AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ತಿಂಗಳಲ್ಲಿ 2 ಸೆಮಿಸ್ಟರ್ ಪರೀಕ್ಷೆ ವಿರೋಧಿಸಿ ಮಹಾರಾಣಿ ಕ್ಲಸ್ಟರ್ ವಿವಿ ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ

ಮಹಾರಾಣಿ ಕ್ಲಸ್ಟರ್ ವಿವಿ, ಸರ್ಕಾರದ ಆದೇಶಕ್ಕೂ ಮುನ್ನ ಪರೀಕ್ಷೆಗೆ ಮುಂದಾಗಿದ್ದು ಜುಲೈ 19ರಿಂದ ಪರೀಕ್ಷೆ ನಡೆಸಲಾಗುವುದೆಂದು ಸುತ್ತೋಲೆ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಮಹಾರಾಣಿ ಕ್ಲಸ್ಟರ್ ವಿವಿಯ ಆದೇಶವನ್ನು ತಳ್ಳಿ ಹಾಕಿದ್ದಾರೆ.

ಒಂದೇ ತಿಂಗಳಲ್ಲಿ 2 ಸೆಮಿಸ್ಟರ್ ಪರೀಕ್ಷೆ ವಿರೋಧಿಸಿ ಮಹಾರಾಣಿ ಕ್ಲಸ್ಟರ್ ವಿವಿ ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ
ಮಹಾರಾಣಿ ಕ್ಲಸ್ಟರ್ ವಿವಿ ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ
TV9 Web
| Edited By: |

Updated on:Jul 14, 2021 | 12:30 PM

Share

ಬೆಂಗಳೂರು: ಮಹಾಮಾರಿ ಕೊರೊನಾದಿಂದಾಗಿ ಶೈಕ್ಷಣಿಕ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ರಾಜ್ಯದಲ್ಲಿ ಉನ್ನತ ಶಿಕ್ಷಣ ವ್ಯಾಸಂಗದ ಕನಿಷ್ಠ ಶೇ. 80ರಷ್ಟು ವಿದ್ಯಾರ್ಥಿಗಳಿಗಾದರೂ ಕೊವಿಡ್ ಲಸಿಕೆ ನೀಡಿ ಹಾಗೂ ಬಾಕಿ ಇರುವ ವಿವಿಧ ಸೆಮಿಸ್ಟರ್ ಪರೀಕ್ಷೆಗಳನ್ನು ಪೂರ್ಣಗೊಳಿಸಬೇಕು ಎಂಬ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಚಿಂತಿಸಿದೆ. ಆದ್ರೆ ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಮಹಾರಾಣಿ ಕ್ಲಸ್ಟರ್ ವಿವಿ ಎದುರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಒಂದೇ ತಿಂಗಳಲ್ಲಿ 2 ಸೆಮಿಸ್ಟರ್ ಪರೀಕ್ಷೆ ವಿರೋಧಿಸಿ ಧರಣಿಗೆ ಮುಂದಾಗಿದ್ದಾರೆ.

ಮಹಾರಾಣಿ ಕ್ಲಸ್ಟರ್ ವಿವಿ, ಸರ್ಕಾರದ ಆದೇಶಕ್ಕೂ ಮುನ್ನ ಪರೀಕ್ಷೆಗೆ ಮುಂದಾಗಿದ್ದು ಜುಲೈ 19ರಿಂದ ಪರೀಕ್ಷೆ ನಡೆಸಲಾಗುವುದೆಂದು ಸುತ್ತೋಲೆ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಮಹಾರಾಣಿ ಕ್ಲಸ್ಟರ್ ವಿವಿಯ ಆದೇಶವನ್ನು ತಳ್ಳಿ ಹಾಕಿದ್ದಾರೆ. ಕೂಡಲೇ ಸುತ್ತೋಲೆ ಹಿಂಪಡೆಯುವಂತೆ ಒತ್ತಾಯಿಸಿ ಧರಣಿ ನಡೆಸುತ್ತಿದ್ದಾರೆ. ಮಹಾರಾಣಿ ಕ್ಲಸ್ಟರ್ ವಿವಿಯ ಮುಂಭಾಗ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಗೂ ಆಫ್ ಲೈನ್ ಪರೀಕ್ಷೆ ರದ್ದತಿಗೆ ಒತ್ತಾಯಿಸಿದ್ದಾರೆ.

ಅನೇಕ ಕಾಲೇಜುಗಳಲ್ಲಿ ಲಸಿಕೆ ಕಾರ್ಯಕ್ರಮ ಪೂರ್ಣವಾಗಿಲ್ಲ. ಹೀಗಿರುವಾಗ ಆಫ್ ಲೈನ್ ತರಗತಿ, ಪರೀಕ್ಷೆ ನಡೆಸಬಾರದೆಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಒಂದೇ ಬಾರಿ 2 ಸೆಮಿಸ್ಟರ್ ಪರೀಕ್ಷೆ ಕೈಬಿಡುವಂತೆ ಒತ್ತಾಯಿಸಿ ಆಕ್ರೋಶ ಹೊರ ಹಾಕಿದ್ದಾರೆ. ಮಹಾರಾಣಿ ಕ್ಲಸ್ಟರ್ ವಿವಿ ಎದುರು ವಿದ್ಯಾರ್ಥಿನಿಯರು ನಡೆಸುತ್ತಿರುವ ಧರಣಿಗೆ AIDSO ವಿದ್ಯಾರ್ಥಿ ಸಂಘಟನೆ ಸಾಥ್ ಕೊಟ್ಟಿದೆ. Maharani cluster university

ಇದನ್ನೂ ಓದಿ: ಕಾಲೇಜುಗಳಿಗೆ ಕಂಟಕವಾದ ಕೊರೊನಾ.. ಕಿಟ್ ಧರಿಸಿ ಮಹಾರಾಣಿ ಕಾಲೇಜಿನಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯರು

Published On - 12:14 pm, Wed, 14 July 21

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!