AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಆಯೋಗದ ನಿರ್ಲಕ್ಷ್ಯ; ಮಧ್ಯಪ್ರದೇಶದಲ್ಲಿ ಕರ್ನಾಟಕದ 4 ಸಾವಿರ ಹೋಮ್​ಗಾರ್ಡ್​ಗಳ ಪರದಾಟ

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಕರ್ತವ್ಯಕ್ಕಾಗಿ ಕರ್ನಾಟಕದಿಂದ ನಾಲ್ಕು ಸಾವಿರ ಹೋಮ್​ಗಾರ್ಡ್​ಗಳನ್ನು ಕಳುಹಿಸಿಕೊಡಲಾಗಿತ್ತು. ಚುನಾವಣೆ 17 ರಂದು ಮುಕ್ತಾಯಗೊಂಡಿದ್ದು, 19 ರಂದು ರಾಜ್ಯಕ್ಕೆ ವಾಪಸ್ ಆಗಬೇಕಿತ್ತು. ಆದರೆ ಚುನಾವಣಾ ಆಯೋಗದ ನಿರ್ಲಕ್ಷ್ಯಕ್ಕೆ ಹೋಮ್​ಗಾರ್ಡ್​ಗಳು ಮಧ್ಯಪ್ರದೇಶದಲ್ಲಿ ಪರದಾಡುವಂತಾಗಿದೆ.

ಚುನಾವಣಾ ಆಯೋಗದ ನಿರ್ಲಕ್ಷ್ಯ; ಮಧ್ಯಪ್ರದೇಶದಲ್ಲಿ ಕರ್ನಾಟಕದ 4 ಸಾವಿರ ಹೋಮ್​ಗಾರ್ಡ್​ಗಳ ಪರದಾಟ
ಮಧ್ಯಪ್ರದೇಶದಲ್ಲಿ ಚುನಾವಣಾ ಕರ್ತವ್ಯಕ್ಕೆ ಹೋಗಿದ್ದ ಕರ್ನಾಟಕದ 4 ಸಾವಿರ ಹೋಮ್​ಗಾರ್ಡ್​ಗಳ ಪರದಾಟ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Nov 21, 2023 | 6:50 PM

Share

ಬೆಂಗಳೂರು, ನ.21: ಮಧ್ಯಪ್ರದೇಶ ವಿಧಾನಸಭೆ ಚುನಾವಣೆ (Madhya Pradesh Elections 2023) ಕರ್ತವ್ಯಕ್ಕಾಗಿ ಕರ್ನಾಟಕದಿಂದ ನಾಲ್ಕು ಸಾವಿರ ಹೋಮ್​ಗಾರ್ಡ್​ಗಳನ್ನು (Home Guards) ಕಳುಹಿಸಿಕೊಡಲಾಗಿತ್ತು. ಚುನಾವಣೆ 17 ರಂದು ಮುಕ್ತಾಯಗೊಂಡಿದ್ದು, 19 ರಂದು ಹೋಮ್​ಗಾರ್ಡ್​ಗಳು ರಾಜ್ಯಕ್ಕೆ ವಾಪಸ್ ಆಗಬೇಕಿತ್ತು. ಆದರೆ ಚುನಾವಣಾ ಆಯೋಗದ ನಿರ್ಲಕ್ಷ್ಯಕ್ಕೆ ಮಂಡ್ಯ, ಹಾವೇರಿ ಸೇರಿದಂತೆ ವಿವಿಧ ಜಿಲ್ಲೆಗಳ ಹೋಮ್​ಗಾರ್ಡ್​ಗಳು ಮಧ್ಯಪ್ರದೇಶದಲ್ಲಿ ಪರದಾಡುವಂತಾಗಿದೆ.

ಮಧ್ಯಪ್ರದೇಶ ಚುನಾವಣಾ ಕರ್ತವ್ಯಕ್ಕೆ ರಾಜ್ಯದಿಂದ ಕಳುಹಿಸಲಾಗಿದ್ದ 4 ಸಾವಿರ ಹೋಮ್​ಗಾರ್ಡ್ಸ್​ಗಳಲ್ಲಿ 200 ಕ್ಕೂ ಹೆಚ್ಚು ಮಂದಿ ಮಂಡ್ಯ ಜಿಲ್ಲೆಯವರಾಗಿದ್ದಾರೆ. ಕರ್ನಾಟಕಕ್ಕೆ ಮರಳಲು ರೈಲು ಟಿಕೆಟ್ ಬುಕ್ ಮಾಡದೆ ನಿರ್ಲಕ್ಷ್ಯವಹಿಸಲಾಗಿದೆ ಎಂದು ಸಿಬ್ಬಂದಿ ಆರೋಪಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲ್ಲುತ್ತದೆ: ಪಿಯೂಷ್ ಗೋಯಲ್

ಅದೇ ರೀತಿ, ಬಳ್ಳಾರಿ ಜಿಲ್ಲೆಯ 400 ಕ್ಕೂ ಅಧಿಕ ಹೋಮ್​ಗಾರ್ಡ್​ಗಳು ಮಧ್ಯಪ್ರದೇಶದಲ್ಲಿ ಪರದಾಡುತ್ತಿದ್ದಾರೆ. ಚುನಾವಣೆ ಮುಗಿದರು ರಾಜ್ಯಕ್ಕೆ ಕಳುಹಿಸಿಕೊಟ್ಟಿಲ್ಲ. ಮೂರು ದಿನಗಳಿಂದ ಇಲ್ಲಿ ಪರದಾಡುತ್ತಿದ್ದೇವೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ, ತಮ್ಮನ್ನು ವಾಪಸ್ ಕಳುಹಿಸಿಕೊಡುವಂತೆ ಮನವಿ ಮಾಡಿದ್ದಾರೆ.

ಅಲ್ಲದೆ, ರಾಮನರಗ ಜಿಲ್ಲೆಯ 150ಕ್ಕೂ ಹೆಚ್ಚು ಹೋಮ್​ಗಾರ್ಡ್ ಮಧ್ಯಪ್ರದೇಶದಲ್ಲಿ ಸಿಲುಕಿಕೊಂಡಿದ್ದಾರೆ. ಇವರೆಲ್ಲರೂ ರಾಯಸೇನಾ ಜಿಲ್ಲೆಯಲ್ಲಿ ಇದ್ದು, ವಿಧಾನಸಭಾ ಚುನಾವಣೆ ಮುಗಿದು 3 ದಿನ ಕಳೆದರೂ ವಾಪಸ್ ಕಳಿಸಿಲ್ಲ. ಕೂಡಲೇ ರೈಲಿನ ವ್ಯವಸ್ಥೆ ಮಾಡಿ ರಾಜ್ಯಕ್ಕೆ ಕಳುಹಿಸುವಂತೆ ಪೊಲೀಸ್ ಇಲಾಖೆ ಹಾಗೂ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕರ್ನಾಟಕದ ಮೈಸೂರು, ಬೆಳಗಾವಿ, ರಾಯಚೂರು, ಬೆಳ್ತಂಗಡಿ, ಕಲಗುರಗಿ ಜಿಲ್ಲೆಗಳಿಂದಲೂ ಹೋಮ್​ಗಾರ್ಡ್​​ಗಳನ್ನು ಚುನಾವಣಾ ಕರ್ತವ್ಯಕ್ಕಾಗಿ ಕಳುಹಿಸಲಾಗಿತ್ತು. ಸದ್ಯ ನಾಲ್ಕು ಸಾವಿರ ಹೋಮ್​ಗಾರ್ಡ್​​ಗಳು ಮಧ್ಯಪ್ರದೇಶದಲ್ಲೇ ಪರದಾಡುವಂತಾಗಿದ್ದು, ಕೂಡಲೇ ಕರ್ನಾಟಕಕ್ಕೆ ಮರಳಲು ರೈಲಿನ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ