AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maha Shivaratri 2021: ಶಿವ ಶಿವಾ.. ಶಿವರಾತ್ರಿಗೆ ಇನ್ನೂ ಒಂದು ವಾರ ಇರುವಾಗಲೇ ರಣಬಿಸಿಲಿನ ಆರ್ಭಟ ಶುರು!

Shivaratri Festival 2021: ಶಿವರಾತ್ರಿಗೆ ಇನ್ನೂ ಒಂದು ವಾರ ಬಾಕಿ ಇದ್ದಾಗಲೇ ರಾಜ್ಯದಲ್ಲಿ‌ ಬಿಸಿಲ ಆರ್ಭಟ ಹೆಚ್ಚಾಗಿದೆ. ಶಿವ ಶಿವಾ! ರಸ್ತೆ ಮೇಲೆ ಕಾಲಿಡಲಾಗದಷ್ಟು ವಿಪರೀತವೆನಿಸುವ ಬಿಸಿಲು ಅದಾಗಲೇ ಕಾಲಿಟ್ಟಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.

Maha Shivaratri 2021: ಶಿವ ಶಿವಾ.. ಶಿವರಾತ್ರಿಗೆ ಇನ್ನೂ ಒಂದು ವಾರ ಇರುವಾಗಲೇ ರಣಬಿಸಿಲಿನ ಆರ್ಭಟ ಶುರು!
ಶಿವರಾತ್ರಿಗೂ ಮುಂಚೆ ಬಿಸಿಲಿನ ಆರ್ಭಟ
shruti hegde
| Edited By: ಸಾಧು ಶ್ರೀನಾಥ್​|

Updated on: Mar 09, 2021 | 2:23 PM

Share

ಬೆಂಗಳೂರು: ಸಾಮಾನ್ಯವಾಗಿ ಫೆಬ್ರವರಿಯಲ್ಲಿ ಶಿವರಾತ್ರಿ ಹಬ್ಬ ಬರುತ್ತದೆ. ಆದರೆ ಈ ಬಾರಿ ಮಾರ್ಚ್​ ತಿಂಗಳಿನಲ್ಲಿ ಬಂದಿದೆ. ಈ ಸಮಯದಲ್ಲಿ ವಿಪರೀತ ಚಳಿಯ ಕಾಲ. ಚಳಿ ಉಚ್ಛ್ರಾಯದಲ್ಲಿದ್ದು, ಅಂದು ಕೃಷ್ಣ ಪಕ್ಷದ ಕೊನೆಯ ದಿನವಾಗಿರುತ್ತದೆ. ಆಗ ಶಿವ ಶಿವಾ! ಅಂದರೆ ಚಳಿ ಹೊರಟುಹೋಗುತ್ತದೆ ಎಂಬುದು ಪ್ರತೀತಿ. ಗಮನಾರ್ಹವೆಂದರೆ ಈ ಬಾರಿಯ ಮಹಾ ಶಿವರಾತ್ರಿ ಇದೇ ತಿಂಗಳ ಮಾರ್ಚ್​ 11ನೇ ತಾರೀಕಿನಂದು ಬಂದಿದೆ. ಅಂದರೆ ನಾಳೆ ಅಲ್ಲ; ನಾಳಿದ್ದೇ ಶಿವರಾತ್ರಿ. ಆದರೆ, ಶಿವರಾತ್ರಿಗೆ ಇನ್ನೂ ಒಂದು ವಾರ ಬಾಕಿ ಇದ್ದಾಗಲೇ ರಾಜ್ಯದಲ್ಲಿ‌ ಬಿಸಿಲ ಆರ್ಭಟ ಹೆಚ್ಚಾಗಿದೆ. ಶಿವ ಶಿವಾ! ರಸ್ತೆ ಮೇಲೆ ಕಾಲಿಡಲಾಗದಷ್ಟು ವಿಪರೀತವೆನಿಸುವ ಬಿಸಿಲು ಅದಾಗಲೇ ಕಾಲಿಟ್ಟಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.

ಜನರು ರಸ್ತೆಗೆ ಕಾಲಿಡುತ್ತಿದ್ದಂತೆಯೇ ನೆತ್ತಿ ಸುಡುವಷ್ಟರ ಮಟ್ಟಿಗೆ ಬಿಸಿಲಿನ‌ ಜಳ ಆವರಿಸಿದೆ. ಕಲಬುರಗಿಯಲ್ಲಿ ಗರಿಷ್ಠ 37.6 ಸೇ.ಮಿ ತಾಪಮಾನ, ಕೊಪ್ಪಳದಲ್ಲಿ 36.5 ಸೆಂ.ಮೀ, ರಾಯಚೂರಿನಲ್ಲಿ 36.4 ಸೆಂ.ಮೀ, ವಿಜಯಪುರದಲ್ಲಿ 36 ಸೆಂ.ಮೀ, ಬೀದರ್​ನಲ್ಲಿ 35 ಸೆಂ.ಮೀ, ಬೆಂಗಳೂರು 33.5 ಸೆಂ.ಮೀ, ಶಿವಮೊಗ್ಗ 35 ಸೆಂ.ಮೀ, ಗದಗ 36 ಸೆಂ.ಮೀ ತಾಪಮಾನವಿದೆ. ಬೆಂಗಳೂರಿನಲ್ಲಿ ಇನ್ನು ಎರಡು ದಿನಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಲಿದ್ದು, ಗರಿಷ್ಠ 34 ಸೆಂ.ಮೀ‌ ತಾಪಮಾನಕ್ಕೆ ತಲುಪಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್​ ಪಾಟೀಲ್ ಹೇಳಿದ್ದಾರೆ.

ಪ್ರತಿ ಸಂವತ್ಸರದ ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷ ಚತುರ್ಥಿಯಂದು ಶಿವರಾತ್ರಿ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ. ಮಹಾ ಶಿವರಾತ್ರಿಯಂದು ಶಿವನ ಭಕ್ತರು, ಉಪವಾಸ ಕೈಗೊಳ್ಳುತ್ತಾರೆ. ಶಿವನ ಧ್ಯಾನ ಮಾಡುತ್ತಾರೆ. ಕೆಲವೆಡೆ ನದಿಯ ಅಂಚಿನ ಕಲ್ಲು ಬಂಡೆಯ ಮೇಲೆ ಕೂತು ಶಿವನ ನಾಮ ಸ್ಮರಣೆ ಮಾಡುವುದೂ ಉಂಟು. ಕಲ್ಲು ಬಂಡೆಯ ಮೇಲೆ ಕೂತು ಶಿವನ ಸ್ಮರಣೆ ಮಾಡುವ ಭಕ್ತರಿಗೆ ಈ ಉರಿ ಬಿಸಿಲು ಧ್ಯಾನಕ್ಕೆ ಭಂಗ ತರಬಹುದೇ ಎಂಬೆಲ್ಲಾ ಯೋಚನೆಗಳು ಭಕ್ತರಲ್ಲಿ ಮನೆ ಮಾಡಿದೆ.

ಇದನ್ನೂ ಓದಿ: Maha Shivaratri 2021: ಮಹಾಶಿವರಾತ್ರಿ ಆಚರಣೆಯ ಹುಟ್ಟು ಹೇಗಾಯ್ತು?: ಇಲ್ಲಿದೆ ಸಂಪೂರ್ಣ ಮಾಹಿತಿ

ಇದನ್ನೂ ಓದಿ: Maha Shivaratri 2021: ಶಿವರಾತ್ರಿ ಹಬ್ಬ ಹುಟ್ಟಿದ್ದೇಗೆ? ಏನನ್ನು ಅರ್ಪಿಸಿದರೆ ಪರಶಿವ ಒಲಿಯುತ್ತಾನೆ?

Follow Us
shruti hegde
shruti hegde
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ