ಮಹಾಂತೇಶ ಕವಟಗಿಮಠಗೆ ಕೊರೊನಾ ಪಾಸಿಟಿವ್; ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗಿಯಾದ ನಾಯಕರಿಗೆ ಶುರುವಾಯ್ತು ಆತಂಕ

Mahantesh Kavatagimath: ಏಪ್ರಿಲ್ 3ರಂದು ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಹಾಂತೇಶ ಭಾಗಿಯಾಗಿದ್ದರು. ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಪರ ಬೈಲಹೊಂಗಲ, ಸವದತ್ತಿ, ರಾಮದುರ್ಗದಲ್ಲಿ ಪ್ರಚಾರ ನಡೆಸಿದ್ದರು. ಇದರಿಂದಾಗಿ ಪ್ರಚಾರ ಸಭೆಯಲ್ಲಿ ಭಾಗಿಯಾಗಿದ್ದ ನಾಯಕರಿಗೂ ಕೂಡ ಆತಂಕ ಸೃಷ್ಟಿಯಾಗಿದೆ.

ಮಹಾಂತೇಶ ಕವಟಗಿಮಠಗೆ ಕೊರೊನಾ ಪಾಸಿಟಿವ್; ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗಿಯಾದ ನಾಯಕರಿಗೆ ಶುರುವಾಯ್ತು ಆತಂಕ
ಕಮಲ ಅರಳಿಸಲು ಬಿಜೆಪಿ ನಾಯಕರ ಪ್ರಚಾರ
Follow us
| Updated By: Digi Tech Desk

Updated on:Apr 05, 2021 | 10:42 AM

ಬೆಳಗಾವಿ: ವಿಧಾನಪರಿಷತ್ ಸರ್ಕಾರಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಫೇಸ್‌ಬುಕ್​ನಲ್ಲಿ ಪೋಸ್ಟ್ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನಿನ್ನೆ ಕೊವಿಡ್ ಟೆಸ್ಟ್ ಮಾಡಿಸಿದ ವೇಳೆ ಮಹಾಂತೇಶ ಅವರಿಗೆ ಸೋಂಕು ದೃಢಪಟ್ಟಿತ್ತು. ಸದ್ಯ ವೈದ್ಯರ ಸಲಹೆಯಂತೆ ಖಾಸಗಿ ಆಸ್ಪತ್ರೆಗೆ ಕವಟಗಿಮಠ ಅವರನ್ನು ದಾಖಲು ಮಾಡಲಾಗಿದೆ. ಇನ್ನು ಏಪ್ರಿಲ್ 3 ರಂದು ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಹಾಂತೇಶ ಭಾಗಿಯಾಗಿದ್ದರು. ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಪರ ಬೈಲಹೊಂಗಲ, ಸವದತ್ತಿ, ರಾಮದುರ್ಗದಲ್ಲಿ ಪ್ರಚಾರ ನಡೆಸಿದ್ದರು. ಇದರಿಂದಾಗಿ ಪ್ರಚಾರ ಸಭೆಯಲ್ಲಿ ಭಾಗಿಯಾಗಿದ್ದ ನಾಯಕರಿಗೂ ಕೂಡ ಆತಂಕ ಸೃಷ್ಟಿಯಾಗಿದೆ.

ಕೋಲಾರದ ಗಾರ್ಮೆಂಟ್ಸ್​ನ 33 ಉದ್ಯೋಗಿಗಳಲ್ಲಿ ಕೊರೊನಾ ಸೋಂಕು ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು ಹಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ವೇಗವಾಗಿ ಹಬ್ಬಲು ಆರಂಭಿಸಿದೆ. ಕೋಲಾರ ತಾಲ್ಲೂಕು ಬೆತ್ತನಿ ಗ್ರಾಮದ ಬಳಿ ಇರುವ ಶಾಹಿ ಗಾರ್ಮೆಂಟ್ಸ್​ನ 33 ಉದ್ಯೋಗಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾರ್ಮೆಂಟ್ಸ್​ನ ಒಟ್ಟು 900 ಜನರಿಗೆ ಕೊವಿಡ್​ ಟೆಸ್ಟ್​ ಮಾಡಿಸಲಾಗಿದ್ದು, ಆ ಪೈಕಿ 33 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ.

ಅನಾಥಾಶ್ರಮದ 27 ಮಕ್ಕಳಿಗೆ ಕೊರೊನಾ ಸೋಂಕು ಇನ್ನೊಂದೆಡೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅತ್ತಿಗಿರಿಕುಪ್ಪ ಬಳಿಯಿರುವ ಅನಾಥಾಶ್ರಮದ 27 ಮಕ್ಕಳಿಗೆ ಕೊವಿಡ್​ ಸೋಂಕು ದೃಢಪಟ್ಟಿದ್ದು, ಆತಂಕ ಮೂಡಿಸಿದೆ. ಅನಾಥಾಶ್ರಮದ ಒಬ್ಬ ವಿದ್ಯಾರ್ಥಿನಿಗೆ ಕೆಮ್ಮು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಲ್ಲಾ ಮಕ್ಕಳಿಗೂ ಕೊವಿಡ್ ಟೆಸ್ಟ್ ಮಾಡಿಸಲಾಗಿದೆ. ಬಜೇರಿಯಾ ಟ್ರಸ್ಟ್​ನಿಂದ ನಡೆಸುತ್ತಿರುವ ಅನಾಥಾಶ್ರಮದಲ್ಲಿ 60ಕ್ಕೂ ಹೆಚ್ಚು ಮಕ್ಕಳಿದ್ದು, ಆ ಪೈಕಿ 27 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಪಾಸಿಟಿವ್​ ಬಂದ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಆಶ್ರಮವನ್ನು ಕಂಟೈನ್ಮೆಂಟ್​ ಜೋನ್ ಮಾಡಿದ್ದಾರೆ.

ಇದನ್ನೂ ಓದಿ: 

ಕೊರೊನಾ ವಿರುದ್ಧ ಸೂಕ್ತ ನಡವಳಿಕೆಯ ಬಗ್ಗೆ ಏಪ್ರಿಲ್ 6ರಿಂದ 21ರವರೆಗೆ ಜಾಗೃತಿ ಅಭಿಯಾನ: ಪ್ರಧಾನಿ ನರೇಂದ್ರ ಮೋದಿ

Karnataka Covid-19 Update: ಕರ್ನಾಟಕದಲ್ಲಿ ಇಂದು 4,553 ಜನರಿಗೆ ಕೊರೊನಾ ದೃಢ; ಬೆಂಗಳೂರಲ್ಲಿ 2787 ಪ್ರಕರಣ ದಾಖಲು

Published On - 10:17 am, Mon, 5 April 21

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್