AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಗೌರವಗಳೊಂದಿಗೆ ಮಂಡ್ಯ ಮಾಜಿ ಸಂಸದ ಜಿ ಮಾದೇಗೌಡ ಅಂತ್ಯಸಂಸ್ಕಾರ

ಮದ್ದೂರು ತಾಲ್ಲೂಕು ಹನುಮಂತನಗರದ ಆತ್ಮಲಿಂಗೇಶ್ವರ ದೇವಸ್ಥಾನ ಬಳಿ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು.

ಸರ್ಕಾರಿ ಗೌರವಗಳೊಂದಿಗೆ ಮಂಡ್ಯ ಮಾಜಿ ಸಂಸದ ಜಿ ಮಾದೇಗೌಡ ಅಂತ್ಯಸಂಸ್ಕಾರ
ಮಾದೇಗೌಡರ ಪಾರ್ಥಿವ ಶರೀರದ ಅಂತಿಮ ದರ್ಶನವ ಪಡೆಯಲು ವ್ಯವಸ್ಥೆ ಮಾಡಲಾಗಿತ್ತು.
TV9 Web
| Edited By: |

Updated on:Jul 18, 2021 | 5:56 PM

Share

ಮಂಡ್ಯ: ಕಾವೇರಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮಾಜಿ ಸಂಸದ ಜಿ.ಮಾದೇಗೌಡ (92) ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಭಾನುವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವ ಸಲ್ಲಿಸಿದರು. ಮದ್ದೂರು ತಾಲ್ಲೂಕು ಹನುಮಂತನಗರದ ಆತ್ಮಲಿಂಗೇಶ್ವರ ದೇವಸ್ಥಾನ ಬಳಿ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು.

ಜಿ.ಮಾದೇಗೌಡರ ಪತ್ನಿ ಪದ್ಮಾರವರಿಗೆ ತ್ರಿವರ್ಣ ಧ್ವಜವನ್ನು ಅರ್ಪಿಸಲಾಯಿತು. ಮಾದೇಗೌಡರ ಚಿತೆಗೆ ಪುತ್ರ ಡಾ.ಪ್ರಕಾಶ್ ಅಗ್ನಿಸ್ಪರ್ಶ ಮಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ, ಜಿಲ್ಲಾಧಿಕಾರಿ ಅಶ್ವತಿ, ಪೊಲೀಸ್ ವರಿಷ್ಠಾಧಿಕಾರಿ ಡಾ.ಅಶ್ವಿನಿ, ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಸಿದ್ದರಾಮಯ್ಯ ಸಂತಾಪ ಮಾಜಿ ಸಂಸದ ಜಿ.ಮಾದೇಗೌಡ ನಿಧನಕ್ಕೆ ಕೆ.ಎಂ.ದೊಡ್ಡಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಮಾದೇಗೌಡರ ಕಾವೇರಿ ಹೋರಾಟವನ್ನು ಎಲ್ಲರೂ ನೆನೆಯಬೇಕು. ಅವರ ಹೋರಾಟದ ಮಾದರಿ ಎಲ್ಲರಿಗೂ ಸ್ಫೂರ್ತಿಯಾಗಬೇಕು. ಮಂಡ್ಯದ ಅಭಿವೃದ್ಧಿ ವಿಚಾರದಲ್ಲಿ ಮಾದೇಗೌಡರ ಶ್ರಮ ಇದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುವೆ ಎಂದು ಸಿದ್ದರಾಮಯ್ಯ ಹೇಳಿದರು.

ಮಾದೇಗೌಡರ ಅಧ್ಯಾತ್ಮ ಒಲವು ನೆನೆದ ನಿರ್ಮಲಾನಂದ ನಾಥ ಸ್ವಾಮೀಜಿ ಜಿ.ಮಾದೇಗೌಡರಿಗೆ ಆಧ್ಯಾತ್ಮಿಕ ಒಲವು ಇತ್ತು. ಮಾದೇಗೌಡರು ನಮ್ಮ ಶ್ರೀಮಠಕ್ಕೂ ಬರುತ್ತಿದ್ದರು. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುವೆ ಎಂದು ಹೇಳಿದರು.

ಅಂತಿಮ ದರ್ಶನ ಪಡೆದ ಜೋಗಿ, ಮುನಿಯಪ್ಪ ಜಿ.ಮಾದೇಗೌಡರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕು ಗುರುದೇವರಹಳ್ಳಿಯ ಜನರು ಜಿ.ಮಾದೇಗೌಡರ ಪಾರ್ಥಿವ ಶರೀರಕ್ಕೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಅಂತಿಮ ಗೌರವ ಸಮರ್ಪಿಸಿದರು. ಹಾಲು ಉತ್ಪಾದಕರ ಸಂಘದ ಕಚೇರಿ ಆವರಣದಲ್ಲಿ ಸರತಿ ಸಾಲಿನಲ್ಲಿ ಬಂದ ಗ್ರಾಮಸ್ಥರು ಅಂತಿಮ ದರ್ಶನ ಪಡೆದರು.

ನಟ, ನಿರ್ದೇಶಕ ಪ್ರೇಮ್​ ಮತ್ತು ಕೇಂದ್ರದ ಮಾಜಿ ಸಚಿವ ಮುನಿಯಪ್ಪ ಸಹ ಮಾದೇಗೌಡರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ಸಮರ್ಪಿಸಿದರು.

(Madegowda Cremation with government honors in Maddur)

ಇದನ್ನೂ ಓದಿ: G Madegowda Death: ಮಾಜಿ ಸಂಸದ, ಹಿರಿಯ ರೈತ ಹೋರಾಟಗಾರ ಜಿ. ಮಾದೇಗೌಡ ವಿಧಿವಶ

ಇದನ್ನೂ ಓದಿ: G Madegowda ಹುಟ್ಟೂರಲ್ಲಿ ಮಾಜಿ ಸಂಸದ ಜಿ.ಮಾದೇಗೌಡ ಅಂತಿಮ ದರ್ಶನ, ಕಂಬನಿ ಮಿಡಿದ ಗಣ್ಯರು

Published On - 5:43 pm, Sun, 18 July 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!