Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ನಾಯಕರ ವಿಳಂಬ ನೀತಿಗೆ ಬೇಸತ್ತ ಮಹದಾಯಿ ಹೋರಾಟಗಾರರು: ರಾಜಕೀಯ ಪ್ರವೇಶ ಮೂಲಕ ತಕ್ಕ ಪ್ರತ್ಯುತ್ತರ

ಮಹದಾಯಿ ಯೋಜನೆ ಅನುಷ್ಠಾನದ ವಿಳಂಬ ನೀತಿಗೆ ಬೇಸತ್ತು ಮಹದಾಯಿ ಹೋರಾಟಗಾರರು ಚುನಾವಣಾ ಆಖಾಡಕ್ಕೆ ಇಳಿದಿದ್ದಾರೆ. ಈ ಮೂಲಕ ರಾಜಕೀಯ ಪಕ್ಷಗಳಿಗೆ ರಾಜಕೀಯದಿಂದಲೇ ಹೊಡೆತ ನೀಡಲು ಮುಂದಾಗಿದ್ದಾರೆ.

ರಾಜಕೀಯ ನಾಯಕರ ವಿಳಂಬ ನೀತಿಗೆ ಬೇಸತ್ತ ಮಹದಾಯಿ ಹೋರಾಟಗಾರರು: ರಾಜಕೀಯ ಪ್ರವೇಶ ಮೂಲಕ ತಕ್ಕ ಪ್ರತ್ಯುತ್ತರ
ಮಹದಾಯಿ ರೈತ ಸೇನಾ ಘಟಕದ ಮುಖಂಡ ವಿರೇಶ ಸೊಬರದಮಠ
Follow us
ವಿವೇಕ ಬಿರಾದಾರ
|

Updated on:Apr 02, 2023 | 11:58 AM

ಹುಬ್ಬಳ್ಳಿ: ಉತ್ತರ ಕರ್ನಾಟಕದ (North Karnataka) ಪ್ರಮುಖ ಜಿಲ್ಲೆಗಳಾದ ಧಾರವಾಡ (Dharwad), ಬೆಳಗಾವಿ (Belagavi), ಗದಗ (Gadag), ಬಾಗಲಕೋಟೆ (Bagalkote) ಜಿಲ್ಲೆಗಳಲ್ಲಿ ದಶಕಗಳಿಂದಲೂ ಮಹದಾಯಿ (Mahadayi) ನೀರಿಗಾಗಿ ಹೋರಾಟ ನಡೆಯುತ್ತಿದೆ. ದಶಕಗಳಿಂದ ಹೋರಾಟ ನಡೆಸಿಕೊಂಡು ಬಂದರೂ ಮಹದಾಯಿ ನೀರು ಸಮಸ್ಯೆ ಇನ್ನೂ ಬಗೆಹರದಿಲ್ಲ. ಹೀಗಾಗಿ ಮಹದಾಯಿ ಯೋಜನೆ ಅನುಷ್ಠಾನದ ವಿಳಂಬ ನೀತಿಗೆ ಬೇಸತ್ತು ಮಹದಾಯಿ ಹೋರಾಟಗಾರರು ಚುನಾವಣಾ ಆಖಾಡಕ್ಕೆ ಇಳಿದಿದ್ದಾರೆ. ಈ ಮೂಲಕ ರಾಜಕೀಯ ಪಕ್ಷಗಳಿಗೆ ರಾಜಕೀಯದಿಂದಲೇ ಹೊಡೆತ ನೀಡಲು ಮುಂದಾಗಿದ್ದಾರೆ. ಮಹದಾಯಿ ಅಚ್ಚುಕಟ್ಟು ಪ್ರದೇಶಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕ್ಷೇತ್ರಗಳಲ್ಲಿ ಹೋರಾಟಗಾರರು ಸ್ಪರ್ಧೆ ಮಾಡಲಿದ್ದಾರೆ. ನಾಲ್ಕೂ ಜಿಲ್ಲೆಯ ವಿಧಾನ‌ಸಭಾ ಕ್ಷೇತ್ರಗಳಲ್ಲಿ ಮಹದಾಯಿ ಹೋರಾಟಗಾರರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಮಹದಾಯಿ ರೈತ ಸೇನಾ ಘಟಕದ ಮುಖಂಡ ವಿರೇಶ ಸೊಬರದಮಠ ನೇತೃತ್ವದಲ್ಲಿ ಹೋರಾಟಗಾರರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ವಿರೇಶ ಸೊಬರದಮಠ ಬಂಡಾಯದ ನೆಲ ನರಗುಂದದಿಂದಲೇ ಚುನಾವಣೆಗೆ ನಿಲ್ಲಲ್ಲು ಸಜ್ಜಾಗಿದ್ದಾರೆ.

ಇದನ್ನೂ ಓದಿ: ಗದಗ ಜಿಲ್ಲೆಯ ಬಂಡಾಯದ ನಾಡಿನಲ್ಲಿ ನಡೆದ ಐತಿಹಾಸಿಕ ಹೋರಾಟಕ್ಕೆ ಕೊನೆಗೂ ಜಯ

ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿರೇಶ ಸೊಬರದಮಠ ನಾನು ನರಗುಂದ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಆದರೆ ಯಾವ ಪಕ್ಷದಿಂದ ಸ್ಪರ್ಧೆ ಮಾಡುತ್ತೇನೆ ಅನ್ನೋದನ್ನ ಚರ್ಚಿಸಿ ಅಂತಿಮ ಮಾಡುತ್ತೇನೆ ಎಂದು ಹೇಳಿದರು.

ಕಳೆದ ವರ್ಷ ಡಿಸೆಂಬರ್ 29 ರಂದು ಕೇಂದ್ರ ಜಲ ಆಯೋಗ ಮಹದಾಯಿ ಯೋಜನೆ ಡಿಪಿಆರ್​ಗೆ ಅನುಮೋದನೆ ನೀಡಿದೆ. ಅನುಮೋದನೆ ನೀಡಿದರು ಮಹದಾಯಿ ಕಾಮಗಾರಿಗೆ ಟೈಗರ್ ಕಾರಿಡಾರ್ ಅನುಮತಿ ಸಿಕ್ಕಿಲ್ಲ. ಅನುಮತಿ ಇಲ್ಲವಾದರೆ ಕಾಮಗಾರಿ ನಡೆಯುವುದು ಹೇಗೆ ಎಂದು ಮಹದಾಯಿ ಹೋರಾಟಗಾರರು ಪ್ರಶ್ನೆ ಮಾಡಿದ್ದಾರೆ. ಈ ನಡುವೆ ರಾಜ್ಯ ಸರ್ಕಾರ ಮಾರ್ಚ್ 29 ರಿಂದ ಟೆಂಡರ್ ಪ್ರಕ್ರಿಯೆ ಆರಂಭಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:53 am, Sun, 2 April 23

ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್