Sign In

By signing in or creating an account, you agree with Associated Broadcasting Company's Terms & Conditions and Privacy Policy.

Lunar Eclipse 2023: ಚಂದ್ರಗ್ರಹಣದಿಂದ ಈ ರಾಶಿಯವರಿಗೆ ಅಶುಭ ಫಲ

ಈ ಚಂದ್ರ ಗ್ರಹಣವು ಮೇಷ ರಾಶಿಯಲ್ಲಿ ಅಶ್ವಿನಿ ನಕ್ಷತ್ರದ ನಾಲ್ಕನೆಯ ಚರಣದಲ್ಲಿ ನಡೆಯುತ್ತದೆ. ಈ ಸಮಯದಲ್ಲಿ ಕಟಕ ಮತ್ತು ಸಿಂಹ ಲಗ್ನಗಳು ನಡೆಯುತ್ತದೆ.‌ ‌ಚಂದ್ರ ಗ್ರಹಣದ ಸಮಯದಲ್ಲಿ, ಚಂದ್ರನು ಮೇಷ ರಾಶಿಯಲ್ಲಿರುತ್ತಾನೆ. ಈ ಕಾರಣದಿಂದಾಗಿ, ಮೇಷ ರಾಶಿಯ ಜನರ ಮೇಲೆ ಕೆಟ್ಟ ಪರಿಣಾಮವನ್ನು ಬೀರಬಹುದು.

Lunar Eclipse 2023: ಚಂದ್ರಗ್ರಹಣದಿಂದ ಈ ರಾಶಿಯವರಿಗೆ ಅಶುಭ ಫಲ
ಚಂದ್ರಗ್ರಹಣ
Follow us
TV9 Web
| Updated By: ಆಯೇಷಾ ಬಾನು

Updated on: Oct 28, 2023 | 1:11 PM

ಸೂರ್ಯಗ್ರಹಣ (Solar Eeclipse 2023) ಸಂಭವಿಸಿದ 2 ವಾರಗಳ ಬೆನ್ನಲ್ಲೇ ಚಂದ್ರಗ್ರಹಣ (Lunar Eclipse 2023)  ಸಂಭವಿಸುತ್ತಿದೆ. ಈ ವರ್ಷದ 2ನೇ ಮತ್ತು ಕೊನೆಯ ಚಂಗ್ರಹಣಕ್ಕೆ ಕ್ಷಣಗಣನೆ ಆರಂಭವಾಗಿದೆ. ರಾತ್ರಿ 11.30ಕ್ಕೆ ಆರಂಭವಾಗುವ ಚಂದ್ರಗ್ರಹಣ ನಾಳೆ ಬೆಳಗಿನ ಜಾವ 2.24 ಅಥವಾ 3.36 ನಿಮಿಷಕ್ಕೆ ಕೊನೆಗೊಳ್ಳುತ್ತದೆ. ರಾತ್ರಿ 11.30 ಕ್ಕೆ ಗ್ರಹಣ ಸ್ಪರ್ಶಕಾಲ ಆರಂಭವಾಗುತ್ತದೆ. ಮಧ್ಯರಾತ್ರಿ 1.42ಕ್ಕೆ ಗ್ರಹಣ ಮಧ್ಯಕಾಲ ಹಾಗೂ ಬೆಳಗಿನ ಜಾವ 3.30ಕ್ಕೆ ಗ್ರಹಣ ಮೋಕ್ಷಕಾಲವಿರಲಿದೆ.

ಗ್ರಹಣಕಾಲದಲ್ಲಿ ಪಾಲಿಸಬೇಕಾದ ಆಚರಣೆಗಳು

  • ಗ್ರಹಣ ಸ್ಪರ್ಶ ಸ್ನಾನ (ಹಿಡಿಯುವ ಸಮಯ) ಮತ್ತು ಮೋಕ್ಷ ಸ್ನಾನ (ಮುಗಿದ ನಂತರ) ಸ್ನಾನ ಮಾಡಲೇಬೇಕು.
  • ಗ್ರಹಣದ ಆರಂಭದಲ್ಲಿ ಮಾಡುವ ಸ್ನಾನದಿಂದ ಜಪ-ಪಾರಾಯಣ-ದಾನಾದಿಗಳಿಗೆ ಮಾತ್ರ ಅಧಿಕಾರ. ಊಟ, ಉಪಾಹಾರಗಳಿಗಿಲ್ಲ. ‌
  • ಗ್ರಹಣದ ಸೂತಕವು ಗ್ರಹಣ ಆರಂಭದ ಹನ್ನೆರಡು ಗಂಟೆಗಳ ಮೊದಲು ಆರಂಭವಾಗುತ್ತದೆ. ಗ್ರಹಣ ಮೋಕ್ಷ ಕಾಲದ ನಂತರ ಮಾಡುವ ಸ್ನಾನವು ಸೂತಕದ ಮುಕ್ತಾಯವಾಗಿರುತ್ತದೆ.
  • ಗ್ರಹಣ ಕಾಲದಲ್ಲಿ ಯಾವುದೇ ದ್ರವ ಅಹಾರವಾಗಲಿ ಅಥವಾ ಘನ ಆಹಾರವಾಗಲಿ ಸ್ವೀಕರಿಸಬಾರದು. ‌
  • ‌ಗ್ರಹಣ ಮೋಕ್ಷ ಕಾಲದ ನಂತರವೇ ಸ್ನಾನ, ಪೂಜೆ ಸಲ್ಲಿಸಿ, ಅಡುಗೆ ಮಾಡಿ, ಊಟ ಮಾಡಬೇಕು. ಗ್ರಹಣಕ್ಕಿಂತ ಮುಂಚೆ ಮಾಡಿಟ್ಟು ಅಥವಾ ಗ್ರಹಣಕಾಲದಲ್ಲಿ ಮಾಡಿಟ್ಟು ತಿನ್ನಬಾರದು. ‌
  • ಗ್ರಹಣ ಮೋಕ್ಷ ಕಾಲದ ನಂತರ ಅಗತ್ಯವಾಗಿ ಸ್ನಾನ ಮಾಡಲೇಬೇಕು. ಪವಿತ್ರ ಗಂಗಾಜಲ ಅಥವಾ ಶುದ್ದ ಜಲವನ್ನು ಮನೆಯ ಎಲ್ಲಾ ಭಾಗಗಳಲ್ಲಿಯೂ ಪ್ರೋಕ್ಷಿಸಬಹುದು.
  • ಗ್ರಹಣ ಕಾಲದಲ್ಲಿ ನದಿಗಳಲ್ಲಿ, ಮಹಾನದಿಗಳಲ್ಲಿ ಮಾಡುವ ಸ್ನಾನ ಅತೀ ಶ್ರೇಷ್ಠ. ಸಮುದ್ರ ಸ್ನಾನ ಸರ್ವೋತ್ತಮ.
  • ಯಾರ ಮನೆಯಲ್ಲಿ ಬಾವಿ ಮುಂತಾದವುಗಳಿಂದ ಗ್ರಹಣದ ನಂತರ ಶುದ್ಧ ನೀರನ್ನು ತೆಗೆದುಕೊಳ್ಳಲು ಸಾಧ್ಯವಿದೆಯೋ ಅಂತಹವರು ಹಾಗೆಯೇ ಮಾಡಬೇಕು. ಯಾರ ಮನೆಯಲ್ಲಿ ನೀರನ್ನು ಹಿಡಿದಿಟ್ಟುಕೊಳ್ಳುವ ಅನಿವಾರ್ಯತೆ ಇದೆ ಅಂತಹವರು ನೀರಿನ ಪಾತ್ರೆಗಳ (ಹಾಲು, ಮೊಸರು, ತುಪ್ಪ ಮತ್ತು ಎಣ್ಣೆಯಲ್ಲಿ ಕರಿದ ಪದಾರ್ಥಗಳು ಇತರೆ) ಮೇಲೆ ದರ್ಬೆ ಅಥವಾ ತುಳಸಿ ಅಥವಾ ಗರಿಕೆಯನ್ನು ಹಾಕಿರಬೇಕು.
  • ಗ್ರಹಣ ಆರಂಭದಿಂದ ಅಂತ್ಯದ ಕಾಲದವರೆಗೂ ದೇವರಸ್ಮರಣೆ, ನಮಸ್ಕಾರ, ಜಪ, ಪಾರಾಯಣಗಳನ್ನು ಮಾಡಬೇಕು.

ಈ ಚಂದ್ರ ಗ್ರಹಣವು ಮೇಷ ರಾಶಿಯಲ್ಲಿ ಅಶ್ವಿನಿ ನಕ್ಷತ್ರದ ನಾಲ್ಕನೆಯ ಚರಣದಲ್ಲಿ ನಡೆಯುತ್ತದೆ. ಈ ಸಮಯದಲ್ಲಿ ಕಟಕ ಮತ್ತು ಸಿಂಹ ಲಗ್ನಗಳು ನಡೆಯುತ್ತದೆ.‌ ‌ಚಂದ್ರ ಗ್ರಹಣದ ಸಮಯದಲ್ಲಿ, ಚಂದ್ರನು ಮೇಷ ರಾಶಿಯಲ್ಲಿರುತ್ತಾನೆ. ಈ ಕಾರಣದಿಂದಾಗಿ, ಮೇಷ ರಾಶಿಯ ಜನರ ಮೇಲೆ ಕೆಟ್ಟ ಪರಿಣಾಮವನ್ನು ಬೀರಬಹುದು. ಮೇಷ ರಾಶಿಯವರಿಗೆ ಚಂದ್ರ ಗ್ರಹಣದ ಸಮಯವು ಅನುಕೂಲಕರವಾಗಿರುವುದಿಲ್ಲ. ಚಂದ್ರ ಗ್ರಹಣವು ಕೆಲವು ರಾಶಿಚಕ್ರ ಚಿಹ್ನೆಗಳ ಮೇಲೆ ಶುಭ, ಮಿಶ್ರ ಮತ್ತು ಅಶುಭ ಪರಿಣಾಮ ಬೀರಲಿದೆ. ‌

ಇದನ್ನೂ ಓದಿ: Lunar Eclipse 2023: ಚಂದ್ರ ಗ್ರಹಣದ ವೇಳೆ ಈ ತಪ್ಪುಗಳನ್ನು ಮಾಡಬೇಡಿ, ಅಧ್ಯಾತ್ಮ ಹೇಳೋದೇನು?

ದ್ವಾದಶ ರಾಶಿಗಳಿಗೆ ರಾಹುಗ್ರಸ್ತ ಚಂದ್ರ ಗ್ರಹಣ ಫಲಗಳು

‌ ಶುಭ ಫಲ: ಮಿಥುನ, ಕಟಕ, ವೃಶ್ಚಿಕ, ಕುಂಭ ‌ ಮಿಶ್ರ ಫಲ: ಸಿಂಹ, ತುಲಾ, ಧನಸ್ಸು, ಮೀನ ‌ ‌ ‌ ಅಶುಭ ಫಲ: ಮೇಷ, ವೃಷಭ, ಕನ್ಯಾ, ಮಕರ ‌ ‌ ‌‌ ‌ ‌ ‌ ‌ ‌

ಗ್ರಹಣ ಪ್ರಾರಂಭವಾಗುತ್ತಿದ್ದಂತೆ ಮತ್ತು ಗ್ರಹಣ ಬಿಟ್ಟ ನಂತರ ಉಟ್ಟ ಬಟ್ಟೆಯಲ್ಲಿಯೇ ಸ್ನಾನ ಮಾಡಬೇಕು.‌ ಗ್ರಹಣ ಸ್ಪರ್ಶ ಸಮಯದಲ್ಲಿ ಮಾಡುವ ಸ್ನಾನವು ಲಕ್ಷ ಸ್ನಾನಗಳ ಫಲವನ್ನು ಮೋಕ್ಷ ನಂತರ ಮಾಡುವ ಸ್ನಾನವು ಅನಂತ ಸ್ನಾನಗಳ ಫಲವನ್ನು ಕೊಡುತ್ತದೆ. ಗ್ರಹಣ ಸಮಯದಲ್ಲಿ ಮಾಡುವ ಜಪ-ತಪಾದಿ, ಹೋಮವು ಕೋಟಿ ಹೋಮಗಳು ಫಲವನ್ನು ಕೊಡುತ್ತದೆ. ‌‌ ‌ ‌ ‌ ‌ ‌

ಪರಿಹಾರ

ಕಪ್ಪು ಅಥವಾ ಧೂಮ್ರ (ಬೂದು) ವರ್ಣ ಮತ್ತು ಉದ್ದಿನಕಾಳು ಹಾಗೂ ಶ್ವೇತ ವಸ್ತ್ರ ಮತ್ತು ಅಕ್ಕಿ ಇವುಗಳನ್ನು ದಕ್ಷಿಣೆ ಸಮೇತವಾಗಿ ದೇವಾಲಯದಲ್ಲಿ / ಬ್ರಾಹ್ಮಣರಿಗೆ / ಸತ್ಪಾತ್ರರಿಗೆ ದಾನ ಮಾಡಿ. ಗ್ರಹಣ ಸಮಯದಲ್ಲಿ ದುರ್ಗಾದೇವಿ, ಈಶ್ವರ ಸುಬ್ರಹ್ಮಣ್ಯ, ನಾಗ ದೇವತೆ, ಕಾಳಿ ಮಂತ್ರ ಜಪ ಅಥವಾ ಸ್ತೋತ್ರ ಪಾರಾಯಣ, ದುರ್ಗಾ ಕವಚ, ಸಪ್ತಶತೀ ಮತ್ತು ಸಹಸ್ರನಾಮ ಸ್ತೋತ್ರ ಪಠಿಸಿರಿ.

ಮಾಹಿತಿ: ವೇ!!ಶ್ರೀ!!ಕುಮಾರಸ್ವಾಮಿ ಶ್ರೀ ಜ್ಯೋತಿಷ್ಯ ಸಲಹಾ ಕೇಂದ್ರ

ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್