AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿ ವಸತಿ ಶಾಲೆಯಲ್ಲಿ ಅಗ್ನಿದುರಂತ ಕೇಸ್​ಗೆ ಟ್ವಿಸ್ಟ್​: ಅನುಮತಿ ಇಲ್ಲದೆ ವಿದ್ಯಾರ್ಥಿಗಳಿಗೆ ವಸತಿ

ಮಡಿಕೇರಿಯ ಕಾಟಿಕೇರಿ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದ್ದ ಅಗ್ನಿ ದುರಂತ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ದೆಹಲಿ‌ ಮೂಲದ‌ ಉದ್ಯಮಿ ನಡೆಸುತ್ತಿದ್ದ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ವಸತಿಗೆ ಸಂಬಂಧಿಸಿ ಅನುಮತಿಯನ್ನೇ ಪಡೆದಿರಲಿಲ್ಲ.ಪುರಾತನ ಮನೆಯಲ್ಲಿ ನಡೆಸಲಾಗುತ್ತಿದ್ದ ಈ ವಸತಿ ಶಾಲೆಯಲ್ಲಿ ಸಾಮರ್ಥ್ಯಕ್ಕೂ ಅಧಿಕ ವಿದ್ಯಾರ್ಥಿಗಳನ್ನ ದಾಖಲಿಸಿಕೊಳ್ಳಲಾಗಿತ್ತು ಎನ್ನಲಾಗಿದೆ.

ಮಡಿಕೇರಿ ವಸತಿ ಶಾಲೆಯಲ್ಲಿ ಅಗ್ನಿದುರಂತ ಕೇಸ್​ಗೆ ಟ್ವಿಸ್ಟ್​: ಅನುಮತಿ ಇಲ್ಲದೆ ವಿದ್ಯಾರ್ಥಿಗಳಿಗೆ ವಸತಿ
ಅಗ್ನಿ ದುರಂತ
Gopal AS
| Edited By: |

Updated on:Oct 10, 2025 | 1:48 PM

Share

ಮಡಿಕೇರಿ, ಅಕ್ಟೋಬರ್​ 10: ಕಾಟಿಕೇರಿ ಗ್ರಾಮದ ವಸತಿ ಶಾಲೆಯಲ್ಲಿ (Residential School ) ನಡೆದಿದ್ದ ಅಗ್ನಿ ದುರಂತ ಕೇಸ್​ಗೆ ಟ್ವಿಸ್ಟ್​ ಸಿಕ್ಕಿದೆ. ಅನುಮತಿಯನ್ನೇ ಪಡೆಯದೆ ವಸತಿ ಶಾಲೆ ನಡೆಸುತ್ತಿರೋ ವಿಷಯ ತನಿಖೆ ವೇಳೆ ಬೆಳಕಿಗೆ ಬಂದಿದ್ದು, ವಿದ್ಯಾರ್ಥಿಗಳ ವಸತಿಗೆ ಸಂಬಂಧಿಸಿ ಸ್ಥಳೀಯ ಗ್ರಾಮ ಪಂಚಾಯತ್​ ಅಥವಾ ಶಿಕ್ಷಣ ಇಲಾಖೆ ಅನುಮತಿಯನ್ನು ಶಾಲೆ ಪಡೆದಿರಲಿಲ್ಲ ಎಂಬ ವಿಷಯ ಗೊತ್ತಾಗಿದೆ. ದೆಹಲಿ‌ ಮೂಲದ‌ ಉದ್ಯಮಿ ಶಾಲೆ ನಡೆಸುತ್ತಿದ್ದರು ಎನ್ನಲಾಗಿದೆ.

ಪುರಾತನ ಮನೆಯಲ್ಲಿ ನಸಡೆಸಲಾಗುತ್ತಿದ್ದ ಈ ವಸತಿ ಶಾಲೆಯಲ್ಲಿ 102 ಮಕ್ಕಳಿಗೆ ಪ್ರವೇಶ ನೀಡಲಾಗಿತ್ತು. ಆ ಪೈಕಿ 70 ಮಕ್ಕಳು ಶಾಲೆಯಲ್ಲೇ ವಾಸ್ತವ್ಯ ಮಾಡುತ್ತಿದ್ದರು. ಕೇವಲ ನಾಲ್ಕು ಕೋಣೆ ಇರೋ ಮನೆಯಲ್ಲಿ ಮಕ್ಕಳಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದ್ದು, ಸಾಮರ್ಥ್ಯಕ್ಕೂ ಅಧಿಕ ವಿದ್ಯಾರ್ಥಿಗಳನ್ನ ದಾಖಲಿಸಿಕೊಳ್ಳಲಾಗಿತ್ತು. ಉಚಿತ ಶಿಕ್ಷಣದ ಹೆಸರಲ್ಲಿ ವಸತಿ ಶಾಲೆ ನಡೆಸಲಾಗುತ್ತಿದ್ದರೂ ಇಲ್ಲಿ ಮಕ್ಕಳಿಗೆ ವಸತಿ ನೀಡಲಾಗುತ್ತಿಲ್ಲ ಎಂದು ಶಾಲೆಯವರು ಶಿಕ್ಷಣ ಇಲಾಖೆಗೆ ದೃಢೀಕರಣ ನೀಡಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಮಡಿಕೇರಿ ವಸತಿ ಶಾಲೆಯಲ್ಲಿ ಅಗ್ನಿ ದುರಂತ: ಓರ್ವ ಸಾವು, 51 ಮಕ್ಕಳನ್ನ ರಕ್ಷಿಸಿದ್ದು ಇವರಿಬ್ಬರು

ನಿನ್ನೆ ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಶಾಲಾ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಘಟನೆಯಲ್ಲಿ ಓರ್ವ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಬಾಲಕರ ಸಮಯ ಪ್ರಜ್ಞೆಯಿಂದ 51 ಮಕ್ಕಳ ಜೀವ ಉಳಿದಿತ್ತು. ಹೊಗೆಯಿಂದ ಎಚ್ಚೆತ್ತಿದ್ದ ಬಾಲಕರಾದ ಬಬಿನ್ ಮತ್ತು ಯಶ್ವಿನ್, ತಕ್ಷಣವೇ ಕಿರುಚಾಡಿ ಎಲ್ಲಾ ಮಕ್ಕಳನ್ನ ಎಬ್ಬಿಸಿ ಬಾಗಿಲಿನತ್ತ ಓಡಿಸಿದ್ದರು. ಆದರೆ ಬಾಗಿಲು ತೆರೆದುಕೊಂಡಿಲ್ಲ. ಕಿಟಕಿಯ ಗಾಜನ್ನ ಒಡೆಯಲು ಯತ್ನಿಸಿದರೂ ಸಾಧ್ಯವಾಗಿರಲಿಲ್ಲ. ಹಾಗಾಗಿ ತಕ್ಷಣವೇ ಮತ್ತೊಂದು ಕೋಣೆಗೆ ಓಡಿ ಅಲ್ಲಿ ಕಿಟಗಿ ಬಾಗಿಲು ತೆರೆದು ಉಳಿದ ಮಕ್ಕಳನ್ನ ಹೊರಕ್ಕೆ ದಾಟಿಸಿದ್ದರು. ಆದರೆ ದುರದೃಷ್ಟವಶಾತ್ ಬಾಲಕ ಪುಷ್ಪಕ್​ ಮಾತ್ರ ಹೊರ ಬರಲಾರದೆ ಈ ವೇಳೆ ಸಾವನ್ನಪ್ಪಿದ್ದ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:18 pm, Fri, 10 October 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್