AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ನಾಯಕರ ವಿಳಂಬ ನೀತಿಗೆ ಬೇಸತ್ತ ಮಹದಾಯಿ ಹೋರಾಟಗಾರರು: ರಾಜಕೀಯ ಪ್ರವೇಶ ಮೂಲಕ ತಕ್ಕ ಪ್ರತ್ಯುತ್ತರ

ಮಹದಾಯಿ ಯೋಜನೆ ಅನುಷ್ಠಾನದ ವಿಳಂಬ ನೀತಿಗೆ ಬೇಸತ್ತು ಮಹದಾಯಿ ಹೋರಾಟಗಾರರು ಚುನಾವಣಾ ಆಖಾಡಕ್ಕೆ ಇಳಿದಿದ್ದಾರೆ. ಈ ಮೂಲಕ ರಾಜಕೀಯ ಪಕ್ಷಗಳಿಗೆ ರಾಜಕೀಯದಿಂದಲೇ ಹೊಡೆತ ನೀಡಲು ಮುಂದಾಗಿದ್ದಾರೆ.

ರಾಜಕೀಯ ನಾಯಕರ ವಿಳಂಬ ನೀತಿಗೆ ಬೇಸತ್ತ ಮಹದಾಯಿ ಹೋರಾಟಗಾರರು: ರಾಜಕೀಯ ಪ್ರವೇಶ ಮೂಲಕ ತಕ್ಕ ಪ್ರತ್ಯುತ್ತರ
ಮಹದಾಯಿ ರೈತ ಸೇನಾ ಘಟಕದ ಮುಖಂಡ ವಿರೇಶ ಸೊಬರದಮಠ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 02, 2023 | 11:58 AM

Share

ಹುಬ್ಬಳ್ಳಿ: ಉತ್ತರ ಕರ್ನಾಟಕದ (North Karnataka) ಪ್ರಮುಖ ಜಿಲ್ಲೆಗಳಾದ ಧಾರವಾಡ (Dharwad), ಬೆಳಗಾವಿ (Belagavi), ಗದಗ (Gadag), ಬಾಗಲಕೋಟೆ (Bagalkote) ಜಿಲ್ಲೆಗಳಲ್ಲಿ ದಶಕಗಳಿಂದಲೂ ಮಹದಾಯಿ (Mahadayi) ನೀರಿಗಾಗಿ ಹೋರಾಟ ನಡೆಯುತ್ತಿದೆ. ದಶಕಗಳಿಂದ ಹೋರಾಟ ನಡೆಸಿಕೊಂಡು ಬಂದರೂ ಮಹದಾಯಿ ನೀರು ಸಮಸ್ಯೆ ಇನ್ನೂ ಬಗೆಹರದಿಲ್ಲ. ಹೀಗಾಗಿ ಮಹದಾಯಿ ಯೋಜನೆ ಅನುಷ್ಠಾನದ ವಿಳಂಬ ನೀತಿಗೆ ಬೇಸತ್ತು ಮಹದಾಯಿ ಹೋರಾಟಗಾರರು ಚುನಾವಣಾ ಆಖಾಡಕ್ಕೆ ಇಳಿದಿದ್ದಾರೆ. ಈ ಮೂಲಕ ರಾಜಕೀಯ ಪಕ್ಷಗಳಿಗೆ ರಾಜಕೀಯದಿಂದಲೇ ಹೊಡೆತ ನೀಡಲು ಮುಂದಾಗಿದ್ದಾರೆ. ಮಹದಾಯಿ ಅಚ್ಚುಕಟ್ಟು ಪ್ರದೇಶಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕ್ಷೇತ್ರಗಳಲ್ಲಿ ಹೋರಾಟಗಾರರು ಸ್ಪರ್ಧೆ ಮಾಡಲಿದ್ದಾರೆ. ನಾಲ್ಕೂ ಜಿಲ್ಲೆಯ ವಿಧಾನ‌ಸಭಾ ಕ್ಷೇತ್ರಗಳಲ್ಲಿ ಮಹದಾಯಿ ಹೋರಾಟಗಾರರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಮಹದಾಯಿ ರೈತ ಸೇನಾ ಘಟಕದ ಮುಖಂಡ ವಿರೇಶ ಸೊಬರದಮಠ ನೇತೃತ್ವದಲ್ಲಿ ಹೋರಾಟಗಾರರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ವಿರೇಶ ಸೊಬರದಮಠ ಬಂಡಾಯದ ನೆಲ ನರಗುಂದದಿಂದಲೇ ಚುನಾವಣೆಗೆ ನಿಲ್ಲಲ್ಲು ಸಜ್ಜಾಗಿದ್ದಾರೆ.

ಇದನ್ನೂ ಓದಿ: ಗದಗ ಜಿಲ್ಲೆಯ ಬಂಡಾಯದ ನಾಡಿನಲ್ಲಿ ನಡೆದ ಐತಿಹಾಸಿಕ ಹೋರಾಟಕ್ಕೆ ಕೊನೆಗೂ ಜಯ

ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿರೇಶ ಸೊಬರದಮಠ ನಾನು ನರಗುಂದ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಆದರೆ ಯಾವ ಪಕ್ಷದಿಂದ ಸ್ಪರ್ಧೆ ಮಾಡುತ್ತೇನೆ ಅನ್ನೋದನ್ನ ಚರ್ಚಿಸಿ ಅಂತಿಮ ಮಾಡುತ್ತೇನೆ ಎಂದು ಹೇಳಿದರು.

ಕಳೆದ ವರ್ಷ ಡಿಸೆಂಬರ್ 29 ರಂದು ಕೇಂದ್ರ ಜಲ ಆಯೋಗ ಮಹದಾಯಿ ಯೋಜನೆ ಡಿಪಿಆರ್​ಗೆ ಅನುಮೋದನೆ ನೀಡಿದೆ. ಅನುಮೋದನೆ ನೀಡಿದರು ಮಹದಾಯಿ ಕಾಮಗಾರಿಗೆ ಟೈಗರ್ ಕಾರಿಡಾರ್ ಅನುಮತಿ ಸಿಕ್ಕಿಲ್ಲ. ಅನುಮತಿ ಇಲ್ಲವಾದರೆ ಕಾಮಗಾರಿ ನಡೆಯುವುದು ಹೇಗೆ ಎಂದು ಮಹದಾಯಿ ಹೋರಾಟಗಾರರು ಪ್ರಶ್ನೆ ಮಾಡಿದ್ದಾರೆ. ಈ ನಡುವೆ ರಾಜ್ಯ ಸರ್ಕಾರ ಮಾರ್ಚ್ 29 ರಿಂದ ಟೆಂಡರ್ ಪ್ರಕ್ರಿಯೆ ಆರಂಭಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:53 am, Sun, 2 April 23

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ