AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಟೆಲ್ ಬಾತ್​ರೂಂನಲ್ಲಿ ಮದರಸಾ ವಿದ್ಯಾರ್ಥಿ ಆತ್ಮಹತ್ಯೆ: ಮಗನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ ಪೋಷಕರು

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ರಂಗನಕೆರೆ ಮದರಸ ಹಾಸ್ಟೆಲ್​ನಲ್ಲಿ ರಾತ್ರಿ ವೇಳೆ ಬಾತ್​ರೂಂನಲ್ಲಿ ಮದರಸಾ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಸದ್ಯ ಮಗನ ಸಾವಿನ ಕುರಿತು ಪೋಷಕರು ಸಂಶಯ ವ್ಯಕ್ತಪಡಿಸಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸ್ಟೆಲ್ ಬಾತ್​ರೂಂನಲ್ಲಿ ಮದರಸಾ ವಿದ್ಯಾರ್ಥಿ ಆತ್ಮಹತ್ಯೆ: ಮಗನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ ಪೋಷಕರು
ಹಾಸ್ಟೆಲ್ ಬಾತ್​ರೂಂನಲ್ಲಿ ಮದರಸಾ ವಿದ್ಯಾರ್ಥಿ ಆತ್ಮಹತ್ಯೆ: ಮಗನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ ಪೋಷಕರುImage Credit source: Citizens for Justice and Peace
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Oct 14, 2024 | 6:50 PM

Share

ಉಡುಪಿ, ಅಕ್ಟೋಬರ್​ 14: ಹಾಸ್ಟೆಲ್ ಬಾತ್ರೂಮಿನಲ್ಲಿ ಮದರಸ ವಿದ್ಯಾರ್ಥಿ (student) ನೇಣಿಗೆ ಶರಣಾಗಿರುವಂತಹ ಘಟನೆ ಬ್ರಹ್ಮಾವರ ತಾಲೂಕಿನ ರಂಗನಕೆರೆ ಮದರಸ ಹಾಸ್ಟೆಲ್​ನಲ್ಲಿ ನಡೆದಿದೆ. ಸಿದ್ದಾಪುರ ಮೂಲದ ರಿಹಾನ್ ಬೇಗಮ್ ಎನ್ನುವವರ ಪುತ್ರ ಮಹಮ್ಮದ್ ಜಹೀದ್ (12) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಸದ್ಯ ಮಗನ ಸಾವಿನ ಕುರಿತು ತಾಯಿ ರಿಹಾನ ಬೇಗಂ ಸಂಶಯ ವ್ಯಕ್ತಪಡಿಸಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಮೃತ ಮಹಮ್ಮದ್ ಜಹೀದ್​​ ಕಳೆದ ನಾಲ್ಕು ತಿಂಗಳಿಂದ ಮದರಸ ಹಾಸ್ಟೆಲ್​ನಲ್ಲಿ ಉಳಿದುಕೊಂಡಿದ್ದ. ಹೇರಾಡಿ ಖಾಸಗಿ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾಭ್ಯಾಸ ಮಾಡಿಕೊಂಡಿದ್ದ. ರಜೆಯಲ್ಲಿ ಮನೆಗೆ ತೆರಳಿದ್ದ ಜಹೀದ್ ರಜೆ ಮುಗಿಸಿ ಹಾಸ್ಟೆಲ್​ ಮರಳಿದ್ದ. ರಾತ್ರಿ ವೇಳೆ ಮದರಸ ಹಾಸ್ಟೆಲ್ ಬಾತ್ರೂಮಿನಲ್ಲಿ ನೇಣಿಗೆ ಶರಣಾಗಿದ್ದಾನೆ.

ಎಂಡಿಎಂಎ ಕ್ರಿಸ್ಟಲ್, ಹಶಿಶ್ ಎಣ್ಣೆ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ

ಚಿಕ್ಕಮಗಳೂರು: ಎಂಡಿಎಂಎ ಕ್ರಿಸ್ಟಲ್, ಹಶಿಶ್ ಎಣ್ಣೆ ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರು ಸೆನ್ ಠಾಣೆಯ ಪೊಲೀಸರಿಂದ ದಾಳಿ ಮಾಡಿದ್ದು, 1,10,000 ಲಕ್ಷ ಮೌಲ್ಯದ ಹೆಚ್ಚು ಮೌಲ್ಯದ ಎಂಡಿಎಂಎ  ಮತ್ತು ಹಶಿಶ್ ಎಣ್ಣೆ ವಶಕ್ಕೆ ಪಡೆಯಲಾಗಿದೆ. ಚಿಕ್ಕಮಗಳೂರು ಮೂಲದ ನವಾಜ್, ಅಮೀದ್, ಯಾಕೂಬ್ ಬಂಧಿತ ಆರೋಪಿಗಳು.

ಇದನ್ನೂ ಓದಿ: ರಾಯಚೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ: ಮೂವರು ದುರ್ಮರಣ

ಮಾದಕ ಎಂಡಿಎಂಎ ಬೆಂಗಳೂರಿನಿಂದ ತಂದು ಮೂವರು ವ್ಯಕ್ತಿಗಳು ಮಾರಾಟ ಮಾಡುತ್ತಿದ್ದರು. ಚಿಕ್ಕಮಗಳೂರು ನಗರದ ಹೊರಹೊಲಯದ ಉಪ್ಪಳ್ಳಿ ಸಮೀಪದ ತಾವರೆಕೆರೆ ಬಳಿ ಮಾರಾಟ ಮಾಡುವ ವೇಳೆ ದಾಳಿ ಮಾಡಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು: ಓರ್ವ ಮಹಿಳೆ ಸಾವು, ಇಬ್ಬರಿಗೆ ಗಾಯ

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಮಹಿಳೆ ಸಾವನ್ನಪ್ಪಿದ್ದರೆ ಮತ್ತಿಬ್ಬರಿಗೆ ಗಾಯವಾಗಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಂಬಿಲ ನಡೆದಿದೆ. ಮಂಗಳೂರಿನ ಕೊಡಿಯಾಲುಬೈಲು‌ ನಿವಾಸಿ ಭಾಗೀರಥಿ(62) ಮೃತ ಮಹಿಳೆ.

ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಹಿಂದಿನ ಅಸಲಿ ಕಾರಣ ಬಹಿರಂಗ

ಬೆಳ್ತಂಗಡಿಯಿಂದ ಮಂಗಳೂರು ಕಡೆ ಕಾರು ಬರುತ್ತಿತ್ತು. ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಹೆದ್ದಾರಿಯಿಂದ 200ಮೀ ದೂರದ‌ ಅಡಿಕೆ ತೋಟಕ್ಕೆ ನುಗ್ಗಿದೆ. ಮಣ್ಣಿನ ದಿಬ್ಬವೊಂದರ ಮೇಲೆ ಪಲ್ಟಿಯಾಗಿ ಬಿದ್ದಿದೆ. ಬಂಟ್ವಾಳ ಸಂಚಾರಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮಹಿಳಾ ಮೀಸಲಾತಿಗೆ ಬಹುಮತ ಸಿಗದಿದ್ದಕ್ಕೆ ಸಂಸತ್​​ನಲ್ಲಿ ಎನ್​ಡಿಎ ಪ್ರತಿಭಟನೆ
ಮಹಿಳಾ ಮೀಸಲಾತಿಗೆ ಬಹುಮತ ಸಿಗದಿದ್ದಕ್ಕೆ ಸಂಸತ್​​ನಲ್ಲಿ ಎನ್​ಡಿಎ ಪ್ರತಿಭಟನೆ
ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ
ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ
ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಲಾಯರ್ ಹೇಳಿದ್ದಿಷ್ಟು
ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಲಾಯರ್ ಹೇಳಿದ್ದಿಷ್ಟು
ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ
ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ
ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್
ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ ಎಂದ BSY
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ ಎಂದ BSY
ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ
ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ
ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ
ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ
ಗಾಜಿಯಾಬಾದ್‌ನಲ್ಲಿ ಗುಡಿಸಲುಗಳು ಬೆಂಕಿಗಾಹುತಿ; ಪೆಟಾದಿಂದ ಪ್ರಾಣಿಗಳ ರಕ್ಷಣೆ
ಗಾಜಿಯಾಬಾದ್‌ನಲ್ಲಿ ಗುಡಿಸಲುಗಳು ಬೆಂಕಿಗಾಹುತಿ; ಪೆಟಾದಿಂದ ಪ್ರಾಣಿಗಳ ರಕ್ಷಣೆ
ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್
ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್