AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ನಾಯಕರ ವಿಳಂಬ ನೀತಿಗೆ ಬೇಸತ್ತ ಮಹದಾಯಿ ಹೋರಾಟಗಾರರು: ರಾಜಕೀಯ ಪ್ರವೇಶ ಮೂಲಕ ತಕ್ಕ ಪ್ರತ್ಯುತ್ತರ

ಮಹದಾಯಿ ಯೋಜನೆ ಅನುಷ್ಠಾನದ ವಿಳಂಬ ನೀತಿಗೆ ಬೇಸತ್ತು ಮಹದಾಯಿ ಹೋರಾಟಗಾರರು ಚುನಾವಣಾ ಆಖಾಡಕ್ಕೆ ಇಳಿದಿದ್ದಾರೆ. ಈ ಮೂಲಕ ರಾಜಕೀಯ ಪಕ್ಷಗಳಿಗೆ ರಾಜಕೀಯದಿಂದಲೇ ಹೊಡೆತ ನೀಡಲು ಮುಂದಾಗಿದ್ದಾರೆ.

ರಾಜಕೀಯ ನಾಯಕರ ವಿಳಂಬ ನೀತಿಗೆ ಬೇಸತ್ತ ಮಹದಾಯಿ ಹೋರಾಟಗಾರರು: ರಾಜಕೀಯ ಪ್ರವೇಶ ಮೂಲಕ ತಕ್ಕ ಪ್ರತ್ಯುತ್ತರ
ಮಹದಾಯಿ ರೈತ ಸೇನಾ ಘಟಕದ ಮುಖಂಡ ವಿರೇಶ ಸೊಬರದಮಠ
ವಿವೇಕ ಬಿರಾದಾರ
|

Updated on:Apr 02, 2023 | 11:58 AM

Share

ಹುಬ್ಬಳ್ಳಿ: ಉತ್ತರ ಕರ್ನಾಟಕದ (North Karnataka) ಪ್ರಮುಖ ಜಿಲ್ಲೆಗಳಾದ ಧಾರವಾಡ (Dharwad), ಬೆಳಗಾವಿ (Belagavi), ಗದಗ (Gadag), ಬಾಗಲಕೋಟೆ (Bagalkote) ಜಿಲ್ಲೆಗಳಲ್ಲಿ ದಶಕಗಳಿಂದಲೂ ಮಹದಾಯಿ (Mahadayi) ನೀರಿಗಾಗಿ ಹೋರಾಟ ನಡೆಯುತ್ತಿದೆ. ದಶಕಗಳಿಂದ ಹೋರಾಟ ನಡೆಸಿಕೊಂಡು ಬಂದರೂ ಮಹದಾಯಿ ನೀರು ಸಮಸ್ಯೆ ಇನ್ನೂ ಬಗೆಹರದಿಲ್ಲ. ಹೀಗಾಗಿ ಮಹದಾಯಿ ಯೋಜನೆ ಅನುಷ್ಠಾನದ ವಿಳಂಬ ನೀತಿಗೆ ಬೇಸತ್ತು ಮಹದಾಯಿ ಹೋರಾಟಗಾರರು ಚುನಾವಣಾ ಆಖಾಡಕ್ಕೆ ಇಳಿದಿದ್ದಾರೆ. ಈ ಮೂಲಕ ರಾಜಕೀಯ ಪಕ್ಷಗಳಿಗೆ ರಾಜಕೀಯದಿಂದಲೇ ಹೊಡೆತ ನೀಡಲು ಮುಂದಾಗಿದ್ದಾರೆ. ಮಹದಾಯಿ ಅಚ್ಚುಕಟ್ಟು ಪ್ರದೇಶಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕ್ಷೇತ್ರಗಳಲ್ಲಿ ಹೋರಾಟಗಾರರು ಸ್ಪರ್ಧೆ ಮಾಡಲಿದ್ದಾರೆ. ನಾಲ್ಕೂ ಜಿಲ್ಲೆಯ ವಿಧಾನ‌ಸಭಾ ಕ್ಷೇತ್ರಗಳಲ್ಲಿ ಮಹದಾಯಿ ಹೋರಾಟಗಾರರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಮಹದಾಯಿ ರೈತ ಸೇನಾ ಘಟಕದ ಮುಖಂಡ ವಿರೇಶ ಸೊಬರದಮಠ ನೇತೃತ್ವದಲ್ಲಿ ಹೋರಾಟಗಾರರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ವಿರೇಶ ಸೊಬರದಮಠ ಬಂಡಾಯದ ನೆಲ ನರಗುಂದದಿಂದಲೇ ಚುನಾವಣೆಗೆ ನಿಲ್ಲಲ್ಲು ಸಜ್ಜಾಗಿದ್ದಾರೆ.

ಇದನ್ನೂ ಓದಿ: ಗದಗ ಜಿಲ್ಲೆಯ ಬಂಡಾಯದ ನಾಡಿನಲ್ಲಿ ನಡೆದ ಐತಿಹಾಸಿಕ ಹೋರಾಟಕ್ಕೆ ಕೊನೆಗೂ ಜಯ

ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿರೇಶ ಸೊಬರದಮಠ ನಾನು ನರಗುಂದ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಆದರೆ ಯಾವ ಪಕ್ಷದಿಂದ ಸ್ಪರ್ಧೆ ಮಾಡುತ್ತೇನೆ ಅನ್ನೋದನ್ನ ಚರ್ಚಿಸಿ ಅಂತಿಮ ಮಾಡುತ್ತೇನೆ ಎಂದು ಹೇಳಿದರು.

ಕಳೆದ ವರ್ಷ ಡಿಸೆಂಬರ್ 29 ರಂದು ಕೇಂದ್ರ ಜಲ ಆಯೋಗ ಮಹದಾಯಿ ಯೋಜನೆ ಡಿಪಿಆರ್​ಗೆ ಅನುಮೋದನೆ ನೀಡಿದೆ. ಅನುಮೋದನೆ ನೀಡಿದರು ಮಹದಾಯಿ ಕಾಮಗಾರಿಗೆ ಟೈಗರ್ ಕಾರಿಡಾರ್ ಅನುಮತಿ ಸಿಕ್ಕಿಲ್ಲ. ಅನುಮತಿ ಇಲ್ಲವಾದರೆ ಕಾಮಗಾರಿ ನಡೆಯುವುದು ಹೇಗೆ ಎಂದು ಮಹದಾಯಿ ಹೋರಾಟಗಾರರು ಪ್ರಶ್ನೆ ಮಾಡಿದ್ದಾರೆ. ಈ ನಡುವೆ ರಾಜ್ಯ ಸರ್ಕಾರ ಮಾರ್ಚ್ 29 ರಿಂದ ಟೆಂಡರ್ ಪ್ರಕ್ರಿಯೆ ಆರಂಭಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:53 am, Sun, 2 April 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ