AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ST Reservation: ಮೀಸಲಾತಿ ಅಖಾಡಕ್ಕಿಳಿದ ಮತ್ತೊಂದು ಸಮುದಾಯ; ST ಮೀಸಲಾತಿ ಹೋರಾಟಕ್ಕೆ ಮಡಿವಾಳ ಸಮುದಾಯ ನಿರ್ಧಾರ

ST Reservation: ಡಾ.ಬಸವ ಮಾಚಿದೇವ ಸ್ವಾಮೀಜಿ ದೇಶದ 18 ರಾಜ್ಯಗಳು ಮೀಸಲಾತಿ ನೀಡಿದೆ. ಆದರೆ ನಮ್ಮ ರಾಜ್ಯದಲ್ಲಿ ಮಾತ್ರ ನಮಗೆ ಸವಲತ್ತು ಸಿಗುತ್ತಿಲ್ಲ. ನಮ್ಮ ಸಮುದಾಯದವರಿಗೆ ರಾಜಕೀಯ ಪ್ರಾಧಾನ್ಯತೆ ಸಿಕ್ಕಿಲ್ಲ. ಹೀಗಾಗಿ ಫೆಬ್ರವರಿ 24ರಂದು ಚಿತ್ರದುರ್ಗದಲ್ಲಿ ಸಭೆ ಮಾಡುತ್ತೇವೆ ಎಂದು ಹೇಳಿದರು.

ST Reservation: ಮೀಸಲಾತಿ ಅಖಾಡಕ್ಕಿಳಿದ ಮತ್ತೊಂದು ಸಮುದಾಯ; ST ಮೀಸಲಾತಿ ಹೋರಾಟಕ್ಕೆ ಮಡಿವಾಳ ಸಮುದಾಯ ನಿರ್ಧಾರ
ಸಭೆ ನಡೆಸಿದ ಡಾ. ಶ್ರೀ ಬಸವ ಮಾಚಿದೇವ ಸ್ವಾಮೀಜಿ
sandhya thejappa
| Edited By: |

Updated on: Feb 22, 2021 | 12:15 PM

Share

ಮೈಸೂರು: ಈಗಾಗಲೇ ಕುರುಬ ಸಮುದಾಯಕ್ಕೆ ಎಸ್​​ಟಿ (ST) ಮೀಸಲಾತಿ, ಪಂಚಮಸಾಲಿಗೆ 2ಎ ಮೀಸಲಾತಿ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಬೆನ್ನಲೇ ರಾಜ್ಯದಲ್ಲಿ ಮತ್ತೊಂದು ಸಮುದಾಯ ಮೀಸಲಾತಿಗಾಗಿ ಆಗ್ರಹಿಸಿ ಹೋರಾಟಕ್ಕೆ ಇಳಿಯಲು ಮುಂದಾಗಿದೆ. ಮಡಿವಾಳ ಸಮುದಾಯ ಎಸ್​ಟಿ ಮೀಸಲಾತಿಗಾಗಿ ಹೋರಾಟ ನಡೆಸಲು ನಿರ್ಧರಿಸಿದ್ದು,ಜಿಲ್ಲೆಯಲ್ಲಿ ಹೋರಾಟದ ರೂಪುರೇಷೆಗಳ ಬಗ್ಗೆ ಸಮುದಾಯದ ಮುಖಂಡರ ಸಭೆ ನಡೆದಿದೆ.  ಚಿತ್ರದುರ್ಗ ಮಡಿವಾಳ ಮಾಚಿದೇವ ಸಂಸ್ಥಾನ ಮಠದ ಡಾ. ಶ್ರೀ ಬಸವ ಮಾಚಿದೇವ ಸ್ವಾಮೀಜಿ ನೇತೃತ್ವದಲ್ಲಿ ಈ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಡಾ.ಬಸವ ಮಾಚಿದೇವ ಸ್ವಾಮೀಜಿ ಅವರು ದೇಶದ 18 ರಾಜ್ಯಗಳು ಮೀಸಲಾತಿ ನೀಡಿವೆ. ಆದರೆ ನಮ್ಮ ರಾಜ್ಯದಲ್ಲಿ ಮಾತ್ರ ನಮಗೆ ಸವಲತ್ತು ಸಿಗುತ್ತಿಲ್ಲ. ನಮ್ಮ ಸಮುದಾಯದವರಿಗೆ ರಾಜಕೀಯ ಪ್ರಾಧಾನ್ಯತೆ ಸಿಕ್ಕಿಲ್ಲ ಎಂದು ಅಭಿಪ್ರಾಯಪಟ್ಟರು. ಅಲ್ಲದೇ ಫೆಬ್ರವರಿ 24 ರಂದು ಚಿತ್ರದುರ್ಗದಲ್ಲಿ ಸಭೆ ಮಾಡುತ್ತೇವೆ. ನಡೆಯುವ ಸಭೆಯಲ್ಲಿ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚಿಸುತ್ತೇವೆ ಎಂದು ತಿಳಿಸಿದರು.

ಎಸ್​​ಟಿ ಮೀಸಲಾತಿ ನೀಡುವಂತೆ ಕಳೆದ 40 ವರ್ಷಗಳಿಂದ ಒತ್ತಾಯ ಮಾಡುತ್ತಲೇ ಇದ್ದೇವೆ. ಆದರೂ ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ.  ದೇಶದ ಸುಮಾರು ಹದಿನೆಂಟು ರಾಜ್ಯದಲ್ಲಿ ಮೀಸಲಾತಿ ನೀಡಿದೆ. ಆದರೆ ನಮ್ಮ ರಾಜ್ಯದಲ್ಲಿ ಸವಲತ್ತು ಸಿಗುತ್ತಿಲ್ಲ. ನಮ್ಮ ಸಮುದಾಯದಲ್ಲಿ ಯಾವೊಬ್ಬ ರಾಜಕಾರಣಿಯೂ ಇಲ್ಲ. ಒಬ್ಬ ಎಂಪಿ, ಎಂಎಲ್ಎ ಕೂಡಾ ಇಲ್ಲ. ರಾಜಕೀಯ ಪ್ರಾಧಾನ್ಯತೆ ಸಿಕ್ಕಿಲ್ಲ. ಈ ಹಿನ್ನೆಲೆ ಇದೆ ತಿಂಗಳ 24 ಕ್ಕೆ ಚಿತ್ರದುರ್ಗದಲ್ಲಿ ನಮ್ಮ ಸಮುದಾಯದ ಮುಖಂಡರು ಸಭೆ ನಡೆಸುತ್ತೇವೆ ಎಂದು ಡಾ. ಶ್ರೀ ಬಸವ ಮಾಚಿದೇವ ಸ್ವಾಮೀಜಿ ಹೇಳಿದರು.

ಪಂಚಮಸಾಲಿ ಹೋರಾಟ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ಕೂಡಲ ಸಂಗಮದ ಪಂಚಮಸಾಲಿ ಪೀಠದಿಂದ ಜನವರಿ 14 ರಂದು ಪಾದಯಾತ್ರೆ ಆರಂಭವಾಗಿದ್ದು, ಇದೀಗ ಬೆಂಗಳೂರಿಗೆ ಬಂದು ತಲುಪಿದೆ. ಅಲ್ಲದೇ ರಾಜ್ಯ ಸರ್ಕಾರಕ್ಕೆ ಪಂಚಮಸಾಲಿ ಸಮುದಾಯ 2ಎ ಮೀಸಲಾತಿ ನೀಡುವುದಕ್ಕೆ ಮಾರ್ಚ್ 4ರ ವರೆಗೆ ಗಡುವು ನೀಡಿದೆ. ಪ್ರವರ್ಗ 3ಬಿ ಯಿಂದ 2ಎ ಗೆ ಸೇರಿಸಬೇಕೆಂದು ಪಂಚಮಸಾಲಿ ಸಮುದಾಯ ಒತ್ತಾಯಿಸುತ್ತಿದೆ. ಉದ್ಯೋಗ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಸಮುದಾಯದ ಯುವ ಜನತೆಗೆ ಅನ್ಯಾಯವಾಗುತ್ತಿದೆ ಎಂದು ಹೇಳಿ  2ಎ ಮೀಸಲಾತಿ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ:

ಪಂಚಮಸಾಲಿ ಸಮಾವೇಶದಲ್ಲಿ ಸಿಎಂ BSY ವಿರುದ್ಧ ಯತ್ನಾಳ್​ ಗುಡುಗು.. ಹೈಕಮಾಂಡ್​ನಿಂದ ಬಂತು ಬುಲಾವ್

ಪಂಚಮಸಾಲಿ ಹೋರಾಟದ ಕುರಿತು ಸರ್ಕಾರದ ನಿಲುವು ತಿಳಿಸಲು ಮುರುಗೇಶ್ ನಿರಾಣಿ, ಸಿ.ಸಿ.ಪಾಟೀಲ್ ನಾಳೆ ಸುದ್ದಿಗೋಷ್ಠಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!