AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಂತೇಶ ಕವಟಗಿಮಠಗೆ ಕೊರೊನಾ ಪಾಸಿಟಿವ್; ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗಿಯಾದ ನಾಯಕರಿಗೆ ಶುರುವಾಯ್ತು ಆತಂಕ

Mahantesh Kavatagimath: ಏಪ್ರಿಲ್ 3ರಂದು ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಹಾಂತೇಶ ಭಾಗಿಯಾಗಿದ್ದರು. ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಪರ ಬೈಲಹೊಂಗಲ, ಸವದತ್ತಿ, ರಾಮದುರ್ಗದಲ್ಲಿ ಪ್ರಚಾರ ನಡೆಸಿದ್ದರು. ಇದರಿಂದಾಗಿ ಪ್ರಚಾರ ಸಭೆಯಲ್ಲಿ ಭಾಗಿಯಾಗಿದ್ದ ನಾಯಕರಿಗೂ ಕೂಡ ಆತಂಕ ಸೃಷ್ಟಿಯಾಗಿದೆ.

ಮಹಾಂತೇಶ ಕವಟಗಿಮಠಗೆ ಕೊರೊನಾ ಪಾಸಿಟಿವ್; ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗಿಯಾದ ನಾಯಕರಿಗೆ ಶುರುವಾಯ್ತು ಆತಂಕ
ಕಮಲ ಅರಳಿಸಲು ಬಿಜೆಪಿ ನಾಯಕರ ಪ್ರಚಾರ
preethi shettigar
| Edited By: |

Updated on:Apr 05, 2021 | 10:42 AM

Share

ಬೆಳಗಾವಿ: ವಿಧಾನಪರಿಷತ್ ಸರ್ಕಾರಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಫೇಸ್‌ಬುಕ್​ನಲ್ಲಿ ಪೋಸ್ಟ್ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನಿನ್ನೆ ಕೊವಿಡ್ ಟೆಸ್ಟ್ ಮಾಡಿಸಿದ ವೇಳೆ ಮಹಾಂತೇಶ ಅವರಿಗೆ ಸೋಂಕು ದೃಢಪಟ್ಟಿತ್ತು. ಸದ್ಯ ವೈದ್ಯರ ಸಲಹೆಯಂತೆ ಖಾಸಗಿ ಆಸ್ಪತ್ರೆಗೆ ಕವಟಗಿಮಠ ಅವರನ್ನು ದಾಖಲು ಮಾಡಲಾಗಿದೆ. ಇನ್ನು ಏಪ್ರಿಲ್ 3 ರಂದು ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಹಾಂತೇಶ ಭಾಗಿಯಾಗಿದ್ದರು. ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಪರ ಬೈಲಹೊಂಗಲ, ಸವದತ್ತಿ, ರಾಮದುರ್ಗದಲ್ಲಿ ಪ್ರಚಾರ ನಡೆಸಿದ್ದರು. ಇದರಿಂದಾಗಿ ಪ್ರಚಾರ ಸಭೆಯಲ್ಲಿ ಭಾಗಿಯಾಗಿದ್ದ ನಾಯಕರಿಗೂ ಕೂಡ ಆತಂಕ ಸೃಷ್ಟಿಯಾಗಿದೆ.

ಕೋಲಾರದ ಗಾರ್ಮೆಂಟ್ಸ್​ನ 33 ಉದ್ಯೋಗಿಗಳಲ್ಲಿ ಕೊರೊನಾ ಸೋಂಕು ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು ಹಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ವೇಗವಾಗಿ ಹಬ್ಬಲು ಆರಂಭಿಸಿದೆ. ಕೋಲಾರ ತಾಲ್ಲೂಕು ಬೆತ್ತನಿ ಗ್ರಾಮದ ಬಳಿ ಇರುವ ಶಾಹಿ ಗಾರ್ಮೆಂಟ್ಸ್​ನ 33 ಉದ್ಯೋಗಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾರ್ಮೆಂಟ್ಸ್​ನ ಒಟ್ಟು 900 ಜನರಿಗೆ ಕೊವಿಡ್​ ಟೆಸ್ಟ್​ ಮಾಡಿಸಲಾಗಿದ್ದು, ಆ ಪೈಕಿ 33 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ.

ಅನಾಥಾಶ್ರಮದ 27 ಮಕ್ಕಳಿಗೆ ಕೊರೊನಾ ಸೋಂಕು ಇನ್ನೊಂದೆಡೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅತ್ತಿಗಿರಿಕುಪ್ಪ ಬಳಿಯಿರುವ ಅನಾಥಾಶ್ರಮದ 27 ಮಕ್ಕಳಿಗೆ ಕೊವಿಡ್​ ಸೋಂಕು ದೃಢಪಟ್ಟಿದ್ದು, ಆತಂಕ ಮೂಡಿಸಿದೆ. ಅನಾಥಾಶ್ರಮದ ಒಬ್ಬ ವಿದ್ಯಾರ್ಥಿನಿಗೆ ಕೆಮ್ಮು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಲ್ಲಾ ಮಕ್ಕಳಿಗೂ ಕೊವಿಡ್ ಟೆಸ್ಟ್ ಮಾಡಿಸಲಾಗಿದೆ. ಬಜೇರಿಯಾ ಟ್ರಸ್ಟ್​ನಿಂದ ನಡೆಸುತ್ತಿರುವ ಅನಾಥಾಶ್ರಮದಲ್ಲಿ 60ಕ್ಕೂ ಹೆಚ್ಚು ಮಕ್ಕಳಿದ್ದು, ಆ ಪೈಕಿ 27 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಪಾಸಿಟಿವ್​ ಬಂದ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಆಶ್ರಮವನ್ನು ಕಂಟೈನ್ಮೆಂಟ್​ ಜೋನ್ ಮಾಡಿದ್ದಾರೆ.

ಇದನ್ನೂ ಓದಿ: 

ಕೊರೊನಾ ವಿರುದ್ಧ ಸೂಕ್ತ ನಡವಳಿಕೆಯ ಬಗ್ಗೆ ಏಪ್ರಿಲ್ 6ರಿಂದ 21ರವರೆಗೆ ಜಾಗೃತಿ ಅಭಿಯಾನ: ಪ್ರಧಾನಿ ನರೇಂದ್ರ ಮೋದಿ

Karnataka Covid-19 Update: ಕರ್ನಾಟಕದಲ್ಲಿ ಇಂದು 4,553 ಜನರಿಗೆ ಕೊರೊನಾ ದೃಢ; ಬೆಂಗಳೂರಲ್ಲಿ 2787 ಪ್ರಕರಣ ದಾಖಲು

Published On - 10:17 am, Mon, 5 April 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ