AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ನಾಯಕರ ವಿಳಂಬ ನೀತಿಗೆ ಬೇಸತ್ತ ಮಹದಾಯಿ ಹೋರಾಟಗಾರರು: ರಾಜಕೀಯ ಪ್ರವೇಶ ಮೂಲಕ ತಕ್ಕ ಪ್ರತ್ಯುತ್ತರ

ಮಹದಾಯಿ ಯೋಜನೆ ಅನುಷ್ಠಾನದ ವಿಳಂಬ ನೀತಿಗೆ ಬೇಸತ್ತು ಮಹದಾಯಿ ಹೋರಾಟಗಾರರು ಚುನಾವಣಾ ಆಖಾಡಕ್ಕೆ ಇಳಿದಿದ್ದಾರೆ. ಈ ಮೂಲಕ ರಾಜಕೀಯ ಪಕ್ಷಗಳಿಗೆ ರಾಜಕೀಯದಿಂದಲೇ ಹೊಡೆತ ನೀಡಲು ಮುಂದಾಗಿದ್ದಾರೆ.

ರಾಜಕೀಯ ನಾಯಕರ ವಿಳಂಬ ನೀತಿಗೆ ಬೇಸತ್ತ ಮಹದಾಯಿ ಹೋರಾಟಗಾರರು: ರಾಜಕೀಯ ಪ್ರವೇಶ ಮೂಲಕ ತಕ್ಕ ಪ್ರತ್ಯುತ್ತರ
ಮಹದಾಯಿ ರೈತ ಸೇನಾ ಘಟಕದ ಮುಖಂಡ ವಿರೇಶ ಸೊಬರದಮಠ
ವಿವೇಕ ಬಿರಾದಾರ
|

Updated on:Apr 02, 2023 | 11:58 AM

Share

ಹುಬ್ಬಳ್ಳಿ: ಉತ್ತರ ಕರ್ನಾಟಕದ (North Karnataka) ಪ್ರಮುಖ ಜಿಲ್ಲೆಗಳಾದ ಧಾರವಾಡ (Dharwad), ಬೆಳಗಾವಿ (Belagavi), ಗದಗ (Gadag), ಬಾಗಲಕೋಟೆ (Bagalkote) ಜಿಲ್ಲೆಗಳಲ್ಲಿ ದಶಕಗಳಿಂದಲೂ ಮಹದಾಯಿ (Mahadayi) ನೀರಿಗಾಗಿ ಹೋರಾಟ ನಡೆಯುತ್ತಿದೆ. ದಶಕಗಳಿಂದ ಹೋರಾಟ ನಡೆಸಿಕೊಂಡು ಬಂದರೂ ಮಹದಾಯಿ ನೀರು ಸಮಸ್ಯೆ ಇನ್ನೂ ಬಗೆಹರದಿಲ್ಲ. ಹೀಗಾಗಿ ಮಹದಾಯಿ ಯೋಜನೆ ಅನುಷ್ಠಾನದ ವಿಳಂಬ ನೀತಿಗೆ ಬೇಸತ್ತು ಮಹದಾಯಿ ಹೋರಾಟಗಾರರು ಚುನಾವಣಾ ಆಖಾಡಕ್ಕೆ ಇಳಿದಿದ್ದಾರೆ. ಈ ಮೂಲಕ ರಾಜಕೀಯ ಪಕ್ಷಗಳಿಗೆ ರಾಜಕೀಯದಿಂದಲೇ ಹೊಡೆತ ನೀಡಲು ಮುಂದಾಗಿದ್ದಾರೆ. ಮಹದಾಯಿ ಅಚ್ಚುಕಟ್ಟು ಪ್ರದೇಶಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕ್ಷೇತ್ರಗಳಲ್ಲಿ ಹೋರಾಟಗಾರರು ಸ್ಪರ್ಧೆ ಮಾಡಲಿದ್ದಾರೆ. ನಾಲ್ಕೂ ಜಿಲ್ಲೆಯ ವಿಧಾನ‌ಸಭಾ ಕ್ಷೇತ್ರಗಳಲ್ಲಿ ಮಹದಾಯಿ ಹೋರಾಟಗಾರರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಮಹದಾಯಿ ರೈತ ಸೇನಾ ಘಟಕದ ಮುಖಂಡ ವಿರೇಶ ಸೊಬರದಮಠ ನೇತೃತ್ವದಲ್ಲಿ ಹೋರಾಟಗಾರರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ವಿರೇಶ ಸೊಬರದಮಠ ಬಂಡಾಯದ ನೆಲ ನರಗುಂದದಿಂದಲೇ ಚುನಾವಣೆಗೆ ನಿಲ್ಲಲ್ಲು ಸಜ್ಜಾಗಿದ್ದಾರೆ.

ಇದನ್ನೂ ಓದಿ: ಗದಗ ಜಿಲ್ಲೆಯ ಬಂಡಾಯದ ನಾಡಿನಲ್ಲಿ ನಡೆದ ಐತಿಹಾಸಿಕ ಹೋರಾಟಕ್ಕೆ ಕೊನೆಗೂ ಜಯ

ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿರೇಶ ಸೊಬರದಮಠ ನಾನು ನರಗುಂದ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಆದರೆ ಯಾವ ಪಕ್ಷದಿಂದ ಸ್ಪರ್ಧೆ ಮಾಡುತ್ತೇನೆ ಅನ್ನೋದನ್ನ ಚರ್ಚಿಸಿ ಅಂತಿಮ ಮಾಡುತ್ತೇನೆ ಎಂದು ಹೇಳಿದರು.

ಕಳೆದ ವರ್ಷ ಡಿಸೆಂಬರ್ 29 ರಂದು ಕೇಂದ್ರ ಜಲ ಆಯೋಗ ಮಹದಾಯಿ ಯೋಜನೆ ಡಿಪಿಆರ್​ಗೆ ಅನುಮೋದನೆ ನೀಡಿದೆ. ಅನುಮೋದನೆ ನೀಡಿದರು ಮಹದಾಯಿ ಕಾಮಗಾರಿಗೆ ಟೈಗರ್ ಕಾರಿಡಾರ್ ಅನುಮತಿ ಸಿಕ್ಕಿಲ್ಲ. ಅನುಮತಿ ಇಲ್ಲವಾದರೆ ಕಾಮಗಾರಿ ನಡೆಯುವುದು ಹೇಗೆ ಎಂದು ಮಹದಾಯಿ ಹೋರಾಟಗಾರರು ಪ್ರಶ್ನೆ ಮಾಡಿದ್ದಾರೆ. ಈ ನಡುವೆ ರಾಜ್ಯ ಸರ್ಕಾರ ಮಾರ್ಚ್ 29 ರಿಂದ ಟೆಂಡರ್ ಪ್ರಕ್ರಿಯೆ ಆರಂಭಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:53 am, Sun, 2 April 23

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್