ರಾಜಕೀಯ ನಾಯಕರ ವಿಳಂಬ ನೀತಿಗೆ ಬೇಸತ್ತ ಮಹದಾಯಿ ಹೋರಾಟಗಾರರು: ರಾಜಕೀಯ ಪ್ರವೇಶ ಮೂಲಕ ತಕ್ಕ ಪ್ರತ್ಯುತ್ತರ

ಮಹದಾಯಿ ಯೋಜನೆ ಅನುಷ್ಠಾನದ ವಿಳಂಬ ನೀತಿಗೆ ಬೇಸತ್ತು ಮಹದಾಯಿ ಹೋರಾಟಗಾರರು ಚುನಾವಣಾ ಆಖಾಡಕ್ಕೆ ಇಳಿದಿದ್ದಾರೆ. ಈ ಮೂಲಕ ರಾಜಕೀಯ ಪಕ್ಷಗಳಿಗೆ ರಾಜಕೀಯದಿಂದಲೇ ಹೊಡೆತ ನೀಡಲು ಮುಂದಾಗಿದ್ದಾರೆ.

ರಾಜಕೀಯ ನಾಯಕರ ವಿಳಂಬ ನೀತಿಗೆ ಬೇಸತ್ತ ಮಹದಾಯಿ ಹೋರಾಟಗಾರರು: ರಾಜಕೀಯ ಪ್ರವೇಶ ಮೂಲಕ ತಕ್ಕ ಪ್ರತ್ಯುತ್ತರ
ಮಹದಾಯಿ ರೈತ ಸೇನಾ ಘಟಕದ ಮುಖಂಡ ವಿರೇಶ ಸೊಬರದಮಠ
Follow us
|

Updated on:Apr 02, 2023 | 11:58 AM

ಹುಬ್ಬಳ್ಳಿ: ಉತ್ತರ ಕರ್ನಾಟಕದ (North Karnataka) ಪ್ರಮುಖ ಜಿಲ್ಲೆಗಳಾದ ಧಾರವಾಡ (Dharwad), ಬೆಳಗಾವಿ (Belagavi), ಗದಗ (Gadag), ಬಾಗಲಕೋಟೆ (Bagalkote) ಜಿಲ್ಲೆಗಳಲ್ಲಿ ದಶಕಗಳಿಂದಲೂ ಮಹದಾಯಿ (Mahadayi) ನೀರಿಗಾಗಿ ಹೋರಾಟ ನಡೆಯುತ್ತಿದೆ. ದಶಕಗಳಿಂದ ಹೋರಾಟ ನಡೆಸಿಕೊಂಡು ಬಂದರೂ ಮಹದಾಯಿ ನೀರು ಸಮಸ್ಯೆ ಇನ್ನೂ ಬಗೆಹರದಿಲ್ಲ. ಹೀಗಾಗಿ ಮಹದಾಯಿ ಯೋಜನೆ ಅನುಷ್ಠಾನದ ವಿಳಂಬ ನೀತಿಗೆ ಬೇಸತ್ತು ಮಹದಾಯಿ ಹೋರಾಟಗಾರರು ಚುನಾವಣಾ ಆಖಾಡಕ್ಕೆ ಇಳಿದಿದ್ದಾರೆ. ಈ ಮೂಲಕ ರಾಜಕೀಯ ಪಕ್ಷಗಳಿಗೆ ರಾಜಕೀಯದಿಂದಲೇ ಹೊಡೆತ ನೀಡಲು ಮುಂದಾಗಿದ್ದಾರೆ. ಮಹದಾಯಿ ಅಚ್ಚುಕಟ್ಟು ಪ್ರದೇಶಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕ್ಷೇತ್ರಗಳಲ್ಲಿ ಹೋರಾಟಗಾರರು ಸ್ಪರ್ಧೆ ಮಾಡಲಿದ್ದಾರೆ. ನಾಲ್ಕೂ ಜಿಲ್ಲೆಯ ವಿಧಾನ‌ಸಭಾ ಕ್ಷೇತ್ರಗಳಲ್ಲಿ ಮಹದಾಯಿ ಹೋರಾಟಗಾರರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಮಹದಾಯಿ ರೈತ ಸೇನಾ ಘಟಕದ ಮುಖಂಡ ವಿರೇಶ ಸೊಬರದಮಠ ನೇತೃತ್ವದಲ್ಲಿ ಹೋರಾಟಗಾರರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ವಿರೇಶ ಸೊಬರದಮಠ ಬಂಡಾಯದ ನೆಲ ನರಗುಂದದಿಂದಲೇ ಚುನಾವಣೆಗೆ ನಿಲ್ಲಲ್ಲು ಸಜ್ಜಾಗಿದ್ದಾರೆ.

ಇದನ್ನೂ ಓದಿ: ಗದಗ ಜಿಲ್ಲೆಯ ಬಂಡಾಯದ ನಾಡಿನಲ್ಲಿ ನಡೆದ ಐತಿಹಾಸಿಕ ಹೋರಾಟಕ್ಕೆ ಕೊನೆಗೂ ಜಯ

ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿರೇಶ ಸೊಬರದಮಠ ನಾನು ನರಗುಂದ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಆದರೆ ಯಾವ ಪಕ್ಷದಿಂದ ಸ್ಪರ್ಧೆ ಮಾಡುತ್ತೇನೆ ಅನ್ನೋದನ್ನ ಚರ್ಚಿಸಿ ಅಂತಿಮ ಮಾಡುತ್ತೇನೆ ಎಂದು ಹೇಳಿದರು.

ಕಳೆದ ವರ್ಷ ಡಿಸೆಂಬರ್ 29 ರಂದು ಕೇಂದ್ರ ಜಲ ಆಯೋಗ ಮಹದಾಯಿ ಯೋಜನೆ ಡಿಪಿಆರ್​ಗೆ ಅನುಮೋದನೆ ನೀಡಿದೆ. ಅನುಮೋದನೆ ನೀಡಿದರು ಮಹದಾಯಿ ಕಾಮಗಾರಿಗೆ ಟೈಗರ್ ಕಾರಿಡಾರ್ ಅನುಮತಿ ಸಿಕ್ಕಿಲ್ಲ. ಅನುಮತಿ ಇಲ್ಲವಾದರೆ ಕಾಮಗಾರಿ ನಡೆಯುವುದು ಹೇಗೆ ಎಂದು ಮಹದಾಯಿ ಹೋರಾಟಗಾರರು ಪ್ರಶ್ನೆ ಮಾಡಿದ್ದಾರೆ. ಈ ನಡುವೆ ರಾಜ್ಯ ಸರ್ಕಾರ ಮಾರ್ಚ್ 29 ರಿಂದ ಟೆಂಡರ್ ಪ್ರಕ್ರಿಯೆ ಆರಂಭಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:53 am, Sun, 2 April 23

‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’