ಚುನಾವಣಾ ಆಯೋಗದ ನಿರ್ಲಕ್ಷ್ಯ; ಮಧ್ಯಪ್ರದೇಶದಲ್ಲಿ ಕರ್ನಾಟಕದ 4 ಸಾವಿರ ಹೋಮ್​ಗಾರ್ಡ್​ಗಳ ಪರದಾಟ

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಕರ್ತವ್ಯಕ್ಕಾಗಿ ಕರ್ನಾಟಕದಿಂದ ನಾಲ್ಕು ಸಾವಿರ ಹೋಮ್​ಗಾರ್ಡ್​ಗಳನ್ನು ಕಳುಹಿಸಿಕೊಡಲಾಗಿತ್ತು. ಚುನಾವಣೆ 17 ರಂದು ಮುಕ್ತಾಯಗೊಂಡಿದ್ದು, 19 ರಂದು ರಾಜ್ಯಕ್ಕೆ ವಾಪಸ್ ಆಗಬೇಕಿತ್ತು. ಆದರೆ ಚುನಾವಣಾ ಆಯೋಗದ ನಿರ್ಲಕ್ಷ್ಯಕ್ಕೆ ಹೋಮ್​ಗಾರ್ಡ್​ಗಳು ಮಧ್ಯಪ್ರದೇಶದಲ್ಲಿ ಪರದಾಡುವಂತಾಗಿದೆ.

ಚುನಾವಣಾ ಆಯೋಗದ ನಿರ್ಲಕ್ಷ್ಯ; ಮಧ್ಯಪ್ರದೇಶದಲ್ಲಿ ಕರ್ನಾಟಕದ 4 ಸಾವಿರ ಹೋಮ್​ಗಾರ್ಡ್​ಗಳ ಪರದಾಟ
ಮಧ್ಯಪ್ರದೇಶದಲ್ಲಿ ಚುನಾವಣಾ ಕರ್ತವ್ಯಕ್ಕೆ ಹೋಗಿದ್ದ ಕರ್ನಾಟಕದ 4 ಸಾವಿರ ಹೋಮ್​ಗಾರ್ಡ್​ಗಳ ಪರದಾಟ (ಸಾಂದರ್ಭಿಕ ಚಿತ್ರ)
Follow us
| Edited By: Rakesh Nayak Manchi

Updated on: Nov 21, 2023 | 6:50 PM

ಬೆಂಗಳೂರು, ನ.21: ಮಧ್ಯಪ್ರದೇಶ ವಿಧಾನಸಭೆ ಚುನಾವಣೆ (Madhya Pradesh Elections 2023) ಕರ್ತವ್ಯಕ್ಕಾಗಿ ಕರ್ನಾಟಕದಿಂದ ನಾಲ್ಕು ಸಾವಿರ ಹೋಮ್​ಗಾರ್ಡ್​ಗಳನ್ನು (Home Guards) ಕಳುಹಿಸಿಕೊಡಲಾಗಿತ್ತು. ಚುನಾವಣೆ 17 ರಂದು ಮುಕ್ತಾಯಗೊಂಡಿದ್ದು, 19 ರಂದು ಹೋಮ್​ಗಾರ್ಡ್​ಗಳು ರಾಜ್ಯಕ್ಕೆ ವಾಪಸ್ ಆಗಬೇಕಿತ್ತು. ಆದರೆ ಚುನಾವಣಾ ಆಯೋಗದ ನಿರ್ಲಕ್ಷ್ಯಕ್ಕೆ ಮಂಡ್ಯ, ಹಾವೇರಿ ಸೇರಿದಂತೆ ವಿವಿಧ ಜಿಲ್ಲೆಗಳ ಹೋಮ್​ಗಾರ್ಡ್​ಗಳು ಮಧ್ಯಪ್ರದೇಶದಲ್ಲಿ ಪರದಾಡುವಂತಾಗಿದೆ.

ಮಧ್ಯಪ್ರದೇಶ ಚುನಾವಣಾ ಕರ್ತವ್ಯಕ್ಕೆ ರಾಜ್ಯದಿಂದ ಕಳುಹಿಸಲಾಗಿದ್ದ 4 ಸಾವಿರ ಹೋಮ್​ಗಾರ್ಡ್ಸ್​ಗಳಲ್ಲಿ 200 ಕ್ಕೂ ಹೆಚ್ಚು ಮಂದಿ ಮಂಡ್ಯ ಜಿಲ್ಲೆಯವರಾಗಿದ್ದಾರೆ. ಕರ್ನಾಟಕಕ್ಕೆ ಮರಳಲು ರೈಲು ಟಿಕೆಟ್ ಬುಕ್ ಮಾಡದೆ ನಿರ್ಲಕ್ಷ್ಯವಹಿಸಲಾಗಿದೆ ಎಂದು ಸಿಬ್ಬಂದಿ ಆರೋಪಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲ್ಲುತ್ತದೆ: ಪಿಯೂಷ್ ಗೋಯಲ್

ಅದೇ ರೀತಿ, ಬಳ್ಳಾರಿ ಜಿಲ್ಲೆಯ 400 ಕ್ಕೂ ಅಧಿಕ ಹೋಮ್​ಗಾರ್ಡ್​ಗಳು ಮಧ್ಯಪ್ರದೇಶದಲ್ಲಿ ಪರದಾಡುತ್ತಿದ್ದಾರೆ. ಚುನಾವಣೆ ಮುಗಿದರು ರಾಜ್ಯಕ್ಕೆ ಕಳುಹಿಸಿಕೊಟ್ಟಿಲ್ಲ. ಮೂರು ದಿನಗಳಿಂದ ಇಲ್ಲಿ ಪರದಾಡುತ್ತಿದ್ದೇವೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ, ತಮ್ಮನ್ನು ವಾಪಸ್ ಕಳುಹಿಸಿಕೊಡುವಂತೆ ಮನವಿ ಮಾಡಿದ್ದಾರೆ.

ಅಲ್ಲದೆ, ರಾಮನರಗ ಜಿಲ್ಲೆಯ 150ಕ್ಕೂ ಹೆಚ್ಚು ಹೋಮ್​ಗಾರ್ಡ್ ಮಧ್ಯಪ್ರದೇಶದಲ್ಲಿ ಸಿಲುಕಿಕೊಂಡಿದ್ದಾರೆ. ಇವರೆಲ್ಲರೂ ರಾಯಸೇನಾ ಜಿಲ್ಲೆಯಲ್ಲಿ ಇದ್ದು, ವಿಧಾನಸಭಾ ಚುನಾವಣೆ ಮುಗಿದು 3 ದಿನ ಕಳೆದರೂ ವಾಪಸ್ ಕಳಿಸಿಲ್ಲ. ಕೂಡಲೇ ರೈಲಿನ ವ್ಯವಸ್ಥೆ ಮಾಡಿ ರಾಜ್ಯಕ್ಕೆ ಕಳುಹಿಸುವಂತೆ ಪೊಲೀಸ್ ಇಲಾಖೆ ಹಾಗೂ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕರ್ನಾಟಕದ ಮೈಸೂರು, ಬೆಳಗಾವಿ, ರಾಯಚೂರು, ಬೆಳ್ತಂಗಡಿ, ಕಲಗುರಗಿ ಜಿಲ್ಲೆಗಳಿಂದಲೂ ಹೋಮ್​ಗಾರ್ಡ್​​ಗಳನ್ನು ಚುನಾವಣಾ ಕರ್ತವ್ಯಕ್ಕಾಗಿ ಕಳುಹಿಸಲಾಗಿತ್ತು. ಸದ್ಯ ನಾಲ್ಕು ಸಾವಿರ ಹೋಮ್​ಗಾರ್ಡ್​​ಗಳು ಮಧ್ಯಪ್ರದೇಶದಲ್ಲೇ ಪರದಾಡುವಂತಾಗಿದ್ದು, ಕೂಡಲೇ ಕರ್ನಾಟಕಕ್ಕೆ ಮರಳಲು ರೈಲಿನ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ