AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಸ್ ಸಿಲಿಂಡರ್ ಬುಕಿಂಗ್‌ಗೆ ಮುಗಿಬಿದ್ದಿದ್ದ ಜನ ಈಗ ಸೈಲೆಂಟ್: ಕರ್ನಾಟಕದಲ್ಲಿ ಎಲ್‌ಪಿಜಿ ಬೇಡಿಕೆ ದಿಢೀರ್ ಕುಸಿತ! ಕಾರಣವೇನು?

ಕರ್ನಾಟಕದಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಭೀತಿ ಈಗ ನಿವಾರಣೆಯಾಗಿದೆ. ಯುದ್ಧದ ಆತಂಕ ಮತ್ತು ಇ-ಕೆವೈಸಿ ವದಂತಿಗಳಿಂದ ಉಂಟಾದ ಕೃತಕ ಅಭಾವದಿಂದ ಬೇಡಿಕೆ ಗಣನೀಯವಾಗಿ ಹೆಚ್ಚಿತ್ತು. ಆದರೆ ತೈಲ ಕಂಪನಿಗಳ ಸ್ಪಷ್ಟನೆ ಮತ್ತು ಸ್ಥಿರ ಪೂರೈಕೆಯಿಂದಾಗಿ, ದಿನಕ್ಕೆ 69,000 ಸಿಲಿಂಡರ್‌ಗಳಷ್ಟು ಬೇಡಿಕೆ ಕಡಿಮೆಯಾಗಿದೆ. ರಾಜ್ಯದಲ್ಲಿ ಈಗ ಎಲ್‌ಪಿಜಿ ಪೂರೈಕೆ ಸಾಮಾನ್ಯ ಸ್ಥಿತಿಯಲ್ಲಿದೆ.

ಗ್ಯಾಸ್ ಸಿಲಿಂಡರ್ ಬುಕಿಂಗ್‌ಗೆ ಮುಗಿಬಿದ್ದಿದ್ದ ಜನ ಈಗ ಸೈಲೆಂಟ್: ಕರ್ನಾಟಕದಲ್ಲಿ ಎಲ್‌ಪಿಜಿ ಬೇಡಿಕೆ ದಿಢೀರ್ ಕುಸಿತ! ಕಾರಣವೇನು?
ಸಾಂದರ್ಭಿಕ ಚಿತ್ರ Image Credit source: AI image
ಅಕ್ಷಯ್​ ಪಲ್ಲಮಜಲು​​
|

Updated on: Apr 24, 2026 | 2:31 PM

Share

ಬೆಂಗಳೂರು, ಏ.24: ಅಮೆರಿಕ, ಇಸ್ರೇಲ್, ಇರಾನ್​ ಯುದ್ಧದಿಂದ ದೇಶದಲ್ಲಿ ಗ್ಯಾಸ್​​​ ಸಿಲಿಂಡರ್​​​​ ಕೊರೆತೆ ಉಂಟಾಗಿತ್ತು. ಇದರಿಂದ ರಾಜ್ಯದಲ್ಲೂ ದೊಡ್ಡ ಆತಂಕ ಸೃಷ್ಟಿಯಾಗಿತ್ತು. ಜನ ಸಾಲು ನಿಂತು ಗ್ಯಾಸ್​​​​ ಪಡೆದುಕೊಳ್ಳಲು ಪರಾಡುತ್ತಿದ್ದರು. ಇದೀಗ ಈ ಸಮಸ್ಯೆ ಇಲ್ಲ ಎಂದು ಹೇಳಲಾಗಿದೆ. ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಾಗಬಹುದು ಎಂಬ ಭೀತಿಯಿಂದ ಗ್ರಾಹಕರು ಮುಗಿಬಿದ್ದು ಬುಕಿಂಗ್ ಮಾಡುತ್ತಿರುವ ಘಟನೆಗಳು ಈಗ ಗಣನೀಯವಾಗಿ ಕಡಿಮೆಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ದೈನಂದಿನ ಬೇಡಿಕೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ.

ಅಂಕಿಅಂಶಗಳ ಪ್ರಕಾರ, ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೇಡಿಕೆಯು ಗರಿಷ್ಠ ಮಟ್ಟದಲ್ಲಿದ್ದಾಗ ದಿನಕ್ಕೆ 3.75 ಲಕ್ಷ ಇತ್ತು. ಆದರೆ, ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂಬ ಭರವಸೆ ಮತ್ತು ಮಾರುಕಟ್ಟೆ ಸ್ಥಿರಗೊಂಡ ನಂತರ ಈ ಬೇಡಿಕೆಯು ಈಗ ದಿನಕ್ಕೆ 3.06 ಲಕ್ಷಕ್ಕೆ ಕುಸಿದಿದೆ. ಅಂದರೆ ದಿನವೊಂದಕ್ಕೆ ಸುಮಾರು 69,000 ಸಿಲಿಂಡರ್‌ಗಳಷ್ಟು ಬೇಡಿಕೆ ಕಡಿಮೆಯಾಗಿದೆ.

ಇತ್ತೀಚೆಗೆ ಕೆವೈಸಿ (e-KYC) ಅಪ್‌ಡೇಟ್ ಮಾಡದಿದ್ದರೆ ಗ್ಯಾಸ್ ಕನೆಕ್ಷನ್ ಕಟ್ ಆಗುತ್ತದೆ ಅಥವಾ ಸಬ್ಸಿಡಿ ನಿಲ್ಲುತ್ತದೆ ಎಂಬ ವದಂತಿಗಳು ಹರಡಿದ್ದವು. ಜೊತೆಗೆ ವಿತರಣೆಯಲ್ಲಿ ವಿಳಂಬವಾಗಬಹುದು ಎಂಬ ಆತಂಕದಿಂದ ಜನರು ತಮಗೆ ಅಗತ್ಯವಿಲ್ಲದಿದ್ದರೂ ಮುನ್ನೆಚ್ಚರಿಕೆ ಕ್ರಮವಾಗಿ ಸಿಲಿಂಡರ್‌ಗಳನ್ನು ಬುಕ್ ಮಾಡಲು ಆರಂಭಿಸಿದ್ದರು. ಇದು ಮಾರುಕಟ್ಟೆಯಲ್ಲಿ ಕೃತಕ ಅಭಾವ ಸೃಷ್ಟಿಯಾಗಲು ಕಾರಣವಾಗಿತ್ತು.

ಇದನ್ನೂ ಓದಿ: ಬಡವರಿಗೆ ಸೇರಬೇಕಿದ್ದ ಅನ್ನಭಾಗ್ಯ ಅಕ್ಕಿ ದಂಧೆಕೋರರ ಪಾಲು: 2,000ಕ್ಕೂ ಹೆಚ್ಚು ಮೂಟೆಗಳು ವಶಕ್ಕೆ

“ರಾಜ್ಯದಲ್ಲಿ ಎಲ್‌ಪಿಜಿ ಸಂಗ್ರಹ ಸಾಕಷ್ಟಿದೆ ಮತ್ತು ಪೂರೈಕೆಯಲ್ಲಿ ಯಾವುದೇ ಅಡಚಣೆ ಇಲ್ಲ. ಗ್ರಾಹಕರು ಅನಗತ್ಯವಾಗಿ ಆತಂಕಕ್ಕೊಳಗಾಗಿ ಹೆಚ್ಚಿನ ಸಿಲಿಂಡರ್‌ಗಳನ್ನು ಬುಕ್ ಮಾಡುವ ಅಗತ್ಯವಿಲ್ಲ” ಎಂದು ತೈಲ ಮಾರುಕಟ್ಟೆ ಕಂಪನಿಗಳು (OMCs) ಗ್ರಾಹಕರಿಗೆ ಮನವಿ ಮಾಡಿದ್ದವು. ಈ ಸ್ಪಷ್ಟನೆಯ ನಂತರ ಈಗ ಬುಕಿಂಗ್ ಪ್ರಕ್ರಿಯೆ ಸಹಜ ಸ್ಥಿತಿಗೆ ಮರಳುತ್ತಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ