AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ತಿಂಗಳಲ್ಲಿ 2 ಸೆಮಿಸ್ಟರ್ ಪರೀಕ್ಷೆ ವಿರೋಧಿಸಿ ಮಹಾರಾಣಿ ಕ್ಲಸ್ಟರ್ ವಿವಿ ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ

ಮಹಾರಾಣಿ ಕ್ಲಸ್ಟರ್ ವಿವಿ, ಸರ್ಕಾರದ ಆದೇಶಕ್ಕೂ ಮುನ್ನ ಪರೀಕ್ಷೆಗೆ ಮುಂದಾಗಿದ್ದು ಜುಲೈ 19ರಿಂದ ಪರೀಕ್ಷೆ ನಡೆಸಲಾಗುವುದೆಂದು ಸುತ್ತೋಲೆ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಮಹಾರಾಣಿ ಕ್ಲಸ್ಟರ್ ವಿವಿಯ ಆದೇಶವನ್ನು ತಳ್ಳಿ ಹಾಕಿದ್ದಾರೆ.

ಒಂದೇ ತಿಂಗಳಲ್ಲಿ 2 ಸೆಮಿಸ್ಟರ್ ಪರೀಕ್ಷೆ ವಿರೋಧಿಸಿ ಮಹಾರಾಣಿ ಕ್ಲಸ್ಟರ್ ವಿವಿ ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ
ಮಹಾರಾಣಿ ಕ್ಲಸ್ಟರ್ ವಿವಿ ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ
TV9 Web
| Updated By: ಆಯೇಷಾ ಬಾನು|

Updated on:Jul 14, 2021 | 12:30 PM

Share

ಬೆಂಗಳೂರು: ಮಹಾಮಾರಿ ಕೊರೊನಾದಿಂದಾಗಿ ಶೈಕ್ಷಣಿಕ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ರಾಜ್ಯದಲ್ಲಿ ಉನ್ನತ ಶಿಕ್ಷಣ ವ್ಯಾಸಂಗದ ಕನಿಷ್ಠ ಶೇ. 80ರಷ್ಟು ವಿದ್ಯಾರ್ಥಿಗಳಿಗಾದರೂ ಕೊವಿಡ್ ಲಸಿಕೆ ನೀಡಿ ಹಾಗೂ ಬಾಕಿ ಇರುವ ವಿವಿಧ ಸೆಮಿಸ್ಟರ್ ಪರೀಕ್ಷೆಗಳನ್ನು ಪೂರ್ಣಗೊಳಿಸಬೇಕು ಎಂಬ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಚಿಂತಿಸಿದೆ. ಆದ್ರೆ ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಮಹಾರಾಣಿ ಕ್ಲಸ್ಟರ್ ವಿವಿ ಎದುರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಒಂದೇ ತಿಂಗಳಲ್ಲಿ 2 ಸೆಮಿಸ್ಟರ್ ಪರೀಕ್ಷೆ ವಿರೋಧಿಸಿ ಧರಣಿಗೆ ಮುಂದಾಗಿದ್ದಾರೆ.

ಮಹಾರಾಣಿ ಕ್ಲಸ್ಟರ್ ವಿವಿ, ಸರ್ಕಾರದ ಆದೇಶಕ್ಕೂ ಮುನ್ನ ಪರೀಕ್ಷೆಗೆ ಮುಂದಾಗಿದ್ದು ಜುಲೈ 19ರಿಂದ ಪರೀಕ್ಷೆ ನಡೆಸಲಾಗುವುದೆಂದು ಸುತ್ತೋಲೆ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಮಹಾರಾಣಿ ಕ್ಲಸ್ಟರ್ ವಿವಿಯ ಆದೇಶವನ್ನು ತಳ್ಳಿ ಹಾಕಿದ್ದಾರೆ. ಕೂಡಲೇ ಸುತ್ತೋಲೆ ಹಿಂಪಡೆಯುವಂತೆ ಒತ್ತಾಯಿಸಿ ಧರಣಿ ನಡೆಸುತ್ತಿದ್ದಾರೆ. ಮಹಾರಾಣಿ ಕ್ಲಸ್ಟರ್ ವಿವಿಯ ಮುಂಭಾಗ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಗೂ ಆಫ್ ಲೈನ್ ಪರೀಕ್ಷೆ ರದ್ದತಿಗೆ ಒತ್ತಾಯಿಸಿದ್ದಾರೆ.

ಅನೇಕ ಕಾಲೇಜುಗಳಲ್ಲಿ ಲಸಿಕೆ ಕಾರ್ಯಕ್ರಮ ಪೂರ್ಣವಾಗಿಲ್ಲ. ಹೀಗಿರುವಾಗ ಆಫ್ ಲೈನ್ ತರಗತಿ, ಪರೀಕ್ಷೆ ನಡೆಸಬಾರದೆಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಒಂದೇ ಬಾರಿ 2 ಸೆಮಿಸ್ಟರ್ ಪರೀಕ್ಷೆ ಕೈಬಿಡುವಂತೆ ಒತ್ತಾಯಿಸಿ ಆಕ್ರೋಶ ಹೊರ ಹಾಕಿದ್ದಾರೆ. ಮಹಾರಾಣಿ ಕ್ಲಸ್ಟರ್ ವಿವಿ ಎದುರು ವಿದ್ಯಾರ್ಥಿನಿಯರು ನಡೆಸುತ್ತಿರುವ ಧರಣಿಗೆ AIDSO ವಿದ್ಯಾರ್ಥಿ ಸಂಘಟನೆ ಸಾಥ್ ಕೊಟ್ಟಿದೆ. Maharani cluster university

ಇದನ್ನೂ ಓದಿ: ಕಾಲೇಜುಗಳಿಗೆ ಕಂಟಕವಾದ ಕೊರೊನಾ.. ಕಿಟ್ ಧರಿಸಿ ಮಹಾರಾಣಿ ಕಾಲೇಜಿನಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯರು

Published On - 12:14 pm, Wed, 14 July 21

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು