AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಂತೇಶ ಕವಟಗಿಮಠಗೆ ಕೊರೊನಾ ಪಾಸಿಟಿವ್; ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗಿಯಾದ ನಾಯಕರಿಗೆ ಶುರುವಾಯ್ತು ಆತಂಕ

Mahantesh Kavatagimath: ಏಪ್ರಿಲ್ 3ರಂದು ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಹಾಂತೇಶ ಭಾಗಿಯಾಗಿದ್ದರು. ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಪರ ಬೈಲಹೊಂಗಲ, ಸವದತ್ತಿ, ರಾಮದುರ್ಗದಲ್ಲಿ ಪ್ರಚಾರ ನಡೆಸಿದ್ದರು. ಇದರಿಂದಾಗಿ ಪ್ರಚಾರ ಸಭೆಯಲ್ಲಿ ಭಾಗಿಯಾಗಿದ್ದ ನಾಯಕರಿಗೂ ಕೂಡ ಆತಂಕ ಸೃಷ್ಟಿಯಾಗಿದೆ.

ಮಹಾಂತೇಶ ಕವಟಗಿಮಠಗೆ ಕೊರೊನಾ ಪಾಸಿಟಿವ್; ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗಿಯಾದ ನಾಯಕರಿಗೆ ಶುರುವಾಯ್ತು ಆತಂಕ
ಕಮಲ ಅರಳಿಸಲು ಬಿಜೆಪಿ ನಾಯಕರ ಪ್ರಚಾರ
preethi shettigar
| Edited By: |

Updated on:Apr 05, 2021 | 10:42 AM

Share

ಬೆಳಗಾವಿ: ವಿಧಾನಪರಿಷತ್ ಸರ್ಕಾರಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಫೇಸ್‌ಬುಕ್​ನಲ್ಲಿ ಪೋಸ್ಟ್ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನಿನ್ನೆ ಕೊವಿಡ್ ಟೆಸ್ಟ್ ಮಾಡಿಸಿದ ವೇಳೆ ಮಹಾಂತೇಶ ಅವರಿಗೆ ಸೋಂಕು ದೃಢಪಟ್ಟಿತ್ತು. ಸದ್ಯ ವೈದ್ಯರ ಸಲಹೆಯಂತೆ ಖಾಸಗಿ ಆಸ್ಪತ್ರೆಗೆ ಕವಟಗಿಮಠ ಅವರನ್ನು ದಾಖಲು ಮಾಡಲಾಗಿದೆ. ಇನ್ನು ಏಪ್ರಿಲ್ 3 ರಂದು ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಹಾಂತೇಶ ಭಾಗಿಯಾಗಿದ್ದರು. ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಪರ ಬೈಲಹೊಂಗಲ, ಸವದತ್ತಿ, ರಾಮದುರ್ಗದಲ್ಲಿ ಪ್ರಚಾರ ನಡೆಸಿದ್ದರು. ಇದರಿಂದಾಗಿ ಪ್ರಚಾರ ಸಭೆಯಲ್ಲಿ ಭಾಗಿಯಾಗಿದ್ದ ನಾಯಕರಿಗೂ ಕೂಡ ಆತಂಕ ಸೃಷ್ಟಿಯಾಗಿದೆ.

ಕೋಲಾರದ ಗಾರ್ಮೆಂಟ್ಸ್​ನ 33 ಉದ್ಯೋಗಿಗಳಲ್ಲಿ ಕೊರೊನಾ ಸೋಂಕು ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು ಹಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ವೇಗವಾಗಿ ಹಬ್ಬಲು ಆರಂಭಿಸಿದೆ. ಕೋಲಾರ ತಾಲ್ಲೂಕು ಬೆತ್ತನಿ ಗ್ರಾಮದ ಬಳಿ ಇರುವ ಶಾಹಿ ಗಾರ್ಮೆಂಟ್ಸ್​ನ 33 ಉದ್ಯೋಗಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾರ್ಮೆಂಟ್ಸ್​ನ ಒಟ್ಟು 900 ಜನರಿಗೆ ಕೊವಿಡ್​ ಟೆಸ್ಟ್​ ಮಾಡಿಸಲಾಗಿದ್ದು, ಆ ಪೈಕಿ 33 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ.

ಅನಾಥಾಶ್ರಮದ 27 ಮಕ್ಕಳಿಗೆ ಕೊರೊನಾ ಸೋಂಕು ಇನ್ನೊಂದೆಡೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅತ್ತಿಗಿರಿಕುಪ್ಪ ಬಳಿಯಿರುವ ಅನಾಥಾಶ್ರಮದ 27 ಮಕ್ಕಳಿಗೆ ಕೊವಿಡ್​ ಸೋಂಕು ದೃಢಪಟ್ಟಿದ್ದು, ಆತಂಕ ಮೂಡಿಸಿದೆ. ಅನಾಥಾಶ್ರಮದ ಒಬ್ಬ ವಿದ್ಯಾರ್ಥಿನಿಗೆ ಕೆಮ್ಮು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಲ್ಲಾ ಮಕ್ಕಳಿಗೂ ಕೊವಿಡ್ ಟೆಸ್ಟ್ ಮಾಡಿಸಲಾಗಿದೆ. ಬಜೇರಿಯಾ ಟ್ರಸ್ಟ್​ನಿಂದ ನಡೆಸುತ್ತಿರುವ ಅನಾಥಾಶ್ರಮದಲ್ಲಿ 60ಕ್ಕೂ ಹೆಚ್ಚು ಮಕ್ಕಳಿದ್ದು, ಆ ಪೈಕಿ 27 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಪಾಸಿಟಿವ್​ ಬಂದ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಆಶ್ರಮವನ್ನು ಕಂಟೈನ್ಮೆಂಟ್​ ಜೋನ್ ಮಾಡಿದ್ದಾರೆ.

ಇದನ್ನೂ ಓದಿ: 

ಕೊರೊನಾ ವಿರುದ್ಧ ಸೂಕ್ತ ನಡವಳಿಕೆಯ ಬಗ್ಗೆ ಏಪ್ರಿಲ್ 6ರಿಂದ 21ರವರೆಗೆ ಜಾಗೃತಿ ಅಭಿಯಾನ: ಪ್ರಧಾನಿ ನರೇಂದ್ರ ಮೋದಿ

Karnataka Covid-19 Update: ಕರ್ನಾಟಕದಲ್ಲಿ ಇಂದು 4,553 ಜನರಿಗೆ ಕೊರೊನಾ ದೃಢ; ಬೆಂಗಳೂರಲ್ಲಿ 2787 ಪ್ರಕರಣ ದಾಖಲು

Published On - 10:17 am, Mon, 5 April 21

Follow Us
preethi shettigar
preethi shettigar
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ