ನಲ್ಲಿ ಪ್ರಶ್ನಿಸಲಾಗಿದೆ. ಫಲಿತಾಂಶ ಉತ್ತಮಗೊಳಿಸುವ ನಿಟ್ಟಿನಲ್ಲಿ ನೀವು ಕ್ರಮ ತೆಗೆದುಕೊಂಡಿಲ್ಲ. ಇದು ಕರ್ತವ್ಯ ಲೋಪ ಅಲ್ಲವೇ ಎಂದು ನೋಟಿಸ್‌ನಲ್ಲಿ ಪ್ರಶ್ನಿಸಲಾಗಿದೆ. ನೋಟಿಸ್‌ಗೆ ಉತ್ತರ ಕೊಟ್ಟ ಬಳಿಕ ಅಂತಹ ಶಾಲಾ ಮುಖ್ಯ ಶಿಕ್ಷಕರ ವಿರುದ್ಧ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆಯನ್ನೂ ನೀಡಲಾಗಿದೆ.

ಖಾಸಗಿ ಅನುದಾನಿತ ಶಾಲೆಗಳ ಮೇಲೆ ಕಠಿಣ ಕ್ರಮ

ಖಾಸಗಿ ಅನುದಾನಿತ ಶಾಲೆಗಳ ಮೇಲೆ ಕಠಿಣ ಕ್ರಮಕ್ಕೆ ಇಲಾಖೆ ಮುಂದಾಗಿದೆ. ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಶಾಲಾ ಶಿಕ್ಷಕರು, ಸಂಸ್ಥೆಗಳ ಅನುದಾನವನ್ನೇ ಕಡಿತ ಮಾಡುವ ಆದೇಶವನ್ನು ಶಿಕ್ಷಣ ‌ಇಲಾಖೆ ಹೊರಡಿಸಿದೆ. ವಿಷಯವಾರು ಫಲಿತಾಂಶ ನೋಡಿ ಶಿಕ್ಷಕರ ವಾರ್ಷಿಕ ಬಡ್ತಿ, ವೇತನಾನುದಾನ ತಡೆಗೆ ಸರ್ಕಾರ ನಿರ್ಧಾರ ಮಾಡಿದೆ. ಬಿಇಓಗಳು ಎಲ್ಲವನ್ನೂ ಪರಿಶೀಲಿಸಿ ಆಯುಕ್ತರಿಗೆ ವರದಿ ನೀಡಬೇಕು ಎಂದು ಸೂಚಿಸಲಾಗಿರುವುದು ಶಿಕ್ಷಕರ ಬೇಸರಕ್ಕೆ ಕಾರವಾಗಿದೆ

ಇದನ್ನೂ ಓದಿ
Image
ಚಾಮರಾಜನಗರದಲ್ಲಿ ವ್ಯಾಘ್ರ ಅಟ್ಟಹಾಸ: ತಿಂಗಳಲ್ಲಿ 2 ಜೀವ ಬಲಿ ಪಡೆದ ನರಭಕ್ಷಕ
Image
ಮಡಿಕೇರಿಯಲ್ಲಿ ಬರೋಬ್ಬರಿ 9 ಪೊಲೀಸರ ಮನೆಗಳಲ್ಲೇ ಕಳ್ಳತನ!
Image
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕ ವಿನೂತನ ಪ್ರಯೋಗ
Image
ಚಾಮರಾಜನಗರ: ಮೂತ್ರ ವಿಸರ್ಜನೆಗೆಂದು ಹೊರ ಬಂದ ವ್ಯಕ್ತಿ ಮೇಲೆ ಹುಲಿ ದಾಳಿ

ಶಾಲೆಗಳ ಮೇಲೆ ಏನು ಕ್ರಮ?

  • ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಅನುದಾನಿತ ಶಾಲೆಗಳ ವಿಷಯವಾರು ಶಿಕ್ಷಕರ ವಾರ್ಷಿಕ ಬಡ್ತಿ ತಡೆಹಿಡಿಯುವುದು.
  • ವಿಷಯವಾರು ನಿರಂತರವಾಗಿ 3 ವರ್ಷ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಬಂದಿದ್ದರೆ ಅಂತ ಶಿಕ್ಷಕರ ವೇತನಾನುದಾನ ತಡೆಹಿಡಿಯುವುದು.
  • ಸತತ 5 ವರ್ಷಗಳಲ್ಲಿ ಶೇ 50 ಫಲಿತಾಂಶ ಬಾರದಿದ್ದರೆ ಆ ಶಾಲೆಯ ಅನುದಾನವೇ ತಡೆಹಿಡಿಯುವುದು.

ಇದನ್ನೂ ಓದಿ: Karnataka SSLC Result 2023 Highlights: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; 4 ವಿದ್ಯಾರ್ಥಿಗಳು ರಾಜ್ಯದ ಟಾಪರ್​ಗಳು

ಒಟ್ಟಿನಲ್ಲಿ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಗತಿಗೆ ಶಿಕ್ಷಕರನ್ನು ಗುರಿಯಾಗಿಸಿ ಶಿಕ್ಷಣ ಇಲಾಖೆ ಚಾಟಿ ಬೀಸಿರುವುದು ಈಗ ಶಿಕ್ಷಕರ ವಲಯದಲ್ಲಿ ವಿರೋಧಕ್ಕೆ ಕಾರಣವಾಗಿದ್ದು, ಶಿಕ್ಷಣ ಇಲಾಖೆ ಆಯುಕ್ತರು ಮಾತ್ರ ಇದಕ್ಕೆ ಯಾವುದೇ ಸ್ಪಷ್ಟನೆ ನೀಡುತ್ತಿಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್